newsics.com/ನ್ಯೂಸಿಕ್ಸ್
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಅವರು ಸುಪ್ರೀಂ ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು.
ಸಹ ಕೈದಿಗಳು ನನ್ನನ್ನು ನಿಂದನೆ ಮಾಡುವುದಲ್ಲದೆ, ಬೆದರಿಕೆಗಳನ್ನು ಹಾಕುತ್ತಿದ್ದಾರೆ. ಮೂಲಭೂತ ಸೌಕರ್ಯಗಳಾದ ಸರಿಯಾದ ಆಹಾರ, ಬಟ್ಟೆ ಮತ್ತು ಹಾಸಿಗೆ ಪಡೆಯಲು ತಾರತಮ್ಯ ಮಾಡಲಾಗುತ್ತಿದೆ ಎಂದು ಜಾಮೀನು ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದರು.
ನಿಯಮಗಳನ್ನು ಮೀರಿ ನನ್ನನ್ನು ಕ್ವಾರಂಟೈನ್ ಸೆಲ್ನಲ್ಲಿ ಇರಿಸಲಾಗಿದೆ. ಇದರಿಂದ ಮಾನಸಿಕ ಮತ್ತು ದೈಹಿಕವಾಗಿ ತೀವ್ರ ಹಾನಿಯಾಗುತ್ತಿದೆ. ಸಹಕೈದಿಗಳಿಂದ ನಿರಂತರ ಬೆದರಿಕೆ, ನಿಂದನೆ ಮತ್ತು ಮೂದಲಿಕೆಯಂತಹ ಪ್ರಚೋದನೆಗಳು ಎದುರಾಗುತ್ತಿವೆ. ಮಾಧ್ಯಮಗಳಲ್ಲಿ ನನ್ನ ವಿರುದ್ಧ ನಡೆಯುತ್ತಿರುವ ನೆಗೆಟಿವ್ ಪ್ರಚಾರದಿಂದ ಜೈಲಿನ ಒಳಗಿನ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದೆ ಎಂದು ನೋವು ತೋಡಿಕೊಂಡಿದ್ದಾರೆ.
ಇತರ ಕೈದಿಗಳಿಗೆ ಹೋಲಿಸಿದರೆ ತಮಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಅವರು, ಕುಟುಂಬಸ್ಥರ ಭೇಟಿಗೆ ಸಮಾನ ಸಮಯ ನೀಡುತ್ತಿಲ್ಲ ಹಾಗೂ ಹೊರಗಿನಿಂದ ಆಹಾರ, ಬಟ್ಟೆ ಮತ್ತು ಹಾಸಿಗೆ ಪಡೆಯಲು ಅವಕಾಶ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದರೂ ಕೇವಲ 2-3 ಬಾರಿ ಮಾತ್ರ ಫಿಸಿಯೋಥೆರಪಿ ಮಾಡಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.