newsics.com/ನ್ಯೂಸಿಕ್ಸ್
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಹಾಗೂ ಗುಜರಾತ್ ಟೈಟನ್ಸ್ ನಡುವಣ ಏಪ್ರಿಲ್ 24 ರ ಪಂದ್ಯದ ವೇಳೆ ಸಿಸಿಟಿವಿ ಕೇಬಲ್ ಕಟ್ ಮಾಡಿದ್ದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ.
https://youtube.com/shorts/eOoYZp9a9F0?si=CP6V90gKWCTFTFCS
ಕ್ರೀಡಾಂಗಣದ ಭದ್ರತೆಗಾಗಿ ಅಳವಡಿಸಲಾಗಿದ್ದ ಸಿಸಿಟಿವಿ ನಿರ್ವಹಣೆಯ ಹೊಣೆಯನ್ನು ‘IVS ಡಿಜಿಟಲ್ ಸೊಲ್ಯೂಷನ್’ ಎಂಬ ಕಂಪನಿಗೆ ಸಬ್ ಕಾಂಟ್ರ್ಯಾಕ್ಟ್ ನೀಡಲಾಗಿತ್ತು. ಈ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಹಾಗೂ ಅಬ್ದುಲ್ ಕಲಾಂ ಎಂಬುವವರು ಈ ಕೃತ್ಯ ಎಸಗಿದ್ದಾರೆ ಎಂಬುದು ಪೊಲೀಸರ ವಿಚಾರಣೆಯಿಂದ ದೃಢಪಟ್ಟಿದೆ.
ಆರೋಪಿಗಳಿಬ್ಬರಿಗೂ ಕಂಪನಿಯಿಂದ ಬರಬೇಕಿದ್ದ ಸಂಬಳ ಬಾಕಿ ಇತ್ತು. ಎಷ್ಟು ಕೇಳಿದರೂ ಕಂಪನಿ ಸಂಬಳ ನೀಡದಿದ್ದಕ್ಕೆ ಕೋಪಗೊಂಡಿದ್ದ ಈ ಸಿಬ್ಬಂದಿಗಳು, ಸಂಸ್ಥೆಗೆ ಮತ್ತು ಪೊಲೀಸರಿಗೆ ಪಾಠ ಕಲಿಸಲು ನಿರ್ಧರಿಸಿ ಸಿಸಿಟಿವಿ ಕೇಬಲ್ಗಳನ್ನು ಕತ್ತರಿಸಿದ್ದರು.
ಪಂದ್ಯದ ದಿನವೇ ಸಿಸಿಟಿವಿಗಳು ಆಫ್ ಆಗಿದ್ದರಿಂದ ಭದ್ರತಾ ವ್ಯವಸ್ಥೆ ಬಗ್ಗೆ ಭಾರಿ ಆತಂಕ ವ್ಯಕ್ತವಾಗಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು, ತಕ್ಷಣ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿ ಬದಲಿ ತಾಂತ್ರಿಕ ವ್ಯವಸ್ಥೆ ಮಾಡಿದ್ದರು.