newsics.com/ನ್ಯೂಸಿಕ್ಸ್
ಬೆಂಗಳೂರಲ್ಲಿ ಇನ್ನು ಏರ್ ಶೋ ನಡೆಯಲ್ಲ, ಅರಣ್ಯ ಇಲಾಖೆಯಿಂದ ಭೂಮಿ ವಶಪಡಿಸಲು ನಿರ್ಧಾರ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಹತ್ವದ ಹೇಳಿಕೆ ನೀಡಿದ್ದಾರೆ.
ದೇಶದ ಪ್ರತಿಷ್ಠಿತ ಏರೋಶೋ ನಡೆಯುವ ಜಾಗದ ವಿಚಾರವಾಗಿ ಜಟಾಪಟಿ ಶುರುವಾಗಿದೆ. ಗಂಟಿಗಾನಹಳ್ಳಿ ಗ್ರಾಮದ 159 ಎಕರೆ ಪ್ರದೇಶದ ಪಹಣಿ ಮತ್ತು ಮ್ಯುಟೇಶನ್ ಅರಣ್ಯ ಇಲಾಖೆಯ ಹೆಸರಲ್ಲಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಹೀಗಾಗಿ ಅರಣ್ಯ ಇಲಾಖೆಯ ಜಾಗ ಯಾವತ್ತೂ ಅರಣ್ಯ ಇಲಾಖೆಗೆ ಸೇರಿದ್ದು ಎಂದಿದ್ದಾರೆ.
ಪ್ರತಿ ಎರಡು ವರ್ಷಕ್ಕೊಮ್ಮೆ ಏರೋ ಇಂಡಿಯಾ ಏರ್ ಶೋ ಆಯೋಜನೆಗೊಳ್ಳುತ್ತದೆ. ದೇಶ, ವಿದೇಶದಿಂದ ಬರುವ ಲೋಕದ ಹಕ್ಕಿಗಳ ಶಕ್ತಿ ಪ್ರದರ್ಶನ ನಡೆಯಲಿದೆ. ಇದೇ ವೇಳೆ ಹಲವು ಹೂಡಿಕೆಗಳು ಬರಲಿದೆ. ಹಾಲಿ ವಾಯಸೇನೆ ಬಳಕೆ ಮಾಡುತ್ತಿರುವ ಭೂಮಿ ವಶ ಪಡಿಸಿಕೊಳ್ಳಲು ಅರಣ್ಯ ಇಲಾಖೆ ತೀರ್ಮಾನ ಮಾಡಿದೆ.
ಅರಣ್ಯ ಭೂಮಿ ವಾಪಸ್ ಪಡೆಯುವುದಾಗಿ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಅರಣ್ಯ ಸಂಪತ್ತು ಉಳಿಸಿ ಬೆಳೆಸುವ ಜವಾಬ್ದಾರಿ ಇದೆ. ಅರಣ್ಯ ಭೂಮಿಯಲ್ಲಿ ಒಂದಿಂಚು ಪೋಲಾಗುವುದಿಲ್ಲ. ಅರಣ್ಯ ಭೂಮಿ ನಾವು ಮರಳಿ ಪಡೆಯುತ್ತೇವೆ ಎಂದು ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
https://www.newsics.com/2026/05/03/petrol-price-likely-to-increase-by-rs-5-in-a-couple-of-weeks/