Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Vinay Kulkarni ಜೀವಾವಧಿ ಶಿಕ್ಷೆಗೆ ಗುರಿಯಾದ 2ನೇ ರಾಜಕಾರಣಿ ವಿನಯ್ ಕುಲಕರ್ಣಿ, ರಾಜ್ಯದ ಯಾವ್ಯಾವ ಜನಪ್ರತಿನಿಧಿಗಳಿಗೆ ಶಿಕ್ಷೆ?
ಕರ್ನಾಟಕದೇಶಪ್ರಮುಖ

Vinay Kulkarni ಜೀವಾವಧಿ ಶಿಕ್ಷೆಗೆ ಗುರಿಯಾದ 2ನೇ ರಾಜಕಾರಣಿ ವಿನಯ್ ಕುಲಕರ್ಣಿ, ರಾಜ್ಯದ ಯಾವ್ಯಾವ ಜನಪ್ರತಿನಿಧಿಗಳಿಗೆ ಶಿಕ್ಷೆ?

Share
2 Min Read
SHARE

newsics.com

ಬೆಂಗಳೂರು: ಕರ್ನಾಟಕದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳ ಪೈಕಿ ವಿನಯ್ ಕುಲಕರ್ಣಿ 2 ನೇಯವರು. ಇನ್ನೂ ಅಧಿಕಾರದಲ್ಲಿದ್ದಾಗಲೇ ಜೀವಾವಧಿ ಶಿಕ್ಷೆಯಾಗಿದ್ದು ಇದೇ ಮೊದಲು.ಈ ಹಿಂದೆ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಸಂಸದರಾಗಿದ್ದಾಗ ಬಂಧನವಾಗಿದ್ದ ಪ್ರಜ್ವಲ್‌ ರೇವಣ್ಣ ಅವರಿಗೆ ಅವರ ಅಧಿಕಾರಾವಧಿ ಮುಗಿದ ಬಳಿಕ (ಬಂಧನವಾಗಿ 1 ವರ್ಷದ ನಂತರ) ಜನಪ್ರತಿನಿಧಿಗಳ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿತ್ತು. ಸದ್ಯ ಅವರು ಜೈಲಿನಲ್ಲಿದ್ದಾರೆ.

ಇನ್ನು ವಿನಯ್ ಕುಲಕರ್ಣಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಿದ್ದಾಗ (2016 ಜೂನ್‌) ಯೋಗೀಶ್‌ ಕೊಲೆ ನಡೆದಿತ್ತು. ಆ ಕೊಲೆಗೆ ಸಂಬಂಧಿಸಿದಂತೆ 2020 ರಲ್ಲಿ ವಿನಯ್ ಕುಲಕರ್ಣಿಯವರ ಬಂಧನವೂ ಆಗಿತ್ತು. ಜಾಮೀನಿನ ಮೇಲೆ ಹೊರಗಿದ್ದ ವಿನಯ್ 2023 ರಲ್ಲಿ ಶಾಸಕರಾಗಿಯೂ ಆಯ್ಕೆಯಾಗಿದ್ದರು. ಸದ್ಯ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ಈ ಮೂಲಕ ಅಧಿಕಾರದಲ್ಲಿದ್ದಾಗಲೇ ಜೀವಾವಧಿ ಶಿಕ್ಷೆಗೆ ಗುರಿಯಾದ ಮೊದಲ ಜನಪ್ರತಿನಿಧಿ ವಿನಯ್ ಆಗಿದ್ದಾರೆ.

ಕ್ರಿಮಿನಲ್ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳು

  • ಸತೀಶ್ ಸೈಲ್ (ಕಾರವಾರದ ಶಾಸಕ): ಬೆಲೇಕೇರಿ ಅಕ್ರಮ ಅದಿರು ಸಾಗಾಣಿಕೆ ಪ್ರಕರಣದಲ್ಲಿ ಇತ್ತೀಚೆಗೆ (ಅಕ್ಟೋಬರ್ 2024) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇವರನ್ನು ದೋಷಿ ಎಂದು ತೀರ್ಪು ನೀಡಿದ್ದು, 7 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ಕೋಟ್ಯಂತರ ರೂಪಾಯಿ ದಂಡ ವಿಧಿಸಿತ್ತು. ಸದ್ಯ ಉನ್ನತ ನ್ಯಾಯಾಲಯಕ್ಕೆ (ಹೈಕೋರ್ಟ್‌) ಹೋಗಿ ತೀರ್ಪಿಗೆ ತಡೆ ತಂದು ಜಾಮೀನಿನಲ್ಲಿದ್ದಾರೆ. ಶಾಸಕರಾಗಿಯೂ ಮುಂದುವರೆದಿದ್ದಾರೆ.
  • ವೈ. ಸಂಪಂಗಿ (ಕೆ.ಜಿ.ಎಫ್ ಮಾಜಿ ಶಾಸಕ): ಲಂಚ ಪ್ರಕರಣದಲ್ಲಿ ನ್ಯಾಯಾಲಯವು 3.5 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಭ್ರಷ್ಟಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ರಾಜ್ಯದ ಮೊದಲ ಶಾಸಕ ಇವರಾಗಿದ್ದರು. ಆ ನಂತರ ಉನ್ನತ ನ್ಯಾಯಾಲಯದ ಮೊರೆ ಹೋಗಿ ಬಿಡುಗಡೆಯಾಗಿದ್ದರು.

ಗಂಭೀರ ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿರುವ ನಾಯಕರು

  • ಗಾಲಿ ಜನಾರ್ದನ ರೆಡ್ಡಿ (ಶಾಸಕ ಹಾಗೂ ಮಾಜಿ ಸಚಿವ): ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಈ ಆದೇಶಕ್ಕೆ ತೆಲಂಗಾಣ ಹೈಕೋರ್ಟ್‌ ತಡೆ ನೀಡಿದೆ. ಜತೆಗೆ ಬೆಲೆಕೇರಿ ಬಂದರು ಅಕ್ರಮ ಅದಿರು ರಫ್ತು ಪ್ರಕರಣ, ಅಕ್ರಮ ಆಸ್ತಿ ಸಂಪಾದನೆ ಮತ್ತು ಮನಿ ಲಾಂಡರಿಂಗ್ ಸೇರಿ ಹಲವು ಪ್ರಕರಣಗಳಿದ್ದು, ವಿಚಾರಣೆ ನಡೆಯುತ್ತಿವೆ. 3 ವರ್ಷ ಜೈಲಿನಲ್ಲಿದ್ದು, ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
  • ಡಿಕೆ ಶಿವಕುಮಾರ್ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಯಿಂದ ನ್ಯಾಯಾಂಗ ಬಂಧನಕ್ಕೊಳಗಾಗಿ ತಿಹಾರ್ ಜೈಲಿನಲ್ಲಿದ್ದು, ಬಳಿಕ ಜಾಮೀನು ಪಡೆದರು.

Vinay Kulkarni disqualified ಕೋರ್ಟ್ ಶಿಕ್ಷೆ ಹಿನ್ನೆಲೆ: ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ, ಮುಂದೇನು?

RCB match today ಇಂದು RCB ಮ್ಯಾಚ್: ಚಿನ್ನಸ್ವಾಮಿ ಸುತ್ತ ಸಂಚಾರ ಬದಲಾವಣೆ, ಎಲ್ಲೆಲ್ಲೂ ಬಿಗಿ ಭದ್ರತೆ

 

BABA VANGA ASTRO ತಾಳ್ಮೆಯಿಂದ ಕಾಯ್ದರೆ ಈ ಐದು ರಾಶಿಗಳ ಜನರಿಗೆ ಆಗರ್ಭ ಶ್ರೀಮಂತಿಕೆ!

TAGGED:Vinay Kulkarni is the second politician to be sentenced to life imprisonment.
Share This Article
Facebook Twitter Copy Link Print
Previous Article BABA VANGA ASTRO ತಾಳ್ಮೆಯಿಂದ ಕಾಯ್ದರೆ ಈ ಐದು ರಾಶಿಗಳ ಜನರಿಗೆ ಆಗರ್ಭ ಶ್ರೀಮಂತಿಕೆ!
Next Article India hotest in the world ಇನ್ನೆರಡು ವಾರದಲ್ಲಿ ದೇಶದ ಹಲವೆಡೆ ಅತಿ ಬಿಸಿಲು, ಇದು ಜಗತ್ತಿನಲ್ಲೇ ಹೆಚ್ಚು!

Popular Posts

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

You Might Also Like

ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?