newsics.com/ನ್ಯೂಸಿಕ್ಸ್
ಕಟ್ಟಡವೊಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಹಿಂದೂಗಳು ಕಲ್ಮಾ ಪಠಿಸಲು ನಿರಾಕರಿಸಿದ್ದಕ್ಕೆ ದುಷ್ಕರ್ಮಿಯೊಬ್ಬ ಧರ್ಮ ಕೇಳಿ ಚಾಕು ಇರಿದಿರುವ ಘೋರ ಘಟನೆ ಮುಂಬೈನಲ್ಲಿ ನಡೆದಿದೆ.
ಮುಂಬೈನ ಮೀರಾ ರಸ್ತೆಯಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಹಿಂದುಗಳು ಕಲ್ಮಾ ಪಠಿಸದ ಕಾರಣಕ್ಕೆ ದುಷ್ಕರ್ಮಿ ಏಕಾಏಕಿ ಚಾಕು ಇರಿದಿದ್ದಾನೆ.
ಇದಕ್ಕೂ ಮುನ್ನ ಆತ ಧರ್ಮ ಯಾವುದು ಎಂದು ಕೇಳಿದ್ದಾನೆ. ಹಿಂದೂಗಳು ಎಂದು ಹೇಳುತ್ತಿದ್ದರೂ ಕಲ್ಮಾ ಪಠಿಸುವಂತೆ ಒತ್ತಾಯಿಸಿದ್ದಾನೆ. ಒಪ್ಪದಿದಾಗ ಚಾಕುವಿನಿಂದ ಇರಿದಿದ್ದಾನೆ.
ಚಾಕು ಇರಿತಕ್ಕೊಳಗಾದವರನ್ನು ರಾಜ್ಕುಮಾರ್ ಮಿಶ್ರಾ ಮತ್ತು ಸುಬ್ರೋತೋ ರಮೇಶ್ ಸೇನ್ ಎಂದು ಗುರುತಿಸಲಾಗಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದರ ಆಧಾರದ ಮೇಲೆ ಆರೋಪಿ ಜೈಬ್ ಜುಬೈರ್ ಅನ್ಸಾರಿ (31) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮುಂಬೈನ ನಯಾ ನಗರ ಪೊಲೀಸ್ ಠಾಣೆ ಪ್ರದೇಶದ ವೋಕ್ಹಾರ್ಡ್ ಆಸ್ಪತ್ರೆಯ ಹಿಂಭಾಗದಲ್ಲಿರುವ ಅಸ್ಮಿತಾ ಗ್ರ್ಯಾಂಡ್ ಮ್ಯಾನ್ಷನ್ ಸ್ಥಳದಲ್ಲಿ ರಾಜ್ಕುಮಾರ್ ಮಿಶ್ರಾ ಮತ್ತು ಸುಬ್ರೋತೋ ಸೇನ್ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದರು. ಈ ವೇಳೆ, ದುಷ್ಕರ್ಮಿ ಜೈಬ್ ಜುಬೈರ್ ಅನ್ಸಾರಿ ಸ್ಥಳಕ್ಕೆ ಬಂದು ಇಬ್ಬರ ಜೊತೆ ಮಾತನಾಡುತ್ತಿದ್ದ. ಈ ವೇಳೆ ಇದ್ದಕ್ಕಿದ್ದಂತೆ ಕಲ್ಮಾ ಪಠಿಸಲು ಹೇಳಿದ್ದಾನೆ. ಬಳಿಕ ಚಾಕುವನ್ನು ಹೊರತೆಗೆದು ಹಲ್ಲೆ ನಡೆಸಿದ್ದಾನೆ.
ದಾಳಿಯಲ್ಲಿ ರಾಜ್ಕುಮಾರ್ ಮಿಶ್ರಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಸುಬ್ರೋತೋ ಸೇನ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ಆರೋಪಿ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಶಂಕೆ ಇದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.