Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೇ 20 ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
ಕರ್ನಾಟಕಪ್ರಮುಖ

ಮೇ 20 ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

Share
1 Min Read
SHARE

newsics.com/ನ್ಯೂಸಿಕ್ಸ್

ವೇತನ ಹೆಚ್ಚಳ ಮತ್ತು ಬಾಕಿ ಇರುವ ವೇತನದ ಹಿಂಬಾಕಿ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 20 ರಿಂದ ರಾಜ್ಯದ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಸರ್ಕಾರ ಮತ್ತು ಸಾರಿಗೆ ನೌಕರರ ನಡುವೆ ನಡೆದ ಹಲವು ಸುತ್ತಿನ ಸಂಧಾನ ಸಭೆಗಳು ವಿಫಲವಾಗಿದ್ದು, ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ.

https://youtube.com/shorts/xzgXqaAsbcA?si=TkhVxPE1WLxdWyg8

ಕರ್ನಾಟಕದ ನಾಲ್ಕೂ ಸಾರಿಗೆ ನಿಗಮಗಳಾದ KSRTC, BMTC, NWKRTC ಹಾಗೂ KKRTC ವ್ಯಾಪ್ತಿಯ ಸುಮಾರು 1.25 ಲಕ್ಷ ನೌಕರರು ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗುವುದರಿಂದ ಮೇ 20 ರಿಂದ ಬಸ್‌ಗಳು ರಸ್ತೆಗಿಳಿಯುವುದು ಅನುಮಾನವಾಗಿದ್ದು, ಲಕ್ಷಾಂತರ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಬಹುದು.

ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳು:

ಬಾಕಿ ಇರುವ 38 ತಿಂಗಳ ವೇತನದ ಹಿಂಬಾಕಿಯನ್ನು ನೌಕರರಿಗೆ ಕೂಡಲೇ ಪಾವತಿ ಮಾಡಬೇಕು.

2024ರ ಜನವರಿ 1 ರಿಂದ ಅನ್ವಯವಾಗುವಂತೆ ನೌಕರರ ಮೂಲ ವೇತನವನ್ನು ಶೇ 25ರಷ್ಟು ಹೆಚ್ಚಿಸಬೇಕು.

ಶೇ 31ರಷ್ಟು ತುಟ್ಟಿಭತ್ಯೆಯನ್ನು (DA) ಮೂಲ ವೇತನದಲ್ಲಿ ವಿಲೀನಗೊಳಿಸಬೇಕು.

ಸರ್ಕಾರ ಒಪ್ಪಿಕೊಂಡಿರುವ 26 ತಿಂಗಳ ಬಾಕಿ ಮೊತ್ತವಾದ ₹1,272 ಕೋಟಿಯನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಬೇಕು.

ಬಾಟಾ ಸೇರಿದಂತೆ ಇತರೆ ಭತ್ಯೆಗಳನ್ನು ಹೆಚ್ಚಿಸಬೇಕು ಮತ್ತು ಕೋವಿಡ್ ಸಮಯದ ಬಾಕಿ ಹಣವನ್ನು ನೀಡಬೇಕು.

ವೇತನ ಹೆಚ್ಚಳ ಮತ್ತು ಹಿಂಬಾಕಿ ಪಾವತಿ ಕುರಿತು ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರ ನೇತೃತ್ವದಲ್ಲಿ ಈಗಾಗಲೇ ಸುಮಾರು 12 ಬಾರಿ ಮಾತುಕತೆಗಳು ನಡೆದಿದ್ದರೂ ಯಾವುದೇ ಸಕಾರಾತ್ಮಕ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ.

https://www.newsics.com/2026/05/02/thinking-of-hosting-the-olympic-games-union-minister-dr-mansook-mandaviya/

TAGGED:Indefinite strike by transport employees across the state from May 20
Share This Article
Facebook Twitter Copy Link Print
Previous Article Union Minister Dr. Mansook Mandaviya ಒಲಂಪಿಕ್ ಕ್ರೀಡಾಕೂಟ ಆಯೋಜನೆಗೆ ಚಿಂತನೆ: ಕೇಂದ್ರ ಸಚಿವ ಡಾ.ಮನ್ಸೂಕ್ ಮಾಂಡವೀಯ
Next Article ಕಾರ್ಪೋರೇಟ್ ವಲಯದಲ್ಲಿ ಹೆಚ್ಚುತ್ತಿದೆ ಮಹಿಳಾ ಸಹೋದ್ಯೋಗಿಗಳ ಅಕ್ರಮ ಸಂಬಂಧ: ಯುವತಿ ಹೇಳಿದ್ದೇನು, ವಿಡಿಯೋ ನೋಡಿ

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?