Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 3 ಬಾರಿ ಪಲ್ಟಿಯಾದ ಕಾರು; ಚಾಲಕ ಪ್ರಾಣಾಪಾಯದಿಂದ ಪಾರು!
ಕರ್ನಾಟಕಪ್ರಮುಖ

3 ಬಾರಿ ಪಲ್ಟಿಯಾದ ಕಾರು; ಚಾಲಕ ಪ್ರಾಣಾಪಾಯದಿಂದ ಪಾರು!

Share
1 Min Read
SHARE

newsics.com/ನ್ಯೂಸಿಕ್ಸ್

ಚಿಕ್ಕಮಗಳೂರು: ವೇಗವಾಗಿ ಚಲಿಸುತ್ತಿದ್ದ ಆಲ್ಟೋ ಕಾರೊಂದು ನಿಯಂತ್ರಣ ತಪ್ಪಿ ಟ್ರ್ಯಾಕ್ ಮೇಲೆಯೇ ಮೂರು ಬಾರಿ ಪಲ್ಟಿಯಾಗಿದ್ದು, ಚಾಲಕ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಈ ರೋಚಕ ರೇಸ್ ಹಮ್ಮಿಕೊಳ್ಳಲಾಗಿತ್ತು. ಮಲೆನಾಡಿನ ಮಣ್ಣಿನ ಹಾದಿಯಲ್ಲಿ ಎಂಜಿನ್‌ಗಳ ಗರ್ಜನೆ, ಧೂಳಿನ ನಡುವೆ ಚಾಲಕರು ತಮ್ಮ ಕೌಶಲ್ಯ ಪ್ರದರ್ಶಿಸುತ್ತಿದ್ದರು. ನೂರಾರು ಪ್ರೇಕ್ಷಕರು ಈ ಸಾಹಸವನ್ನು ಕಣ್ತುಂಬಿಕೊಳ್ಳುತ್ತಿದ್ದರು. ಇದೇ ವೇಳೆ ಸ್ಪರ್ಧೆಯಲ್ಲಿದ್ದ ಆಲ್ಟೋ ಕಾರೊಂದು ತಿರುವಿನಲ್ಲಿ ಅತಿಯಾದ ವೇಗದಿಂದಾಗಿ ನಿಯಂತ್ರಣ ಕಳೆದುಕೊಂಡಿದೆ. ಕ್ಷಣಾರ್ಧದಲ್ಲಿ ಕಾರು ಟ್ರ್ಯಾಕ್ ಮೇಲೆ ಮೂರು ಬಾರಿ ಉರುಳಿ ಬಿದ್ದಿದೆ.

ಕಾರು ಪಲ್ಟಿಯಾಗುತ್ತಿದ್ದಂತೆ ಸ್ಥಳದಲ್ಲಿದ್ದ ಪ್ರೇಕ್ಷಕರು ಕಿರುಚಾಡುತ್ತಾ ಗಾಬರಿಗೊಂಡರು. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಒಳಗಿದ್ದ ಚಾಲಕನ ಸ್ಥಿತಿ ಏನಾಗಿರಬಹುದು ಎಂಬ ಆತಂಕ ಎಲ್ಲರಲ್ಲೂ ಮನೆ ಮಾಡಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಆಯೋಜಕರು ಮತ್ತು ಸಿಬ್ಬಂದಿ ಕಾರಿನಲ್ಲಿದ್ದ ಚಾಲಕನನ್ನು ಹೊರಕ್ಕೆ ಕರೆತಂದರು. ಅದೃಷ್ಟವಶಾತ್ ಚಾಲಕನಿಗೆ ಕೇವಲ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ತಕ್ಷಣವೇ ಆತನಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್:
ಅಪಘಾತದ ಭೀಕರ ದೃಶ್ಯವು ಪ್ರೇಕ್ಷಕರೊಬ್ಬರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಅಪಘಾತದ ಬಳಿಕ ಸುರಕ್ಷತಾ ದೃಷ್ಟಿಯಿಂದ ರೇಸ್ ಅನ್ನು ಕೆಲಕಾಲ ಸ್ಥಗಿತಗೊಳಿಸಲಾಗಿತ್ತು.

ಇಂತಹ ಸಾಹಸಮಯ ಕ್ರೀಡೆಗಳಲ್ಲಿ ಚಾಲಕರ ಸುರಕ್ಷತೆ ಎಷ್ಟು ಮುಖ್ಯ ಎಂಬ ಚರ್ಚೆ ಈ ಘಟನೆಯಿಂದ ಮತ್ತೆ ಮುನ್ನೆಲೆಗೆ ಬಂದಿದೆ. ಡರ್ಟ್ ಟ್ರ್ಯಾಕ್ ರೇಸ್‌ಗಳಲ್ಲಿ ಭಾಗವಹಿಸುವಾಗ ವಾಹನಗಳ ಸುಸ್ಥಿತಿ ಹಾಗೂ ಕಠಿಣ ಸುರಕ್ಷತಾ ನಿಯಮಗಳ ಪಾಲನೆ ಅತ್ಯಗತ್ಯ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಬಾಡಿ ಶೇಮಿಂಗ್ ಕುರಿತು ನಟ ಧನುಷ್ ಧನುಷ್ ಹೇಳಿದ್ದೇನು?

TAGGED:Car flips 3 times at Mudigere dirt track race; driver escapes unhurt!
Share This Article
Facebook Twitter Copy Link Print
Previous Article ಬಾಡಿ ಶೇಮಿಂಗ್ ಕುರಿತು ನಟ ಧನುಷ್ ಹೇಳಿದ್ದೇನು?
Next Article Wild elephant in Channapattana. ಚನ್ನಪಟ್ಟಣಕ್ಕೆ ನುಗ್ಗಿದ ಕಾಡಾನೆ, ಮಹಿಳೆ ಅಸ್ವಸ್ಥ,‌ ಮನೆ ಧ್ವಂಸ! ಮನೆಯಿಂದ ಹೊರಬರದಂತೆ ಜನರಿಗೆ ಸೂಚನೆ

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?