https://youtube.com/shorts/7P5j592ICRU?si=brWLJ4hEetaflYiu
newsics.com
2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶವು ನಿಗದಿತ ಸಮಯಕ್ಕಿಂತ ಒಂದು ದಿನ ಮುಂಚಿತವಾಗಿ ಪ್ರಕಟವಾಗಲಿದೆ. ಹೈಕೋರ್ಟ್ ಆದೇಶದಂತೆ, ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕಗಳನ್ನು ಪರಿಗಣಿಸಿ ಫಲಿತಾಂಶ ನೀಡಲು ಸರ್ಕಾರ ನಿರ್ಧಾರಿಸಿದೆ.
ನ್ಯಾಯಾಲಯ ಆದೇಶ ಮತ್ತು ಇಲಾಖೆಯ ನಿರ್ಧಾರದ ಕುರಿತು ಬುಧವಾರ ಸಂಜೆ ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಈ ವೇಳೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಹಾಗೂ ಇಲಾಖೆ ಅಧಿಕಾರಿಗಳು ಹಾಜರಿದ್ದರು. ಈ ಸಂದರ್ಭದಲ್ಲಿ ನ್ಯಾಯಾಲಯ ತೀರ್ಮಾನ ಪಾಲನೆಗೆ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಧು ಬಂಗಾರಪ್ಪ, ‘ಕೃಪಾಂಕ ನೀಡುವ ವಿಚಾರವನ್ನು ಗುರುವಾರ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ತಿಳಿಸಲಾಗುತ್ತದೆ. ಸದ್ಯಕ್ಕೆ ಯಾವುದೇ ವಿಷಯವನ್ನು ಹೇಳಲು ಸಾಧ್ಯವಿಲ್ಲ. ಎಲ್ಲದಕ್ಕೂ ಫಲಿತಾಂಶವೇ ಉತ್ತರ ನೀಡುತ್ತದೆ’ ಎಂದಷ್ಟೇ ಹೇಳಿದರು.