https://youtube.com/shorts/1WEgXjm4PPA?si=hql06q2xN6DbkOVx
newsics.com
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ನ್ಯಾಯಾಲಯದ ಆದೇಶ ಪಾಲಿಸಿ ಫಲಿತಾಂಶ ಪ್ರಕಟಿಸಲಾಗುವುದು. ಫಲಿತಾಂಶವನ್ನು ಪ್ರಕಟಿಸುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಸಿಎಂ ಜೊತೆ ಸಭೆಯಲ್ಲಿ ಅಡ್ವೊಕೇಟ್ ಜನರಲ್ ಹಾಜರಿದ್ದರು. ನಾಳೆ ಫಲಿತಾಂಶ ಪ್ರಕಟಿಸುವಾಗ ಎಲ್ಲಾ ವಿಚಾರಗಳನ್ನು ಹೇಳುತ್ತೇವೆ. ಗ್ರೇಸ್ ಮಾರ್ಕ್ಸ್ ಬಗ್ಗೆ ನಾಳೆ ಸುದ್ದಿಗೋಷ್ಠಿಯಲ್ಲಿ ಹೇಳುತ್ತೇನೆ. ಈ ವರ್ಷ ಕೋರ್ಟ್ ಆದೇಶ ಪಾಲಿಸುವ ಬಗ್ಗೆ ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಗ್ರೇಡ್ ಬದಲು ಅಂಕ ನೀಡುವಂತೆ ಹೈಕೋರ್ಟ್ ಆದೇಶಿಸಿದೆ. ಇದರಿಂದಾಗಿ ಈ ಶೈಕ್ಷಣಿಕ ಸಾಲಿನಿಂದಲೇ ಹಿಂದಿ ಸೇರಿ ತೃತೀಯ ಭಾಷೆಗೆ ಗ್ರೇಡ್ ನೀಡುವ ಚಿಂತನೆ ನಡೆಸಿದ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಹೈಕೋರ್ಟ್ ಆದೇಶದಂತೆ ಅಂಕ ನೀಡಲಾಗುವುದು.