newsics.com/ನ್ಯೂಸಿಕ್ಸ್
ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
https://youtube.com/shorts/iatQVbaFb3g?si=spJ72cQdl8luCXZE
ಹಾಸನ, ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಆಲಿಕಲ್ಲು ಮಳೆಯಾಗಲಿದ್ದು, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೇ 7 ಮತ್ತು 8 ರಂದು ಬೆಳಗಾವಿ, ಉತ್ತರ ಕನ್ನಡ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಇವುಗಳನ್ನು ಹೊರತುಪಡಿಸಿ ರಾಜ್ಯದ ಉಳಿದೆಲ್ಲಾ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಎಲ್ಲೋ ಅಲರ್ಟ್ ಜಾರಿಯಲ್ಲಿರುತ್ತದೆ.
ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ. ಈ ಆರು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರೆಲ್ಲಾ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ.