newsics.com/ನ್ಯೂಸಿಕ್ಸ್
ರಾಯಚೂರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ವಿವಿಧ ಸಚಿವರು ಭಾಗವಹಿಸಿದ್ದ ಸಾಮೂಹಿಕ ವಿವಾಹ ಹಾಗೂ ಮುತ್ತೈದರಿಗೆ ಉಡಿ ತುಂಬುವ ಕಾರ್ಯಕ್ರಮದ ಮುಖ್ಯ ವೇದಿಕೆಯ ಬಳಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ, ಕೆಲಕಾಲ ಆತಂಕದ ವಾತಾವರಣ ನಿರ್ಮಾಣಗೊಂಡ ಘಟನೆ ಸಿಂಧನೂರಿನಲ್ಲಿ ನಡೆದಿದೆ.
ಜಿಲ್ಲೆಯ ಸಿಂಧನೂರಿ ಪಟ್ಟಣದಲ್ಲಿ ವಿಧಾನ ಪರಿಷತ್ ಸದಸ್ಯ ಬಸವನಗೌಡ ಬಾದರ್ಲಿ ನೇತೃತ್ವದಲ್ಲಿ ಸಮಾರಂಭ ಆಯೋಜಿಸಲಾಗಿತ್ತು. 150 ಜೋಡಿಗಳ ಸಾಮೂಹಿಕ ವಿವಾಹ, 5000 ಮುತ್ತೈದ್ಯರಿಗೆ ಉಡಿ ತುಂಬುವ ಬೃಹತ್ ಸಮಾರಂಭ ಆಯೋಜಿಸಲಾಗಿತ್ತು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎನ್.ಎಸ್. ಬೋಸರಾಜು, ಮಧು ಬಂಗಾರಪ್ಪ, ಶಿವರಾಜ್ ತಂಗಡಗಿ, ಈಶ್ವರ ಖಂಡ್ರೆ, ಶಿವಾನಂದ ಪಾಟೀಲ್, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಅನೇಕ ಮಠಾಧೀಶರು, ಹಾಲಿ, ಮಾಜಿ ಶಾಸಕರು, ಸೇರಿದಂತೆ ಹಲವಾರು ಗಣ್ಯರು ಆಗಮಿಸಿದ್ದರು.
ವೇದಿಕೆಯ ಸಮೀಪದ ವಿದ್ಯುತ್ ಅಲಂಕಾರ ವ್ಯವಸ್ಥೆಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಹೊಗೆ ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕ ವಾತಾವರಣ ನಿರ್ಮಾಣಗೊಂಡು ಜನರಲ್ಲಿ ಭೀತಿ ಎದುರಾಯಿತು. ಆಗ ಕೂಡಲೇ ವಿದ್ಯುತ್ ಸರಬರಾಜು ಸ್ಥಗಿತಗೊಳಿಸುವ ಮೂಲಕ ಆತಂಕವನ್ನು ದೂರ ಮಾಡಲಾಯಿತು.
Bangalore Air Show ಭೂಮಿ ವಾಪಸ್ಗೆ ನಿರ್ಧಾರ: ಬೆಂಗಳೂರು ಏರ್ ಶೋಗೆ ಖಂಡ್ರೆ ವಿಘ್ನ!
IMD Weather Forecast ಬೆಂಗಳೂರಿನಲ್ಲಿ ಸುಡು ಬಿಸಿಲು : 35-37 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಉಷ್ಣಾಂಶ
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ: ಹನಿಯೂರು ಚಂದ್ರೇಗೌಡನ ಅಸಲಿ ಮುಖ ತನಿಖೆಯಲ್ಲಿ ಬಯಲು