newsics.com/ನ್ಯೂಸಿಕ್ಸ್
90ರ ದಶಕದಲ್ಲಿ ಬೆಳ್ಳಿತೆರೆಯನ್ನು ಆಳಿದ್ದ ದಿಟ್ಟ ನಟಿ ಮಮತಾ ಕುಲಕರ್ಣಿ ಅವರ ಜೀವನ ಯಾವುದೇ ಫಿಲ್ಮಿ ಡ್ರಾಮಾಗಿಂತ ಕಡಿಮೆ ಇಲ್ಲ. ಗ್ಲಾಮರ್ ಲೋಕದ ಉತ್ತುಂಗದಿಂದ ವಿವಾದಗಳ ಸುಳಿಗೆ ಸಿಲುಕಿ ದೇಶವನ್ನೇ ತೊರೆದ ನಟಿ.
2025ರಲ್ಲಿ ಭಾರತಕ್ಕೆ ಮರಳಿದ ಮಮತಾ ಕುಲಕರ್ಣಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದು ತಮ್ಮ ಬದಲಾದ ಜೀವನಶೈಲಿಯಿಂದ. ಪ್ರಯಾಗ್ರಾಜ್ನಲ್ಲಿ ನಡೆದ ಮಹಾಕುಂಭ ಮೇಳದಲ್ಲಿ ಕಾಣಿಸಿಕೊಂಡ ಅವರು, ಅಧ್ಯಾತ್ಮದ ಹಾದಿ ಹಿಡಿದು ‘ಕಿನ್ನರ್ ಅಖಾಡ’ದ ಮಹಾಮಂಡಲೇಶ್ವರಿಯಾಗಿ ನೇಮಕಗೊಂಡರು. ತಮ್ಮ ಹಳೆಯ ಜೀವನಕ್ಕೆ ವಿದಾಯ ಹೇಳಿ ‘ಶ್ರೀ ಯಮಯಿ ಮಮತಾ ನಂದ ಗಿರಿ’ ಎಂಬ ಹೊಸ ಹೆಸರನ್ನು ಪಡೆದರು. ಆದರೆ, ಈ ಆಧ್ಯಾತ್ಮಿಕ ಪಯಣ ಸುಗಮವಾಗಿರಲಿಲ್ಲ. ಭೂಗತ ಲೋಕದೊಂದಿಗಿನ ಹಳೆಯ ಕೊಂಡಿಗಳ ಆರೋಪದ ಮೇಲೆ ಅವರನ್ನು ಅಖಾಡದಿಂದ ಉಚ್ಚಾಟಿಸಲಾಯಿತು.
ವೃತ್ತಿಜೀವನ ಉತ್ತುಂಗದಲ್ಲಿದ್ದಾಗಲೇ ಭೂಗತ ಲೋಕದ ಡಾನ್ ವಿಕ್ಕಿ ಗೋಸ್ವಾಮಿ ಜೊತೆಗಿನ ಸ್ನೇಹ ಮಮತಾ ಪಾಲಿಗೆ ಮುಳುವಾಯಿತು. ಅವರ ಪಾಲುದಾರ ವಿಕ್ಕಿ ಗೋಸ್ವಾಮಿ ಈ ಪ್ರಕರಣದ ಕಿಂಗ್ಪಿನ್ ಎಂದು ಆರೋಪಿಸಲಾಗಿತ್ತು. ಆದರೆ, 2024ರಲ್ಲಿ ಬಾಂಬೆ ಹೈಕೋರ್ಟ್ ಈ ಎಲ್ಲಾ ಆರೋಪಗಳನ್ನು ವಜಾಗೊಳಿಸಿ, ಮಮತಾ ಅವರಿಗೆ ದೊಡ್ಡ ರಿಲೀಫ್ ನೀಡಿತು.
ದೀರ್ಘಕಾಲದ ನಂತರ 2025ರಲ್ಲಿ ಭಾರತಕ್ಕೆ ಮರಳಿದ ಮಮತಾ ಕುಲಕರ್ಣಿ ಎಲ್ಲರನ್ನೂ ಅಚ್ಚರಿಗೊಳಿಸಿದರು. ಮಹಾ ಕುಂಭಮೇಳದಲ್ಲಿ ಸಾಧ್ವಿಯಾಗಿ ಕಾಣಿಸಿಕೊಂಡು ಎಲ್ಲರೂ ಹುಬ್ಬೇರಿಸುವಂತೆ ಮಾಡಿದರು.ಸದ್ಯ ಗ್ಲಾಮರ್ ಲೋಕದಿಂದ ದೂರವೇ ಉಳಿದಿರುವ ಮಮತಾ ಕುಲಕರ್ಣಿ, ಇತ್ತೀಚೆಗೆ ‘ಲಾಫ್ಟರ್ ಚೆಫ್ಸ್’ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಕಾಣಿಸಿಕೊಂಡಿದ್ದರು.
https://www.newsics.com/2026/04/30/fire-in-moving-car-five-burnt-alive/