newsics.com/ನ್ಯೂಸಿಕ್ಸ್
ತುಳಸಿ ಗಿಡ ತುಂಬಾನೇ ಉಪಯುಕ್ತಕಾರಿ. ಅದರ ಎಲೆ ಮತ್ತು ಬೇರುಗಳು ಕೂಡ ಪ್ರಯೋಜನಕಾರಿ. ತುಳಸಿಯು ಧಾರ್ಮಿಕ ಪ್ರಾಮುಖ್ಯತೆಯನ್ನ ಹೊಂದಿದ್ದು, ಆಯುರ್ವೇದದ ದೃಷ್ಟಿಕೋನದಿಂದ ಕೂಡ ತುಳಸಿಯು ಔಷಧೀಯ ಗುಣಗಳಿಂದ ಕೂಡಿದೆ. ತುಳಸಿಯನ್ನ ಚಹಾಕ್ಕೆ ಸೇರಿಸಿ ಮಾತ್ರವಲ್ಲದೇ ಕಷಾಯ ಮಾಡಿ ಸೇವಿಸಲಾಗುತ್ತದೆ. ಇದು ಶೀತ, ಕೆಮ್ಮು, ಗಂಟಲು ನೋವು, ಜ್ವರ ಮುಂತಾದ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ. ನಮ್ಮ ಅಜ್ಜಿಯರ ಕಾಲದಿಂದಲೂ ತುಳಸಿಯನ್ನ ಮನೆಮದ್ದಾಗಿ ಬಳಸಲಾಗುತ್ತೆ. ಆದ್ರೆ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಾಲ್ಕು ತುಳಸಿ ಎಲೆಗಳನ್ನ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಏನು ಪರಿಣಾಮ ಬೀರುತ್ತದೆ ಎಂದು ನಿಮಗೆ ತಿಳಿದಿದೆಯೇ?
ಅಂಕಿಅಂಶಗಳ ಪ್ರಕಾರ, ಸುಮಾರು 101 ಮಿಲಿಯನ್ ಭಾರತೀಯರು ಮಧುಮೇಹದಿಂದ ಬಳಲುತ್ತಿದ್ದಾರೆ. ಕಳಪೆ ಆಹಾರ ಪದ್ಧತಿ, ಮಾನಸಿಕ ಒತ್ತಡ, ಕುಳಿತಲ್ಲೇ ಕೆಲಸ ಮಾಡುವ ಜೀವನಶೈಲಿ ಮತ್ತು ದೈಹಿಕ ವ್ಯಾಯಾಮದ ಕೊರತೆಯಿಂದಾಗಿ ರಕ್ತದಲ್ಲಿನ ಸಕ್ಕರೆ ಮಟ್ಟ (Blood Sugar) ಏರುಪೇರಾಗುವುದು ಸಾಮಾನ್ಯವಾಗಿದೆ. ಈ ಸಮಸ್ಯೆಗೆ ಬರೀ ಔಷಧಿಗಳನ್ನೇ ಅವಲಂಬಿಸುವ ಬದಲು, ನಮ್ಮ ಅಂಗಳದಲ್ಲಿರುವ ‘ತುಳಸಿ’ ಎಂಬ ನೈಸರ್ಗಿಕ ಔಷಧಿಯನ್ನು ಬಳಸಿಕೊಂಡು ಸಕ್ಕರೆ ಮಟ್ಟವನ್ನು ಹೇಗೆ ನಿಯಂತ್ರಿಸಬಹುದು ಎಂಬ ಮಾಹಿತಿ ಇಲ್ಲಿದೆ.
ಮೇದೋಜ್ಜೀರಕ ಗ್ರಂಥಿಯು ಇನ್ಸುಲಿನ್ ಅನ್ನು ಸರಿಯಾಗಿ ಉತ್ಪಾದಿಸಲು ಸಾಧ್ಯವಾಗದಿದ್ದಾಗ ಅಥವಾ ನಮ್ಮ ದೇಹವು ಇನ್ಸುಲಿನ್ ಅನ್ನು ಸರಿಯಾಗಿ ಬಳಸಲು ಸಾಧ್ಯವಾಗದಿದ್ದಾಗ ಮಧುಮೇಹದ ಸಮಸ್ಯೆ ಉಂಟಾಗುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಕೆಲವು ಆಯುರ್ವೇದ ವಿಧಾನಗಳಿವೆ. ಕೆಲವು ಆಯುರ್ವೇದ ಗಿಡಮೂಲಿಕೆಗಳು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಬಹಳ ಸುಲಭವಾಗಿ ನಿಯಂತ್ರಿಸುತ್ತವೆ. ಅವುಗಳಲ್ಲಿ ಒಂದು ತುಳಸಿ ಎಲೆ. ತುಳಸಿ ಧಾರ್ಮಿಕವಾಗಿ ಮಾತ್ರವಲ್ಲ ಆಯುರ್ವೇದದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ. ತುಳಸಿಯಲ್ಲಿ ಹಲವು ವಿಧದ ಆಯುರ್ವೇದ ಔಷಧೀಯ ಗುಣಗಳಿದ್ದು ಇದು ಹಲವು ಗಂಭೀರ ಕಾಯಿಲೆಗಳಿಂದ ರಕ್ಷಿಸುತ್ತದೆ.
ಮಧುಮೇಹ ನಿಯಂತ್ರಣಕ್ಕೆ ತುಳಸಿ ಬಳಸುವ 3 ಸುಲಭ ವಿಧಾನಗಳು:
ತುಳಸಿ ಚಹಾ ಅಥವಾ ಕಷಾಯ:
ನಿಮ್ಮ ದಿನವನ್ನು ಒಂದು ಕಪ್ ತುಳಸಿ ಚಹಾದೊಂದಿಗೆ ಆರಂಭಿಸಿ. ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಅದಕ್ಕೆ 5-6 ತುಳಸಿ ಎಲೆಗಳನ್ನು ಸೇರಿಸಿ ಚೆನ್ನಾಗಿ ಕುದಿಸಿ. ನೀರು ಕುದಿಯಲು ಆರಂಭಿಸಿದ ನಂತರ ಉರಿಯನ್ನು ಆರಿಸಿ, ಪಾತ್ರೆಯನ್ನು ಮುಚ್ಚಿ 2-3 ನಿಮಿಷ ಬಿಡಿ. ನಂತರ ಈ ಕಷಾಯವನ್ನು ಸೋಸಿಕೊಂಡು ಕುಡಿಯಿರಿ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸಲು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ರಾತ್ರಿ ನೆನೆಸಿದ ತುಳಸಿ ನೀರು:
ಇದು ಅತ್ಯಂತ ಪರಿಣಾಮಕಾರಿ ವಿಧಾನಗಳಲ್ಲಿ ಒಂದು. ರಾತ್ರಿ ಮಲಗುವ ಮುನ್ನ ಒಂದು ಲೋಟ ನೀರಿನಲ್ಲಿ 4-5 ತುಳಸಿ ಎಲೆಗಳನ್ನು ಹಾಕಿಡಿ. ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಎಲೆಗಳನ್ನು ತೆಗೆದು ಆ ನೀರನ್ನು ಕುಡಿಯಿರಿ. ಈ ನೀರು ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುವುದಲ್ಲದೆ, ದಿನವಿಡೀ ಸಕ್ಕರೆ ಮಟ್ಟ ಏರದಂತೆ ತಡೆಯುತ್ತದೆ.
ನೇರವಾಗಿ ಎಲೆಗಳನ್ನು ಜಗಿಯುವುದು:
ಯಾವುದೇ ತಯಾರಿ ಮಾಡಲು ಸಮಯವಿಲ್ಲದಿದ್ದರೆ, ಪ್ರತಿದಿನ ಬೆಳಿಗ್ಗೆ ಹಸಿ ತುಳಸಿ ಎಲೆಯನ್ನು ಚೆನ್ನಾಗಿ ಜಗಿದು ಅದರ ರಸವನ್ನು ನುಂಗಿ. ಒಂದು ಅಧ್ಯಯನದ ಪ್ರಕಾರ, ನಿಯಮಿತವಾಗಿ ತುಳಸಿ ಎಲೆಯನ್ನು ಸೇವಿಸುವವರಲ್ಲಿ ರಕ್ತದಲ್ಲಿನ ಸಕ್ಕರೆಯ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿರುವುದು ಕಂಡುಬಂದಿದೆ.