newsics.com/ನ್ಯೂಸಿಕ್ಸ್
ಈ ಉರಿ ಸೆಕೆಯಲ್ಲಿ ತಿನ್ನುವುದಕ್ಕೇನೂ ಬೇಡ, ತಂಪಾಗಿಡುವಂಥ ಪೇಯಗಳು ಮಾತ್ರವೇ ಸಾಕು ಎಂಬುದು ಎಲ್ಲರ ಬಯಕೆ. ಈ ಸುಡುವ ಬಿಸಿಲಿನಲ್ಲಿ ದೇಹವನ್ನು ತಂಪಾಗಿಡುವಂಥ ಪೇಯಗಳು ಇದ್ದಷ್ಟಕ್ಕೂ ಬೇಕೆನಿಸುತ್ತದೆ. ಹಾಗೆಂದು ಸದಾ ಕಾಲ ನೀರು ಕುಡಿಯಲೂ ಸಾಧ್ಯವಿಲ್ಲ. ದೇಹಕ್ಕೆ ಪೋಷಣೆಯನ್ನೂ ನೀಡಿ, ನೀರಡಿಕೆಯನ್ನೂ ಹೋಗಲಾಡಿ ಸುವಂಥ ಒಂದಿಷ್ಟು ಪೇಯಗಳು ಇಲ್ಲಿವೆ.
https://youtube.com/shorts/xzgXqaAsbcA?si=TkhVxPE1WLxdWyg8
ಸಬ್ಜಾ ಬೀಜಗಳು : ರಾತ್ರಿ ಇಡೀ ನೀರಿನಲ್ಲಿ ನೆನೆಸಿದ ಸಬ್ಜಾ ಬೀಜಗಳನ್ನು ಮರುದಿನ ಬೆಳಿಗ್ಗೆ ಸೇವಿಸುವುದರಿಂದ ದೇಹದ ಉಷ್ಣತೆ ಕಡಿಮೆಯಾಗುತ್ತದೆ. ಇದು ಜೀರ್ಣಕ್ರಿಯೆಯನ್ನು ಉತ್ತಮಗೊಳಿಸಲು ಸಹಕಾರಿ.
ನೈಸರ್ಗಿಕ ತಂಪು ಪಾನೀಯ: ಗಸಗಸೆ, ಶ್ರೀಗಂಧ ಅಥವಾ ಮಲ್ಲಿಗೆ ಹೂವುಗಳನ್ನು ನೀರಿನಲ್ಲಿ ನೆನೆಸಿ, ಆ ನೀರನ್ನು ಕುಡಿಯುವುದರಿಂದ ದೇಹಕ್ಕೆ ನೈಸರ್ಗಿಕ ತಂಪು ದೊರೆಯುತ್ತದೆ ಮತ್ತು ಬಿಸಿಲಿನಿಂದ ಉಂಟಾಗುವ ಆಯಾಸ ದೂರವಾಗುತ್ತದೆ.
ಬಿಳಿ ಈರುಳ್ಳಿ: ಬೇಸಿಗೆಯಲ್ಲಿ ಬಿಳಿ ಈರುಳ್ಳಿ ಸೇವನೆಯು ದೇಹದ ತಾಪಮಾನವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ದ್ರವಾಹಾರಕ್ಕೆ ಆದ್ಯತೆ: ಕೇವಲ ನೀರು ಮಾತ್ರವಲ್ಲದೆ ಮಜ್ಜಿಗೆ, ಎಳನೀರು ಮತ್ತು ಹಣ್ಣಿನ ರಸಗಳನ್ನು ಹೆಚ್ಚಾಗಿ ಸೇವಿಸುವುದು ಉತ್ತಮ.
ಹೆಸರುಕಾಳಿನ ಎಸರು: ಹೆಸರು ಕಾಳನ್ನು ಆರೆಂಟು ತಾಸುಗಳ ಕಾಲ ನೆನೆಸಿ, ಸ್ವಲ್ಪ ಏಲಕ್ಕಿಯೊಂದಿಗೆ ರುಬ್ಬಿಕೊಳ್ಳಿ. ತಿಳಿಯಾದ ಎಸರು ಬೇಕೆಂದರೆ ರುಬ್ಬಿದ್ದನ್ನು ಶೋಧಿಸಿಕೊಳ್ಳಿ. ಇದನ್ನೆ ರುಚಿಗೆ ಬೇಕಾದಷ್ಟು ತಂಪಾದ ಹಾಲು, ಏಲಕ್ಕಿ, ಬೆಲ್ಲ ಸೇರಿಸಿಕೊಂಡು ಸವಿಯಬಹುದು
ರಾಗಿ ತಿಳಿ: ಯಾವುದೇ ಧಾನ್ಯಗಳ ತಿಳಿಗಳು ದೇಹಕ್ಕೆ ತಂಪೆರೆಯುತ್ತವೆ. ಕೇವಲ ರಾಗಿಯೆಂದಲ್ಲ, ಅಕ್ಕಿ, ಗೋದಿ ಮುಂತಾದ ನಿಮ್ಮಿಷ್ಟದ ಯಾವುದೇ ಧಾನ್ಯಗಳ ತಿಳಿಯನ್ನು ಈ ದಿನಗಳಲ್ಲಿ ಸೇವಿಸುವುದರಿಂದ ದಾಹವೂ ನೀಗುತ್ತದೆ, ದೇಹಕ್ಕೆ ಬೇಕಾದ ಪೋಷಣೆಯೂ ಲಭಿಸುತ್ತದೆ. ತಿನ್ನುವುದೇ ಬೇಡ ಎನ್ನುವ ಈ ದಿನಗಳಲ್ಲಿ ದೇಹ ಬಳಲದಂತೆ ಈ ಮೂಲಕ ಕಾಪಾಡಿಕೊಳ್ಳಬಹುದು.
ಹಣ್ಣಿನ ರಸಗಳು: ಕಲ್ಲಂಗಡಿಯಿಂದ ಹಿಡಿದು, ಅನಾನಸ್, ಕಿತ್ತಳೆ, ದ್ರಾಕ್ಷಿ ಮುಂತಾದ ಯಾವುದೇ ರಸಭರಿತ ಹಣ್ಣುಗಳನ್ನು ಜ್ಯೂಸರ್ಗೆ ಹಾಕಿದರೆ ಶುದ್ಧ ಹಣ್ಣಿನ ರಸ ಲಭ್ಯವಾಗುತ್ತದೆ. ಮಾರುಕಟ್ಟೆಯಲ್ಲಿ ದೊರೆಯುವ ಯಾವುದೇ ಕೃತಕ ಬಣ್ಣ, ಪರಿಮಳದ ಜ್ಯೂಸ್ ಖರೀದಿಸುವ ಬದಲು, ಇಂಥ ಶುದ್ಧ ಹಣ್ಣಿನ ರಸಗಳು ಆರೋಗ್ಯಕ್ಕೆ ಬೇಕಾದ ಆರೈಕೆಯನ್ನು ನೀಡುತ್ತವೆ.
https://www.newsics.com/2026/05/02/plane-crash-5-people-including-pickleball-players-die/