https://youtube.com/shorts/RcxcteKkGZ8?si=yxDv0iURLfg799X9
newsics.com
ಚಿಕ್ಕಮಗಳೂರು : ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡುಕೋಣ ದಾಳಿ ನಡೆಸಿದ ಪರಿಣಾಮ 30 ವರ್ಷದ ಯುವಕ ಚೇತನ್ ಎಂಬಾತ ದಾರುಣವಾಗಿ ಮೃತಪಟ್ಟಿದ್ದಾನೆ.
ಎದೆಯ ಭಾಗಕ್ಕೆ ಕಾಡುಕೋಣ ಇರಿದ ಕಾರಣ ಆತ ಉಸಿರು ಚೆಲ್ಲಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆ ಸಮೀಪದ ಮೈದಾಡಿ ಯಮಗೊಂಡ ಎಸ್ಟೇಟ್ನಲ್ಲಿ ನಡೆದಿದೆ.
ಘಟನೆಯ ಬೆನ್ನಲ್ಲೇ ಕಳಸ ತಾಲೂಕಿನಲ್ಲಿ ಬೀಡುಬಿಟ್ಟಿರುವ ಕಾಡುಕೋಣಗಳು ಜನರಲ್ಲಿ ಆತಂಕ ಸೃಷ್ಟಿ ಮಾಡಿವೆ. ಕಾಫಿ ತೋಟಗಳಲ್ಲಿ ಕಾಡುಕೋಣಗಳು ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತಿದ್ದು, ಮಾನವರ ಮೇಲೆ ದಾಳಿಗೆ ಮುಂದಾಗುತ್ತಿವೆ. ಈ ಹಿನ್ನೆಲೆ ಇವುಗಳ ಹಾವಳಿ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಮುಂದಾಗಿದೆ.
ಅಧಿಕಾರಿಗಳ ಜೊತೆ ಸಭೆ ನಡೆಸಿ ಕಾಡುಕೋಣಗಳ ಸೆರೆ ಹಿಡಿದು ಸ್ಥಳಾಂತರ ಮಾಡುವುದಾಗಿ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದಾರೆ. ಮಾನವರ ಮೇಲೆದಾಳಿಗೆ ಮುಂದಾಗುವ ಕಾಡುಕೋಣ ಸೇರಿದಂತೆ ಕಾಡಾನೆ, ಚಿರತೆಗಳ ಮೇಲೆ ದಿನದ 24 ಗಂಟೆಗಳ ಕಾಲ ನಿಗಾ ಇಡುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುವ ಅವರು, ಕಾಡು ಪ್ರಾಣಿಗಳ ಉಪಟಳ ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನ ನೇಮಕ ಮಾಡುವುದಾಗಿಯೂ ತಿಳಿಸಿದ್ದಾರೆ.
https://www.newsics.com/2026/04/19/house-to-house-census-begins-in-the-state-from-today/