newsics.com/ನ್ಯೂಸಿಕ್ಸ್
ಕೊಪ್ಪಳ : ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಕಳೆದ ಬಾರಿಗಿಂತ ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಆದ್ರೆ, ಫಲಿತಾಂಶ ಪ್ರಕಟಣೆಯಲ್ಲಿ ಲೋಪದೋಷ ಕಂಡು ಬಂದಿದೆ.
https://youtube.com/shorts/eOoYZp9a9F0?si=CP6V90gKWCTFTFCS
ಇದೀಗ ಜಿಲ್ಲೆಯಲ್ಲೂ ಶಿಕ್ಷಣ ಇಲಾಖೆಯ ಎಡವಟ್ಟು ಒಂದು ಬೆಳಕಿಗೆ ಬಂದಿದ್ದು, ಅದರಿಂದ ಆಘಾತಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ.
ಕೊಪ್ಪಳ ತಾಲೂಕಿನ ಕಾತರಕಿ ಗುಡ್ಲಾನೂರ ಗ್ರಾಮದ ನಿವಾಸಿ ಸಂಜನಾ ಮಡಿವಾಳರ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಳು. ಆದರೆ ಫಲಿತಾಂಶದಂದು ಆಘಾತವೊಂದು ಎದುರಾಗಿತ್ತು. ಎಲ್ಲಾ ವಿಷಯಗಳಲ್ಲಿ ಉತ್ತಮ ಅಂಕ ಪಡೆದುಕೊಂಡಿದ್ದ ಸಂಜನಾ, ಕನ್ನಡ ವಿಷಯದಲ್ಲಿ ಅಂಕಪಟ್ಟಿಯಲ್ಲಿ ಕೇವಲ 12 ಅಂಕಗಳು ಎಂದು ನಮೂದಾಗಿತ್ತು. ಆದರೆ ಉತ್ತರ ಪತ್ರಿಕೆಯ ಫೋಟೋ ಪ್ರತಿ ತರೆಸಿಕೊಂಡು ಪರಿಶೀಲನೆ ಮಾಡಿದಾಗ 71 ಅಂಕ ಪಡೆದುಕೊಂಡಿರುವುದು ಗೊತ್ತಾಗಿದ್ದು, ಸದ್ಯ ಸಂಜನಾ ನಿಟ್ಟುಸಿರು ಬಿಟ್ಟಿದ್ದಾಳೆ.
ಹೆಚ್ಚು ಅಂಕ ನಿರೀಕ್ಷಿಸಿದ್ದ ಸಂಜನಾ, ಅಂಕಪಟ್ಟಿಯಲ್ಲಿ ಫೇಲ್ ಆಗಿರುವುದನ್ನು ಕಂಡು ತೀವ್ರ ಮಾನಸಿಕ ಆಘಾತಕ್ಕೊಳಗಾಗಿದ್ದಳು. ಇದೇ ಕಾರಣಕ್ಕೆ ದುಡುಕಿನ ನಿರ್ಧಾರಕ್ಕೆ ಮುಂದಾಗಿದ್ದಳು. ಶಿಕ್ಷಣ ಇಲಾಖೆಯ ಎಡವಟ್ಟಿನಿಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಆದರೆ, ಪೋಷಕರ ಸಮಯಪ್ರಜ್ಞೆಯಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದ್ದು, ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿನಿ ಸಂಜನಾ, ಕಷ್ಟಪಟ್ಟು ಓದಿ ಉತ್ತಮ ಅಂಕ ಗಳಿಸಿದ್ದರೂ, ಇಲಾಖೆಯವರ ನಿರ್ಲಕ್ಷ್ಯದಿಂದಾಗಿ ಸ್ನೇಹಿತರ ಮುಂದೆ ಮತ್ತು ಹೆತ್ತವರಿಗೆ ಅವಮಾನ ಅನುಭವಿಸಬೇಕಾಯಿತು ಎಂದು ಅಳಲು ತೋಡಿಕೊಂಡಿದ್ದಾಳೆ.
https://www.newsics.com/2026/04/28/pm-modi-plays-football-with-young-players-in-sikkim-watch-video/