Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಣಬಿಸಿಲಿನ ಹೊಡೆತಕ್ಕೆ ತತ್ತರಿಸಿದ ಕಲಬುರಗಿ : ಆರೆಂಜ್ ಅಲಟ್೯ ಘೋಷಣೆ
ಕರ್ನಾಟಕಪ್ರಮುಖ

ರಣಬಿಸಿಲಿನ ಹೊಡೆತಕ್ಕೆ ತತ್ತರಿಸಿದ ಕಲಬುರಗಿ : ಆರೆಂಜ್ ಅಲಟ್೯ ಘೋಷಣೆ

Share
1 Min Read
SHARE

https://youtube.com/shorts/EOt-aJYYg5k?si=DmDCY_9WwqDDfAlH

newsics.com

ಕಲಬುರಗಿ: ಜಿಲ್ಲೆಯಲ್ಲಿ ದಿನೇದಿನೆ ಬಿಸಿಲಿನ ತಾಪಮಾನ ಏರುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಜನರು ಮನೆಗಳಿಂದ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ. ಕಟ್ಟಡ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ದುಡಿಯುವ ವರ್ಗ ಬಿಸಿಲಿನ ಝಳಕ್ಕೆ ತತ್ತರಿಸಿದೆ. ಜಿಲ್ಲೆಯಲ್ಲಿ ಬರೋಬ್ಬರಿ 44 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಬಿಸಿಲೂರು ಎಂದೇ ಎಂದು ಹೆಸರಾಗಿರುವ ಕಲಬುರಗಿ ಜಿಲ್ಲೆಯಲ್ಲಿ ಇದೇ ವಾರದಲ್ಲಿ ಹೆಚ್ಚಿನ ತಾಪಮಾನ ದಾಖಲಾಗಿದೆ. ಹೀಗಾಗಿ ಬಿಸಿಲಿನ ಝಳಕ್ಕೆ ಕೆಲಸಕ್ಕೆ ಹೋಗುವ ಜನರು ಭಯಭೀತಗೊಂಡಿದ್ದಾರೆ. ಬಿರು ಬಿಸಿಲಿನ ಹೊಡೆತಕ್ಕೆ ಸರ್ಕಾರಿ ಕಚೇರಿಯ ಸಮಯದಲ್ಲಿಯೂ ಸಹ ಬದಲಾವಣೆ ಮಾಡಲಾಗಿದೆ. ಆದರೆ ಜನ ಮಾತ್ರ ಪಾರ್ಕ್​​ಗಳಲ್ಲಿನ ಗಿಡ ಮರಗಳ ನೆರಳಿನ ಆಶ್ರಯ ಪಡೆಯುತ್ತಿದ್ದಾರೆ.

ಔರಾದನಲ್ಲಿ 45 ಡಿಗ್ರಿ ಸೆಲ್ಸಿಯಸ್, ಚಿಂಚೋಳಿ ತಾಲೂಕಿನ ಐನಾಪೂರದಲ್ಲಿ 44 ಡಿಗ್ರಿ ಸೆಲ್ಸಿಯಸ್, ಅಫಜಲಪುರ ತಾಲೂಕಿನ ಆನೂರ್​ನಲ್ಲಿ 44 ಸೆಲ್ಸಿಯಸ್, ಆಳಂದ ತಾಲೂಕಿನ ಮಾದನಹಿಪ್ಪರಗಾದಲ್ಲಿ 44 ಡಿಗ್ರಿ ಸೆಲ್ಸಿಯಸ್ ಹೀಗೆ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಹೆಚ್ಚಿನ ತಾಪಮಾನ ದಾಖಲಾಗ್ತಿದೆ.

ಜಿಲ್ಲೆಯಲ್ಲಿ ಬಿಸಿಲಿನ ತಾಪದಿಂದ ಕೆಲವು ದಿನ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಮಧ್ಯಾಹ್ನ 12 ರಿಂದ 4 ಗಂಟೆಯವರೆಗೂ ಮನೆಯಿಂದ ಹೊರಹೋಗುವುದನ್ನು ತಪ್ಪಿಸಬೇಕಿದೆ‌. ಬಿಸಿ ಗಾಳಿ ಬೀಸುತ್ತಿರುವ ಹಿನ್ನಲೆ ಈಗಾಗಲೇ ಆರೇಂಜ್ ಅಲಟ್೯ ಘೋಷಣೆ ಸಹ ಮಾಡಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಂ ಆದೇಶ ಹೊರಡಿಸಿದ್ದಾರೆ.

ಬಿಸಿಲಿನ ಪರಿಣಾಮ ಆರೋಗ್ಯದ ಮೇಲೂ ಗಂಭಿರ ಪರಿಣಾಮ ಬೀರುವ ಸಾಧ್ಯತೆ ಇದೆ. ಅದರಲ್ಲೂ ಚಿಕ್ಕ ಮಕ್ಕಳು ಹಾಗೂ ವಯೋವೃದ್ಧರಲ್ಲಿ ಡಿಹೈಡ್ರೇಶನ್ ಉಂಟಾಗಿ ವಾಂತಿ, ಭೇದಿ ಸೇರಿದಂತೆ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

https://www.newsics.com/2026/04/17/date-fixed-for-the-start-of-the-sarigamapa-little-champs-show/

TAGGED:Kalaburagi reels under the onslaught of the monsoon: Orange Alert declared
Share This Article
Facebook Twitter Copy Link Print
Previous Article ಸರಿಗಮಪ ಲಿಟಲ್ ಚಾಂಪ್ಸ್ ಶೋ ಆರಂಭಕ್ಕೆ ಡೇಟ್ ಫಿಕ್ಸ್
Next Article ಕ್ಷೇತ್ರ ಪುನರ್‌ವಿಂಗಡಣೆಯಿಂದ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 42ಕ್ಕೆ ಏರಿಕೆ : ಅಮಿತ್ ಶಾ ಘೋಷಣೆ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?