newsics.com/ನ್ಯೂಸಿಕ್ಸ್
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಿರೀಕ್ಷೆ ಮಾಡಿದಷ್ಟು ಅಂಕ ಬಂದಿಲ್ಲ ಅಂತ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದ ವಿದ್ಯಾರ್ಥಿನಿಯೊಬ್ಬಳು ಸಾವಿಗೆ ಶರಣಾದಂತಹ ಬೇಸರದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರಿನ ನಂಜನಗೂಡು ನಗರದಲ್ಲಿರುವ ಶ್ರೀ ಗುರುಮಲ್ಲೇಶ್ವರ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ16 ವರ್ಷದ ತ್ರಿಶಾಲ ಸಾವಿಗೆ ಶರಣಾದ ವಿದ್ಯಾರ್ಥಿನಿ. ತ್ರಿಶಾಲಾಗೆ ಎಸ್ಎಸ್ಎಲ್ಸಿಯಲ್ಲಿ ನಿರೀಕ್ಷೆ ಮಾಡಿದಷ್ಟು ಅಂಕ ಬಾರದೇ ಹೋದರೂ ಕೂಡ ಆಕೆ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಳು. ಆದರೆ ಹೆಚ್ಚು ಅಂಕ ಬರಲಿಲ್ಲವೆಂದು ದುಡುಕಿದ ಬಾಲಕಿ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾಳೆ.
ತ್ರಿಶಾಲಾ ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದ ಮಂಜು ಹಾಗೂ ಸವಿತಾ ದಂಪತಿಯ ಪುತ್ರಿಯಾಗಿದ್ದು, ಒಟ್ಟು 440 ಅಂಕಗಳನ್ನು ಗಳಿಸಿ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಳು. ಆದರೆ ಬಾಲಕಿ ಡಿಸ್ಟಿಂಕ್ಷನ್ನಲ್ಲಿ ಪಾಸಾಗಬಹುದು ಎಂಬ ನಿರೀಕ್ಷೆ ಇಟ್ಟುಕೊಂಡಿದ್ದಳು. ಆದರೆ ಕೇವಲ ಫಸ್ಟ್ಕ್ಲಾಸ್ ಮಾರ್ಕ್ ಅಷ್ಟೇ ಬಂದಿದೆ ಎಂದು ಆಕೆ ಸಾವಿಗೆ ಶರಣಾಗಿದ್ದಾಳೆ. ಪರೀಕ್ಷೆಯನ್ನು ಡಿಸ್ಟಿಂಕ್ಷನ್ ಬರುವ ಮಟ್ಟಕ್ಕೆ ಬರೆದಿದ್ದೇನೆ ಎಂದು ಹೇಳಿದ್ದಳು. ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಆಕೆ ಸಾವಿಗೆ ಶರಣಾಗಿದ್ದಾಳೆ.
ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರ ಅಂಗಾಂಗ ಮುಟ್ಟಿ ವಿಕೃತಿ: ಇಬ್ಬರು ಕಾಮುಕರು ಅರೆಸ್ಟ್