Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಟ ದಳಪತಿ ವಿಜಯ್ ಸಿಎಂ ಪಟ್ಟ ಮಿಸ್ ಆಯ್ತಾ?
ಪ್ರಮುಖಮನರಂಜನೆ

ನಟ ದಳಪತಿ ವಿಜಯ್ ಸಿಎಂ ಪಟ್ಟ ಮಿಸ್ ಆಯ್ತಾ?

Share
2 Min Read
SHARE

newsics.com/ನ್ಯೂಸಿಕ್ಸ್

ನಟ ವಿಜಯ್ ಜೊಸೆಫ್ ಅವರ ಟಿವಿಕೆ ಪಕ್ಷ 108 ಸ್ಥಾನ ಗೆದ್ದು ದಾಖಲೆ ಬರೆದಿದೆ ನಿಜ. ಆದರೆ ಸರ್ಕಾರ ರಚಿಸುವ ಧಾವಂತದಲ್ಲಿ ಮಾಡಿದ ಒಂದು ತಪ್ಪು ವಿಜಯ್ ಮುಖ್ಯಮಂತ್ರಿ ಪಟ್ಟವನ್ನೇ ಕಸಿದುಕೊಂಡಿದೆ ಎನ್ನುತ್ತಿದ್ದಾರೆ
ರಾಜಕೀಯ ಪಂಡಿತರು.

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನ ಗೆದ್ದು ಅತಿದೊಡ್ಡ ಪಕ್ಷವಾದರೂ ರಾಜಕೀಯದ ಅನುಭವದ ಕೊರತೆಯಿಂದಾಗಿ ನಟ ವಿಜಯ್ ಮತ್ತು ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದೆ.
ಬಹುಮತ ಇಲ್ಲದ ಕಾರಣ ಸರ್ಕಾರ ರಚಿಸಲು ಹಕ್ಕು ಮಂಡಿಸಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿಯಾದ ವಿಜಯ್‌ಗೆ ನಿರಾಸೆಯಾಗಿದೆ. ಟಿವಿಕೆ ನಾಯಕತ್ವ ಮಾಡಿದ ಒಂದು ಸಣ್ಣ ತಾಂತ್ರಿಕ ತಪ್ಪೇ ವಿಜಯ್ ಅವರ ಮುಖ್ಯಮಂತ್ರಿ ಕುರ್ಚಿಗೆ ಅಡ್ಡಗಾಲಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಒಟ್ಟು 234 ಸ್ಥಾನಗಳಿರುವ ತಮಿಳುನಾಡು ವಿಧಾನಸಭೆಯಲ್ಲಿ ಸರ್ಕಾರ ರಚಿಸಲು 118 ಶಾಸಕರ ಬಲ ಬೇಕು. ಟಿವಿಕೆ 108 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ವಿಜಯ್ ಸ್ಪರ್ಧಿಸಿದ್ದ ಎರಡು ಕ್ಷೇತ್ರಗಳಲ್ಲಿ ಗೆದ್ದಿದ್ದು, ಒಂದು ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಆಗ ಪಕ್ಷದ ಬಲ 107ಕ್ಕೆ ಇಳಿಯಲಿದೆ. ಬಹುಮತಕ್ಕೆ ಇನ್ನೂ 11 ಸ್ಥಾನಗಳ ಕೊರತೆ ಇದ್ದು, 5 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ವಿಜಯ್‌ಗೆ ಬೆಂಬಲ ಘೋಷಿಸಿತ್ತು. ಇದರೊಂದಿಗೆ ಟಿವಿಕೆ-ಕಾಂಗ್ರೆಸ್ ಮೈತ್ರಿಕೂಟದ ಬಲ 112ಕ್ಕೆ ಏರಿಕೆಯಾಗಿತ್ತು. ಆದರೆ, ಇಲ್ಲೇ ವಿಜಯ್ ರಾಜಕೀಯವಾಗಿ ಎಡವಟ್ಟು ಮಾಡಿಕೊಂಡಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ.

ಸಾಂಪ್ರದಾಯಿಕವಾಗಿ, ಅತಂತ್ರ ವಿಧಾನಸಭೆ ನಿರ್ಮಾಣವಾದಾಗ ಅತಿದೊಡ್ಡ ಪಕ್ಷದ ನಾಯಕನಾಗಿ ವಿಜಯ್ ತಮ್ಮ ಪಕ್ಷದ ಶಾಸಕರ ಸಹಿ ಇರುವ ಪತ್ರವನ್ನು ಮಾತ್ರ ರಾಜ್ಯಪಾಲರಿಗೆ ನೀಡಬೇಕಿತ್ತು. ಆಗ ರಾಜ್ಯಪಾಲರು ವಿಜಯ್‌ಗೆ ಸರ್ಕಾರ ರಚಿಸಲು ಅವಕಾಶ ನೀಡಿ, ನಂತರ ಸದನದಲ್ಲಿ ಬಹುಮತ ಸಾಬೀತುಪಡಿಸಲು ಸೂಚಿಸುತ್ತಿದ್ದರು. ಆದರೆ, ವಿಜಯ್ ತಮ್ಮ ಪತ್ರದಲ್ಲಿ ಕಾಂಗ್ರೆಸ್ ಶಾಸಕರ ಸಹಿಯನ್ನೂ ಸೇರಿಸಿದ್ದರಿಂದ, ರಾಜ್ಯಪಾಲರು ಇದನ್ನು ಮೈತ್ರಿ ಸರ್ಕಾರದ ಪ್ರಸ್ತಾಪವೆಂದು ಪರಿಗಣಿಸಿದರು. ಮೈತ್ರಿಕೂಟಕ್ಕೆ ಸರ್ಕಾರ ರಚಿಸಲು ಬೇಕಾದ 118 ಶಾಸಕರ ಬೆಂಬಲ ಇಲ್ಲದ ಕಾರಣ, ರಾಜ್ಯಪಾಲರು ವಿಜಯ್
ಮನವಿಯನ್ನು ತಿರಸ್ಕರಿಸಿದ್ದಾರೆ.

ಎರಡನೇ ಬಾರಿಗೆ ರಾಜ್ಯಪಾಲರನ್ನು ಭೇಟಿಯಾದಾಗಲೂ ಬಹುಮತ ಸಾಬೀತುಪಡಿಸಲು ಬೇಕಾದ ದಾಖಲೆಗಳನ್ನು ಹಾಜರುಪಡಿಸಲು ವಿಜಯ್‌ಗೆ ಸಾಧ್ಯವಾಗಲಿಲ್ಲ ಎಂದು ರಾಜಭವನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಉತ್ತಮ ರಾಜಕೀಯ ಸಲಹೆಗಾರರ ಕೊರತೆಯೇ ವಿಜಯ್‌ಗೆ ಮುಳುವಾಯಿತು ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಅತಿದೊಡ್ಡ ಪಕ್ಷದ ನಾಯಕನಾಗಿ ಮಾತ್ರ ಹಕ್ಕು ಮಂಡಿಸಿದ್ದರೆ, ವಿಜಯ್ ಈಗಾಗಲೇ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದರು ಎನ್ನುವುದು ತಜ್ಞರ ಅಭಿಪ್ರಾಯ. ಸದ್ಯಕ್ಕೆ ತಮಿಳುನಾಡು ರಾಜಕೀಯ ತೀವ್ರ ಕುತೂಹಲ ಕೆರಳಿಸಿದೆ.

ವಿಜಯ್ ನಿರಾಸೆ ಮಾತ್ರವಲ್ಲ, ಇತ್ತ ಡಿಎಂಕೆ ಹಾಗೂ ಎಐಡಿಂಕೆ ಒಂದಾಗಿ ಸರ್ಕಾರ ರಚಿಸಲು ಕಸರತ್ತು ನಡೆಸುತ್ತಿದೆ. ಹೀಗೆ ಆದರೆ 107 ಶಾಸಕರು ಸಾಮೂಹಿಕವಾಗಿ ರಾಜೀನಾಮೆ ನೀಡುವುದಾಗಿ ವಿಜಯ್ ಎಚ್ಚರಿಕೆ ನೀಡಿದ್ದಾರೆ. ಇತ್ತ ಕೆಲ ಪಕ್ಷಗಳು ವಿಜಯ್ ಟಿವಿಕೆಗೆ ಬೆಂಬಲ ನೀಡುವುದಾಗಿ ಹೇಳಿದೆ. ಈ ನಡುವೆ ವಿಸಿಕೆ ಪಕ್ಷ ಶೀಘ್ರದಲ್ಲೇ ಬೆಂಬಲ ನೀಡುವ ಕುರಿತು ನಿರ್ಧಾರ ಪ್ರಕಟಿಸುವುದಾಗಿ ಹೇಳಿದೆ.

ದಳಪತಿ ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದು ಹೆಚ್​​.ಡಿ. ಕುಮಾರಸ್ವಾಮಿ ಹೇಳಿದ್ಯಾಕೆ?

TAGGED:Actor Vijay misses out on CM post? TVK's blunder due to lack of experience
Share This Article
Facebook Twitter Copy Link Print
Previous Article ದಳಪತಿ ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದು ಹೆಚ್​​.ಡಿ. ಕುಮಾರಸ್ವಾಮಿ ಹೇಳಿದ್ಯಾಕೆ?
Next Article ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚಿಸುವುದು ನಿಶ್ಚಿತ?

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?