newsics.com/ನ್ಯೂಸಿಕ್ಸ್
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾರಿನೊಳಗೆ ಮಹಿಳೆ ಸುಟ್ಟು ಮೃತಪಟ್ಟಿದ್ದ ನಿಗೂಢ ಪ್ರಕರಣದ ತನಿಖೆಯಲ್ಲಿ ಸತ್ಯ ಬಯಲಾಗಿದೆ.
ಪ್ರಿಯತಮೆಯು ತನ್ನ ಪತಿಯನ್ನು ಬಿಟ್ಟು ಬರಲು ನಿರಾಕರಿಸಿದ್ದರಿಂದ ಆಕ್ರೋಶಗೊಂಡ ಪ್ರಿಯಕರನೇ ಅವಳನ್ನು ಕೊಲೆ ಮಾಡಿ, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ಮಹಿಳೆಯನ್ನು ದೇವನಹಳ್ಳಿ ಮೂಲದ ಸುಜಾತಾ (35) ಎಂದು ಗುರುತಿಸಲಾಗಿದೆ. ಆರೋಪಿ ಪ್ರಿಯಕರ ರಾಮಾಂಜಿನಪ್ಪ ಈ ಕೃತ್ಯ ಎಸಗಿ ನಂತರ ತಾನೂ ಸೂಸೈಡ್ ಮಾಡಿಕೊಂಡಿದ್ದಾನೆ.
ರಾಮಾಂಜಿನಪ್ಪ ಮತ್ತು ಸುಜಾತಾ ನಡುವೆ ಅನೈತಿಕ ಸಂಬಂಧವಿತ್ತು. ಇದೇ ಕಾರಣಕ್ಕಾಗಿ ರಾಮಾಂಜಿನಪ್ಪ ನಾಲ್ಕು ತಿಂಗಳ ಹಿಂದೆ ತನ್ನ ಪತ್ನಿಗೆ ವಿಚ್ಛೇದನ ನೀಡಿದ್ದನು. ಇದೇ ರೀತಿ ಸುಜಾತಾ ಕೂಡ ತನ್ನ ಪತಿಯನ್ನು ಬಿಟ್ಟು ಬರಬೇಕೆಂದು ಆತ ಒತ್ತಾಯಿಸುತ್ತಿದ್ದನು.ಸುಜಾತಾ ತನ್ನ ಪತಿಯನ್ನು ಬಿಟ್ಟು ಬರಲು ಒಪ್ಪದಿದ್ದಾಗ, ಸಿಟ್ಟಿಗೆದ್ದ ರಾಮಾಂಜಿನಪ್ಪ ದೊಡ್ಡಬಳ್ಳಾಪುರ ತಾಲೂಕಿನ ಜಿಂಕೆ ಬಚ್ಚಹಳ್ಳಿ ಬಳಿ ಕಾರಿನಲ್ಲಿ ಅವಳಿಗೆ ಹೊಡೆದು ಕೊಲೆ ಮಾಡಿದ್ದಾನೆ. ನಂತರ ಪೆಟ್ರೋಲ್ ಸುರಿದು ಕಾರಿಗೆ ಬೆಂಕಿ ಹಚ್ಚಿ ಅಲ್ಲಿಂದ ಪರಾರಿಯಾಗಿದ್ದನು.
ಪೊಲೀಸರು ತನಿಖೆ ನಡೆಸುತ್ತಿದ್ದ ವೇಳೆ, ಬೆಂಗಳೂರಿನ ಬಿಡದಿ ಸಮೀಪದ ರೈಲ್ವೆ ಹಳಿಗಳ ಬಳಿ ರಾಮಾಂಜಿನಪ್ಪನ ಶವ ಪತ್ತೆಯಾಗಿದೆ. ಆತ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ದೃಢಪಟ್ಟಿದೆ.