ತಾಯಿ ಬುದ್ಧಿವಾದ ಹೇಳಿದ್ದಕ್ಕೆ 14 ವರ್ಷದ ಬಾಲಕ ಆತ್ಮಹತ್ಯೆ

newsics.com/ನ್ಯೂಸಿಕ್ಸ್ ಆನ್‌ಲೈನ್ ಗೇಮ್‌ಗೆ ದಾಸನಾಗಿದ್ದ 14 ವರ್ಷದ ಬಾಲಕನೊಬ್ಬ, ತಾಯಿ ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹುಬ್ಬಳ್ಳಿಯ ಉದಯನಗರದಲ್ಲಿ ನಡೆದಿದೆ.   ‘ಫ್ರೀಫೈರ್’ ಗೇಮ್‌ಗೆ ಅತಿಯಾಗಿ ಅಡಿಕ್ಟ್ ಆಗಿದ್ದ ಸಮರ್ಥ್ ಎಂಬ ಬಾಲಕನೇ ಈ ಅತಿರೇಕದ ನಿರ್ಧಾರಕ್ಕೆ ಶರಣಾದ ದುರ್ದೈವಿ ಎಂದು ತಿಳಿದು ಬಂದಿದೆ. ಗೇಮ್ ಅಡಿಕ್ಷನ್: ಸಮರ್ಥ್ ಕಳೆದ ಕೆಲವು ದಿನಗಳಿಂದ ಸತತವಾಗಿ ಮೊಬೈಲ್‌ನಲ್ಲಿ ಆನ್‌ಲೈನ್ ಗೇಮ್‌ಗಳನ್ನು ಆಡುತ್ತಿದ್ದ. ಗುರುವಾರ ರಾತ್ರಿಯೂ ಗೇಮ್ ಆಡುವುದರಲ್ಲಿ ಮಗ್ನನಾಗಿದ್ದಾಗ ತಾಯಿ ಆತನಿಗೆ ಬುದ್ಧಿವಾದ ಹೇಳಿದ್ದಾರೆ. … Continue reading ತಾಯಿ ಬುದ್ಧಿವಾದ ಹೇಳಿದ್ದಕ್ಕೆ 14 ವರ್ಷದ ಬಾಲಕ ಆತ್ಮಹತ್ಯೆ