Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Gang ra*pe ಇಬ್ಬರು ಬಾಲಕಿಯರ ಮೇಲೆ 12‌ ಕಾಮುಕರಿಂದ ಸಾಮೂಹಿಕ ಅತ್ಯಾ*ಚಾರ, 6 ಮಂದಿ‌ ಬಂಧನ
ದೇಶಪ್ರಮುಖ

Gang ra*pe ಇಬ್ಬರು ಬಾಲಕಿಯರ ಮೇಲೆ 12‌ ಕಾಮುಕರಿಂದ ಸಾಮೂಹಿಕ ಅತ್ಯಾ*ಚಾರ, 6 ಮಂದಿ‌ ಬಂಧನ

Share
2 Min Read
SHARE

newsics.com/ನ್ಯೂಸಿಕ್ಸ್

ರಾಯ್‌ಪುರ: ಬುಡಕಟ್ಟು ಸಮುದಾಯದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ 12 ಮಂದಿ ಕಾಮುಕರ ಗುಂಪು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ (Crime News) ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ.

ಛತ್ತೀಸ್‌ಸರ್ಹದ ಸುರ್ಗುಜಾ ಜಿಲ್ಲೆಯಲ್ಲಿ ಈ ಭೀಕರ ಕೃತ್ಯ ನಡೆದಿದ್ದು, ಇಬ್ಬರು ಅಪ್ರಾಪ್ತ ಬುಡಕಟ್ಟು ಸಮುದಾಯದ ಹುಡುಗಿಯರ ಮೇಲೆ 12 ಮಂದಿ ಕಾಮುಕರು ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ನಾಲ್ವರು ಹದಿಹರೆಯದ ಹುಡುಗಿಯರು ಮದುವೆ ಕಾರ್ಯಕ್ರಮ ಮುಗಿಸಿ ತಮ್ಮ ಮನೆಗೆ ತಡರಾತ್ರಿ ನಡೆದುಕೊಂಡು ಹೋಗುತ್ತಿದ್ದಾಗ ನಿರ್ಜನ ಪ್ರದೇಶದಲ್ಲಿ ತಡೆದ 12 ಕಾಮುಕರ ಗುಂಪು ಈ ಕೃತ್ಯ ಎಸಗಿದೆ. ಅದೃಷ್ಟವಶಾತ್ ಇಬ್ಬರು ಹುಡುಗಿಯರು ಕಾಮುಕರು ಕೈಯಿಂದ ತಪ್ಪಿಸಿಕೊಂಡು ಓಡಿ ಪಾರಾಗಿದ್ದಾರೆ ಎಂದು ಎಂದು ತಿಳಿದು ಬಂದಿದೆ.

ಮಾಹಿತಿ ಪ್ರಕಾರ, ಆರು ಬೈಕ್‌ಗಳಲ್ಲಿ ಬಂದ 12 ಯುವಕರ ಗುಂಪು ನಿರ್ಜನ ಪ್ರದೇಶದಲ್ಲಿ 13-14 ವರ್ಷ ವಯಸ್ಸಿನ ನಾಲ್ಕು ಮಂದಿ ಹದಿಹರೆಯದ ಹುಡುಗಿಯರನ್ನು ತಡೆದಿದೆ. ಆಗ ಕಾಮುಕರ ಕೈಯಿಂದ ತಪ್ಪಿಸಿ ಇಬ್ಬರು ಹುಡುಗಿಯರು ಪರಾರಿಯಾಗುವಲ್ಲಿ ಯಶಸ್ವಿಯಾದರು, ಆದರೆ ಇಬ್ಬರು ಅಪ್ರಾಪ್ತ ವಯಸ್ಕರನ್ನು ಬಲವಂತವಾಗಿ ಬಂಧಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ನ್ಯೂಸ್ 18 ಹಿಂದಿ ವರದಿ ಮಾಡಿದೆ.

ಸುರ್ಗುಜಾ ಜಿಲ್ಲೆಯ ಸೀತಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಆತಂಕಕಾರಿ ಸಂಗತಿ ಎಂದರೆ ಬಂಧಿತ ಆರೋಪಿಗಳ ಪೈಕಿ ಮೂವರು ಅಪ್ರಾಪ್ತ ವಯಸ್ಕ ಬಾಲಕರು ಎಂದು ತಿಳಿದು ಬಂದಿದೆ.

ಈ ಘಟನೆಯು ಆ ಪ್ರದೇಶದಲ್ಲಿ ವ್ಯಾಪಕ ಜನಾಕ್ರೋಶವನ್ನು ಹುಟ್ಟುಹಾಕಿದೆ. ಪೊಲೀಸರ ಪ್ರಕಾರ, ಸಂತ್ರಸ್ತರು ಮದುವೆ ಸಮಾರಂಭದಿಂದ ಹಿಂತಿರುಗುತ್ತಿದ್ದಾಗ ಆರೋಪಿಗಳು ಅವರನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅಪರಾಧ ಎಸಗಿದ್ದಾರೆ. ಕೃತ್ಯದ ನಂತರ, ಗಂಭೀರ ಗಾಯಗೊಂಡಿದ್ದ ಸಂತ್ರಸ್ತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ವರದಿಯಾಗಿದೆ.

ಅಚ್ಚರಿಯ ಸಂಗತಿ ಎಂದರೆ, ಆರಂಭದಲ್ಲಿ, ಸ್ಥಳೀಯ ಆರೋಗ್ಯ ಕೇಂದ್ರದ ವೈದ್ಯಕೀಯ ವರದಿಯು ಅತ್ಯಾಚಾರವನ್ನು ದೃಢಪಡಿಸಲಿಲ್ಲ, ಇದು ಪ್ರಕರಣದ ಬಗ್ಗೆ ವಿವಾದವನ್ನು ಸೃಷ್ಟಿಸಿತು. ಆದರೆ, ಜಿಲ್ಲಾ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜಿನಲ್ಲಿ ನಂತರದ ಪರೀಕ್ಷೆಗಳು ಅತ್ಯಾಚಾರವನ್ನು ದೃಢಪಡಿಸಿದವು. ಇದರ ನಂತರ, ಪೊಲೀಸರು ತ್ವರಿತವಾಗಿ ಕಾರ್ಯನಿರ್ವಹಿಸಿ ಆರೋಪಿಯನ್ನು ಬಂಧಿಸಿದರು.

ಸಂತ್ರಸ್ತೆಯ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ, ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 70(2) ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 4(2) ಮತ್ತು 5(ಜೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸೆಕ್ಷನ್‌ಗಳ ಅಡಿಯಲ್ಲಿ ಅಪರಾಧಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ ಮತ್ತು ಅಪರಾಧ ಸಾಬೀತಾದಾಗ ಕಠಿಣ ಶಿಕ್ಷೆಗೆ ಗುರಿಯಾಗಬಹುದು.

ಘಟನೆಯ ನಂತರ, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಇಡೀ ಪ್ರಕರಣದ ಕೂಲಂಕುಶ ತನಿಖೆಗೆ ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.

Smallest fox ಜಗತ್ತಿನ ಅತಿ ಸಣ್ಣ ಗಾತ್ರದ ಫೆನ್ನೆಕ್ ಫಾಕ್ಸ್ ಪತ್ತೆ!

Revenue deficit ಕರ್ನಾಟಕ ಸೇರಿ 9 ರಾಜ್ಯಗಳಲ್ಲಿ ಆದಾಯ ಕೊರತೆ: ಕೇಂದ್ರ ಹಣಕಾಸು ಇಲಾಖೆ ಎಚ್ಚರಿಕೆ

Moringa leaves ಇಮ್ಯುನಿಟಿ ಬೂಸ್ಟರ್ ನುಗ್ಗೆ ಸೊಪ್ಪು ತಿನ್ನದಿದ್ದರೆ ಹತ್ತಾರು ಆರೋಗ್ಯ ಸಮಸ್ಯೆ!

TAGGED:Two girls gang-raped by 12 men
Share This Article
Facebook Twitter Copy Link Print
Previous Article Moringa leaves ಇಮ್ಯುನಿಟಿ ಬೂಸ್ಟರ್ ನುಗ್ಗೆ ಸೊಪ್ಪು ತಿನ್ನದಿದ್ದರೆ ಹತ್ತಾರು ಆರೋಗ್ಯ ಸಮಸ್ಯೆ!
Next Article Indigo service suspended ಬೆಂಗಳೂರು- ಶಿವಮೊಗ್ಗ ನಡುವಿನ ಇಂಡಿಗೋ‌ ವಿಮಾನ ಸೇವೆ ಸ್ಥಗಿತ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?