newsics.com/ನ್ಯೂಸಿಕ್ಸ್
ಕಳೆದ ಕೆಲವು ದಿನಗಳಿಂದ ಸುಡುತ್ತಿರುವ ಬಿಸಿಲಿಗೆ ಕಂಗೆಟ್ಟಿದ್ದ ಕನ್ನಡಿಗರಿಗೆ ಹವಾಮಾನ ಇಲಾಖೆ ಒಂದು ಕಡೆ ತಂಪು ಸುದ್ದಿ ನೀಡಿದೆ. ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯಲಿದೆ. 17 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಧಿಕೃತ ಮಳೆ ಅಲರ್ಟ್ ನೀಡಿದೆ.
https://youtube.com/shorts/eOoYZp9a9F0?si=CP6V90gKWCTFTFCS
ಮಳೆಯ ಜೊತೆಗೆ ಗಂಟೆಗೆ 40-50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದbಸಂಜೆ ವೇಳೆಗೆ ಗುಡುಗು ಆರಂಭವಾಗುವ ಮುನ್ಸೂಚನೆ ಇರುವುದರಿಂದ ಪ್ರವಾಸಿಗರು ಮತ್ತು ಪ್ರಯಾಣಿಕರು ಜಾಗರೂಕತೆಯಿಂದ ಇರಬೇಕು.
ಉತ್ತರ ಕರ್ನಾಟಕದ ಭಾಗದ ಜನರೇ ಎಚ್ಚರ, ಬಾಗಲಕೋಟೆ, ಬೆಳಗಾವಿ ಮತ್ತು ಗದಗ ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಅಂದರೆ ಇಲ್ಲಿ ಮಳೆಯ ಪ್ರಮಾಣ ಹೆಚ್ಚಿರಲಿದ್ದು, ಆಲಿಕಲ್ಲು ಮಳೆ ಬೀಳುವ ಸಂಭವ ದಟ್ಟವಾಗಿದೆ.
ಮಲೆನಾಡು ಮತ್ತು ಕರಾವಳಿ ಭಾಗದಲ್ಲಿಯೂ ಮಳೆಯ ಆರ್ಭಟ ಜೋರಿರಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮತ್ತು ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಬಯಲು ಸೀಮೆಯ ಮೈಸೂರು, ದಾವಣಗೆರೆ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
https://www.newsics.com/2026/04/27/how-much-does-mangli-get-paid-for-a-song/