newsics.com/ನ್ಯೂಸಿಕ್ಸ್
ರಾಯ್ಪುರ: ನೆಲಬಾಂಬ್ ತೆಗೆಯುವ ಕಾರ್ಯಾಚರಣೆ ವೇಳೆ ಸುಧಾರಿತ ಸ್ಫೋಟಕ ಸಾಧನ ಸ್ಫೋಟಗೊಂಡು ಜಿಲ್ಲಾ ಮೀಸಲು ಪಡೆಯ ಮೂವರು ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಛತ್ತೀಸ್ಗಢದ ಕಂಕೇರ್ ಜಿಲ್ಲೆಯಲ್ಲಿ ನಡೆದಿದೆ. ಅಲ್ಲದೇ ಘಟನೆಯಲ್ಲಿ ಓರ್ವ ಜವಾನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
https://youtube.com/shorts/xzgXqaAsbcA?si=TkhVxPE1WLxdWyg8
ಬಸ್ಟರ್ ರೇಂಜ್ನ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ಸುಂದರರಾಜ್ ಪಟ್ಟಿಲಿಂಗಂ ಈ ಬಗ್ಗೆ ಮಾತನಾಡಿದ್ದು, ಶರಣಾದ ಮಾವೋವಾದಿ ಕಾರ್ಯಕರ್ತರ ಮಾಹಿತಿ ಸೇರಿದಂತೆ ಇತ್ತೀಚಿನ ತಿಂಗಳುಗಳಲ್ಲಿ ಸಂಗ್ರಹಿಸಿದ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭದ್ರತಾ ಪಡೆಗಳು ಕಂಕೇರ್ನಂತಹ 7 ಜಿಲ್ಲೆಗಳಲ್ಲಿ ನೂರಾರು ಐಇಡಿಗಳನ್ನು ವಶಪಡಿಸಿಕೊಂಡು ನಿಷ್ಕ್ರಿಯಗೊಳಿಸಿವೆ. ಆದರೆ, ಇಂದಿನ ದುರದೃಷ್ಟಕರ ಘಟನೆಯಲ್ಲಿ, ಕಂಕೇರ್ ಜಿಲ್ಲಾ ಪೊಲೀಸ್ ತಂಡವು ಅದನ್ನು ನಿಷ್ಕ್ರಿಯಗೊಳಿಸಲು ಪ್ರಯತ್ನಿಸುತ್ತಿರುವಾಗ ಐಇಡಿ ಆಕಸ್ಮಿಕವಾಗಿ ಸ್ಫೋಟಗೊಂಡಿದೆ ಎಂದು ಹೇಳಿದರು.
ಇನ್ಸ್ಪೆಕ್ಟರ್ ಸುಖ್ರಾಮ್ ವಟ್ಟಿ, ಕಾನ್ಸ್ಟೆಬಲ್ ಕೃಷ್ಣ ಕೊಮ್ರಾ ಮತ್ತು ಕಾನ್ಸ್ಟೆಬಲ್ ಸಂಜಯ್ ಗಢ್ಪಾಲೆ ಎಂಬ ಮೂವರು ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಕಾನ್ಸ್ಟೆಬಲ್ ಪರಮಾನಂದ ಕೊಮ್ರಾ ಅವರನ್ನು ವೈದ್ಯಕೀಯ ಸೌಲಭ್ಯಕ್ಕೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದರು.