Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ನಾಲ್ಕುಚೀತಾಗಳ ಆಗಮನ
ಕರ್ನಾಟಕದೇಶಪ್ರಮುಖ

ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ನಾಲ್ಕುಚೀತಾಗಳ ಆಗಮನ

Share
1 Min Read
SHARE

https://youtube.com/shorts/RcxcteKkGZ8?si=yxDv0iURLfg799X9

newsics.com

ಬೆಂಗಳೂರು: ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ಕರೆತರಲಾಗುತ್ತಿರುವ ನಾಲ್ಕು ಚೀತಾಗಳು ಶುಕ್ರವಾರ ಮಧ್ಯರಾತ್ರಿ 1 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನಕ್ಕೆ ಆಗಮಿಸಿದ್ದು, ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವುಗಳನ್ನು ಸ್ವೀಕರಿಸಿ ಬನ್ನೇರಘಟ್ಟ ಮೃಗಾಲಯದ ಅಧಿಕಾರಿಗಳಿಗೆ ಹಸ್ತಾಂತರಿಸಿದರು.

ತನ್ಮೂಲಕ ಬನ್ನೇರುಘಟ್ಟ ಮೃಗಾಲಯ ತನ್ನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಚೀತಾಗಳಿಗೆ ಆಶ್ರಯ ನೀಡುತ್ತಿದೆ. ವನ್ಯಜೀವಿ (ರಕ್ಷಣೆ) ಕಾಯ್ದೆ ಅಡಿ ನಿಯಂತ್ರಕ ಅನುಮತಿ ಮತ್ತು ಪ್ರಾಣಿ ಕ್ವಾರಂಟೈನ್‌ ಅಧಿಕಾರಿಗಳ ಅನುಮೋದನೆ ನಂತರ ನಾಲ್ಕು ಆಫ್ರಿಕನ್‌ ಚೀತಾಗಳನ್ನು ಅರಣ್ಯ ಇಲಾಖೆ ತರಿಸಿಕೊಂಡಿದೆ. ಅವುಗಳನ್ನು ಬನ್ನೇರುಘಟ್ಟ ಮೃಗಾಲಯದಲ್ಲಿರಿಸಿ ಚೀತಾ ಪ್ರಭೇದವನ್ನು ಜನರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುತ್ತಿದೆ.

ನಿನ್ನೆ ಮಧ್ಯರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಚೀತಾಗಳು ಬಂದಿಳಿದಿವೆ. ತಡರಾತ್ರಿ ಬಂದಿದ್ದರೂ, ಅವುಗಳನ್ನು ಬರಮಾಡಿಕೊಳ್ಳಲು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ರಾಜ್ಯದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸ್ವತಃ ಹಾಜರಿದ್ದರು.

ವಿಮಾನದಿಂದ ಇಳಿಯುವ ಕ್ಷಣದಿಂದಲೇ ಚೀತಾಗಳನ್ನು ಅತ್ಯಂತ ಎಚ್ಚರಿಕೆಯಿಂದ, ನಿಯಮದಂತೆ, ಸುರಕ್ಷಿತವಾಗಿ ಮೃಗಾಲಯದ ಕಡೆಗೆ ಸಾಗಿಸುವ ವ್ಯವಸ್ಥೆ ಮಾಡಲಾಯಿತು. ದಕ್ಷಿಣ ಆಫ್ರಿಕಾದಂತಹ ದೂರದ ದೇಶದಿಂದ ಬರುವ ಪ್ರಾಣಿಗಳಿಗೆ ಹವಾಮಾನ, ವಾತಾವರಣ, ಆಹಾರ, ನೀರು ಹೀಗೆ ಹಲವು ವಿಷಯಗಳಲ್ಲಿ ಬದಲಾವಣೆಗಳು ಎದುರಾಗುತ್ತವೆ. ಈ ಹವಾಮಾನ ಬದಲಾವಣೆಯಿಂದ ಚೀತಾಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಅರಣ್ಯ ಇಲಾಖೆ ವಿಶೇಷ ಕ್ರಮಗಳನ್ನು ಕೈಗೊಂಡಿದೆ.

ಅವುಗಳ ಆರೋಗ್ಯ ತಪಾಸಣೆ ನಡೆಸಿ ಬನ್ನೇರುಘಟ್ಟದ ಮೃಗಾಲಯದಲ್ಲಿ ಕ್ವಾರಂಟೈನ್‌ನಲ್ಲಿ ಇಡಲಾಗುತ್ತದೆ. ಈ ವೇಳೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮತ್ತು ನಿಗದಿತ ಆಹಾರ ನೀಡಲಾಗುತ್ತದೆ. ಕ್ವಾರಂಟೈನ್‌ ಅವಧಿ ಮುಗಿದ ನಂತರ ಚೀತಾಗಳ ಆರೋಗ್ಯ ಆಧರಿಸಿ ಸಾರ್ವಜನಿಕ ವೀಕ್ಷಣೆಗೆ ಅನುವು ಮಾಡಿಕೊಡಲಾಗುತ್ತದೆ.

https://www.newsics.com/2026/04/19/strict-action-against-employees-for-missing-census-fine-jail-term-warning/

 

TAGGED:Arrival of four South African cheetahs in Bannerghatta
Share This Article
Facebook Twitter Copy Link Print
Previous Article ಜನಗಣತಿಗೆ ಗೈರಾದರೆ ನೌಕರರ ವಿರುದ್ಧ ಕಠಿಣ ಕ್ರಮ: ದಂಡ, ಜೈಲು ಶಿಕ್ಷೆ ಎಚ್ಚರಿಕೆ
Next Article ರಾಜ್ಯದಲ್ಲಿ ಉಷ್ಣ ಅಲೆಯ ಜತೆ ಅಲ್ಲಲ್ಲಿ ಆಲಿಕಲ್ಲು ಮಳೆ : ಕರಾವಳಿಗೆ ಹೀಟ್​ವೇವ್ ಅಲರ್ಟ್​

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?