Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಮೀರ್ ಗೆ ಸಿದ್ದರಾಮಯ್ಯ ನೀಡಿದ ಆ ‘ಸೂಕ್ಷ್ಮ’ ಸಂದೇಶವೇನು?
ಕರ್ನಾಟಕಪ್ರಮುಖ

ಜಮೀರ್ ಗೆ ಸಿದ್ದರಾಮಯ್ಯ ನೀಡಿದ ಆ ‘ಸೂಕ್ಷ್ಮ’ ಸಂದೇಶವೇನು?

Share
2 Min Read
SHARE

ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಪ್ರಕರಣ ಈಗ ಹೈಕಮಾಂಡ್ ಮಟ್ಟಕ್ಕೆ ತಲುಪುವ ಲಕ್ಷಣಗಳು ಕಾಣಿಸುತ್ತಿವೆ. ಈ ವಿವಾದದ ಬೆನ್ನಲ್ಲೇ ಜಮೀರ್ ಅಹಮದ್ ತೀವ್ರ ಆತಂಕಕ್ಕೆ ಒಳಗಾಗಿದ್ದು, ಬೆಂಗಳೂರಿನಲ್ಲಿ ಸಂಧಾನ ಮತ್ತು ತಂತ್ರ ರೂಪಿಸುವಲ್ಲಿ ನಿರತರಾಗಿದ್ದಾರೆ.

ವಿಶೇಷವೆಂದರೆ, ಜಮೀರ್ ಅವರ ದೆಹಲಿ ಪ್ರವಾಸಕ್ಕೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಬ್ರೇಕ್ ಹಾಕಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಸಿದ್ದರಾಮಯ್ಯ ನೀಡಿದ ಆ ‘ಸೂಕ್ಷ್ಮ’ ಸಂದೇಶವೇನು?

ಸೋಮವಾರ ಬೆಳಿಗ್ಗೆ ದೆಹಲಿಗೆ ಹೋಗುವ ಸಿದ್ಧತೆಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಮೀರ್ ಅಹಮದ್ ಖಾನ್ ಭೇಟಿ ಮಾಡಿದ್ದರು. ಈ ವೇಳೆ ವೈರಲ್ ಆಗಿರುವ ಆಡಿಯೋ ಕುರಿತು ಜಮೀರ್ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ಆದರೆ, ಸಿದ್ದರಾಮಯ್ಯ ಅವರು ಈ ಸಮಯದಲ್ಲಿ ಜಮೀರ್ ದೆಹಲಿಗೆ ಬರುವುದು ಸೂಕ್ತವಲ್ಲ ಎಂಬ ಕಿವಿಮಾತು ಹೇಳಿದ್ದಾರೆ. “ಈಗಾಗಲೇ ವಿವಾದ ಸೃಷ್ಟಿಯಾಗಿದೆ, ಈ ಹೊತ್ತಿನಲ್ಲಿ ನೀವು ದೆಹಲಿಗೆ ಬಂದರೆ ಅದು ನೆಗೆಟಿವ್ ಆಗಿ ಬಿಂಬಿತವಾಗಬಹುದು. ಸದ್ಯಕ್ಕೆ ಬೆಂಗಳೂರಿನಲ್ಲೇ ಉಳಿದುಕೊಳ್ಳಿ” ಎಂದು ಸಿಎಂ ಸೂಕ್ಷ್ಮವಾಗಿ ಸಲಹೆ ನೀಡಿದ್ದಾರೆ. ಸಿಎಂ ಸಲಹೆಯ ಬೆನ್ನಲ್ಲೇ ಜಮೀರ್ ತಮ್ಮ ದೆಹಲಿ ಪ್ರವಾಸವನ್ನು ರದ್ದುಗೊಳಿಸಿ ಬೆಂಗಳೂರಿನಲ್ಲೇ ಉಳಿಯಲು ನಿರ್ಧರಿಸಿದ್ದಾರೆ.

ಖಾಸಗಿ ಗೆಸ್ಟ್ ಹೌಸ್‌ನಲ್ಲಿ ರಹಸ್ಯ ಸಭೆ:

ದೆಹಲಿ ಪ್ರವಾಸ ರದ್ದಾದ ಬೆನ್ನಲ್ಲೇ ಜಮೀರ್ ಅಹಮದ್ ಆತಂಕದಿಂದ ಮುಸ್ಲಿಂ ನಾಯಕರ ಮೊರೆ ಹೋಗಿದ್ದಾರೆ. ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ಇರುವ ಕಾಂಗ್ರೆಸ್ ನಾಯಕರೊಬ್ಬರಿಗೆ ಸೇರಿದ ಖಾಸಗಿ ಗೆಸ್ಟ್ ಹೌಸ್‌ನಲ್ಲಿ ಜಮೀರ್ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮುಸ್ಲಿಂ ಸಮುದಾಯದ ಪ್ರಮುಖ ನಾಯಕರು ಹಾಗೂ ಎಂಎಲ್ಸಿ ನಸೀರ್ ಅಹ್ಮದ್ ಖಾನ್ ಕೂಡ ಉಪಸ್ಥಿತರಿದ್ದರು ಎನ್ನಲಾಗಿದೆ. ಆಡಿಯೋ ವಿವಾದದಿಂದ ಆಗಬಹುದಾದ ರಾಜಕೀಯ ಹಾನಿಯನ್ನು ತಡೆಯುವುದು ಹೇಗೆ ಮತ್ತು ಹೈಕಮಾಂಡ್ ಮುಂದೆ ಯಾವ ರೀತಿ ಸ್ಪಷ್ಟನೆ ನೀಡಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಗಿದೆ.

ಹೆಚ್ಚಿದ ಆತಂಕ:

ವೈರಲ್ ಆಡಿಯೋದಲ್ಲಿ ಕಾಂಗ್ರೆಸ್ ವಿರೋಧಿ ಮಾತುಗಳು ಕೇಳಿಬಂದಿರುವುದು ಜಮೀರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಅದರಲ್ಲೂ ದಾವಣಗೆರೆಯ ಶಾಸಕ ಸಮರ್ಥ ಶಾಮನೂರು ಅವರು ಈ ಬಗ್ಗೆ ಹೈಕಮಾಂಡ್‌ಗೆ ದೂರು ನೀಡುವ ಎಚ್ಚರಿಕೆ ನೀಡಿರುವುದು ಜಮೀರ್ ಅವರ ನಿದ್ದೆಗೆಡಿಸಿದೆ. ಒಂದು ಕಡೆ ಇದು ‘ನಕಲಿ ಆಡಿಯೋ’ ಎಂದು ಜಮೀರ್ ವಾದಿಸುತ್ತಿದ್ದರೂ, ಪಕ್ಷದೊಳಗಿನ ಇತರ ನಾಯಕರು ಮಾತ್ರ ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

Share This Article
Facebook Twitter Copy Link Print
Previous Article Smallest fox ಜಗತ್ತಿನ ಅತಿ ಸಣ್ಣ ಗಾತ್ರದ ಫೆನ್ನೆಕ್ ಫಾಕ್ಸ್ ಪತ್ತೆ!
Next Article Nursery rhymes 12 ವರ್ಷದ ಬಾಲಕಿಯಿಂದ 38 ಶಿಶುಗೀತೆ! ಖುಷಿಪಟ್ಟ ಚೇತನ್ ಭಗತ್

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?