newsics.com/ನ್ಯೂಸಿಕ್ಸ್
ತಮಿಳುನಾಡು ರಾಜಕೀಯದಲ್ಲಿ ರಾತ್ರೋ ರಾತ್ರಿ ಮಹತ್ವದ ಬೆಳವಣಿಗೆಗಳು ನಡೆದಿದ್ದು, ವಿಜಯ್ ಸರ್ಕಾರ ರಚನೆಗೆ ಕೆಲ ಅಡೆತಡೆಗಳು ಉಂಟಾಗಿದೆ. ದಳಪತಿ ವಿಜಯ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನ ರಾಜ್ಯಪಾಲರು ಬಹುಮತ ಸಾಬೀತುಪಡಿಸಲು ಕರೆಯದ ಕಾರಣ ಮುಂದೂಡಲಾಗಿದೆ. ಜೊತೆ ವಿಜಯ್ಗೆ ಮುಖ್ಯಮಂತ್ರಿ ಭದ್ರತೆ ರದ್ದಾಗಿದೆ.
https://youtube.com/shorts/iatQVbaFb3g?si=spJ72cQdl8luCXZE
ವಿಧಾನಸಭಾ ಚುನಾವಣೆಯಲ್ಲಿ ಟಿಡಿಪಿ 108 ಸ್ಥಾನಗಳನ್ನ ಗೆಲ್ಲುವ ಮೂಲಕ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಟಿಡಿಪಿ ನಾಯಕ ವಿಜಯ್ ತಮಿಳುನಾಡು ರಾಜ್ಯಪಾಲ ಅರ್ಲೇಕರ್ ಅವರನ್ನ ಭೇಟಿ ಮಾಡಿ ಸರ್ಕಾರ ರಚಿಸುವ ಹಕ್ಕನ್ನು ಪ್ರತಿಪಾದಿಸಿದ್ರು, ಆದ್ರೆ ರಾಜ್ಯಪಾಲರು ಬಹುಮತ ಸಾಬೀತುಪಡಿಸಲು ಅವರನ್ನ ಕರೆಯದ ಕಾರಣ ಪ್ರಮಾಣವಚನವನ್ನ ಮುಂದೂಡಲಾಗ್ತಿದೆ.
ಟಿವಿಕೆ 108 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ನಂತರ, ಟಿವಿಕೆ ನಾಯಕ ವಿಜಯ್ ಅವರಿಗೆ 4 ಬೆಂಗಾವಲು ಭದ್ರತಾ ವಾಹನಗಳನ್ನ ಒಳಗೊಂಡ ಪೊಲೀಸ್ ರಕ್ಷಣೆಯನ್ನು ಒದಗಿಸಲಾಯಿತು. 50ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಭದ್ರತಾ ಕರ್ತವ್ಯದಲ್ಲಿ ಭಾಗಿಯಾಗಿದ್ದರು, ಆದ್ರೆ ಇದನ್ನ ರಾತ್ರೋ ರಾತ್ರಿ ಹಿಂಪಡೆಯಲಾಗಿದೆ.
ಈ ಪರಿಸ್ಥಿತಿಯಲ್ಲಿ, ವಿಜಯ್ ಸರ್ಕಾರ ರಚಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಪತ್ರ ಸಲ್ಲಿಸಿದ್ರು. ಆದ್ರೆ, ಬಹುಮತದ ಕೊರತೆಯಿಂದಾಗಿ ರಾಜ್ಯಪಾಲರು ಅವರನ್ನ ಸರ್ಕಾರ ರಚಿಸಲು ಆಹ್ವಾನಿಸಲಿಲ್ಲ ಎನ್ನಲಾಗ್ತಿದೆ. ಈ ಪರಿಸ್ಥಿತಿಯಲ್ಲಿ, ಕಳೆದ ಎರಡು ದಿನಗಳಿಂದ ವಿಜಯ್ ಗೆ ಒದಗಿಸಲಾಗುತ್ತಿದ್ದ ಬೆಂಗಾವಲು ಭದ್ರತೆಯನ್ನು ಪೊಲೀಸರು ಹಿಂಪಡೆದಿದ್ದಾರೆ.
https://www.newsics.com/2026/05/07/prime-minister-modi-to-visit-bengaluru-on-may-10/