Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vijay TVK ಮ್ಯಾಜಿಕ್ ನಂಬರ್ ತಲುಪಲಾರದೆ ದಳಪತಿ ಕಂಗಾಲು: ಇಂದಿನ ವಿಜಯ್ ಪಟ್ಟಾಭಿಷೇಕಕ್ಕೆ ಮತ್ತೆ ರಾಜ್ಯಪಾಲರ ಬ್ರೇಕ್!
ದೇಶಪ್ರಮುಖ

Vijay TVK ಮ್ಯಾಜಿಕ್ ನಂಬರ್ ತಲುಪಲಾರದೆ ದಳಪತಿ ಕಂಗಾಲು: ಇಂದಿನ ವಿಜಯ್ ಪಟ್ಟಾಭಿಷೇಕಕ್ಕೆ ಮತ್ತೆ ರಾಜ್ಯಪಾಲರ ಬ್ರೇಕ್!

Share
2 Min Read
SHARE

newsics.com/ನ್ಯೂಸಿಕ್ಸ್

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಕ್ಷಣಕ್ಕೊಂದು ತಿರುವು ಸಿಗುತ್ತಿದೆ. ನಾಳೆ (ಶನಿವಾರ) ಮುಖ್ಯಮಂತ್ರಿಯಾಗಿ ನಟ ವಿಜಯ್ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂಬ ನಿರೀಕ್ಷೆಗಳ ನಡುವೆಯೇ, ಈಗ ಲೋಕಭವನ (ರಾಜಭವನ) ಮೂಲಗಳಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ.

https://youtube.com/shorts/gjYZnQ_VPsc?si=qVOf4mHBsp6RN8ZV

ರಾಜ್ಯದಲ್ಲಿ ನೂತನ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದ ತಮಿಳಗ ವೆಟ್ರಿ ಕಳಗಂ ಅಧ್ಯಕ್ಷ ವಿಜಯ್ ಅವರಿಗೆ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣವಚನ ಸ್ವೀಕರಿಸಲು ಅನುಮತಿ ನಿರಾಕರಿಸಿದ್ದಾರೆ.

ಶನಿವಾರ ಬೆಳಿಗ್ಗೆ ನಡೆಯಬೇಕಿದ್ದ ಪಟ್ಟಾಭಿಷೇಕದ ಆಸೆ ಈಗ ಕಮರಿಹೋಗಿದ್ದು, ಸಂಖ್ಯಾಬಲದ ಕೊರತೆಯೇ ವಿಜಯ್‌ಗೆ ಅತಿದೊಡ್ಡ ವಿಘ್ನವಾಗಿ ಪರಿಣಮಿಸಿದೆ.

234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಬಹುಮತಕ್ಕೆ 118 ಶಾಸಕರ ಬೆಂಬಲ ಅಗತ್ಯವಿದೆ. ಆದರೆ, ವಿಜಯ್ ಅವರು ಕೇವಲ 116 ಶಾಸಕರ ಬೆಂಬಲವನ್ನು ಮಾತ್ರ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಹುಮತಕ್ಕೆ ಇನ್ನೂ ಇಬ್ಬರು ಶಾಸಕರ ಕೊರತೆಯಿದ್ದು, ರಾಜ್ಯಪಾಲರು ಕೇಳಿದಂತೆ ಬೆಂಬಲದ ಅಧಿಕೃತ ಪತ್ರಗಳನ್ನು ಒದಗಿಸಲು ವಿಜಯ್ ವಿಫಲರಾಗಿದ್ದಾರೆ.

ವಿಜಯ್ ಅವರು ವಿಸಿಕೆ (VCK), ಎಎಮ್‌ಎಂಕೆಯ ಟಿಟಿವಿ ದಿನಕರನ್ ಮತ್ತು ಐಯುಎಂಎಲ್ (IUML) ಪಕ್ಷಗಳ ಜೊತೆ ತೀವ್ರ ಮಾತುಕತೆ ನಡೆಸಿದ್ದರು. ಆದರೆ, ಅಂತಿಮ ಕ್ಷಣದಲ್ಲಿ ಐಯುಎಂಎಲ್ ತಾನು ಟಿವಿಕೆ ಮೈತ್ರಿಕೂಟದ ಭಾಗವಲ್ಲ ಎಂದು ಪತ್ರ ಬಿಡುಗಡೆ ಮಾಡಿದೆ. ಇತ್ತ ಟಿಟಿವಿ ದಿನಕರನ್ ಅವರು ಎಐಎಡಿಎಂಕೆಗೆ ಬೆಂಬಲ ಘೋಷಿಸಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಇನ್ನು ವಿಸಿಕೆ ಕೂಡ ಅಧಿಕೃತ ಬೆಂಬಲದ ಪತ್ರ ನೀಡಲು ಹಿಂದೇಟು ಹಾಕಿದೆ ಎನ್ನಲಾಗಿದೆ.

ಬಿಜೆಪಿಯಂತಹ ಕೋಮುವಾದಿ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳಬಾರದು ಎಂಬ ಷರತ್ತಿನ ಮೇಲೆ ಕಾಂಗ್ರೆಸ್ ವಿಜಯ್‌ಗೆ ಬೆಂಬಲ ನೀಡಿದೆ. ಈ ನಡುವೆ ಡಿಎಂಕೆ ಮತ್ತು ಕಾಂಗ್ರೆಸ್ ನಡುವಿನ 7 ವರ್ಷಗಳ ದೋಸ್ತಿ ಕಡಿದುಬಿದ್ದಿದ್ದು, ಪರಸ್ಪರ ‘ನಂಬಿಕೆ ದ್ರೋಹ’ದ ಆರೋಪಗಳು ಕೇಳಿಬರುತ್ತಿವೆ. ಸಿಪಿಐ ಮತ್ತು ಸಿಪಿಐ(ಎಂ) ಪಕ್ಷಗಳು ವಿಜಯ್ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುವುದಾಗಿ ಘೋಷಿಸಿವೆ.

ಒಟ್ಟಾರೆಯಾಗಿ, ತಮಿಳುನಾಡಿನ ಗದ್ದುಗೆ ಏರಲು ಸಜ್ಜಾಗಿದ್ದ ವಿಜಯ್ ಅವರಿಗೆ ಮಿತ್ರಪಕ್ಷಗಳ ಕೊನೆಕ್ಷಣದ ‘ಬೆಂಬಲ ವಾಪಸ್’ ಅಥವಾ ‘ಬೆಂಬಲ ನೀಡಲು ವಿಳಂಬ’ ಮಾಡುತ್ತಿರುವುದು ಭಾರಿ ಹಿನ್ನಡೆಯನ್ನುಂಟು ಮಾಡಿದೆ. ಈ ರಾಜಕೀಯ ಜಿದ್ದಾಜಿದ್ದಿ ನಾಳೆ ಯಾವ ತಿರುವು ಪಡೆಯಲಿದೆ ಎಂಬುದು ಇಡೀ ದೇಶದ ಕುತೂಹಲಕ್ಕೆ ಕಾರಣವಾಗಿದೆ.

https://www.newsics.com/2026/05/09/the-secret-to-your-health-lies-in-the-hair-growing-on-your-toes/

TAGGED:Thalapathy Kangaluunable to reach the magic number: Governor's break for today's Vijay coronation again!
Share This Article
Facebook Twitter Copy Link Print
Previous Article Toe Hair ಕಾಲ್ಬೆರಳುಗಳ ಮೇಲೆ ಬೆಳೆಯುವ ಕೂದಲಿನಲ್ಲಿ ಅಡಗಿದೆ ನಿಮ್ಮ ಆರೋಗ್ಯದ ಗುಟ್ಟು
Next Article ಕೈದಿ ಜತೆ ಜೈಲಾಧಿಕಾರಿಗೆ ಪ್ರೀತಿ : ಕೊಲೆ ಆರೋಪಿಯನ್ನೇ ವರಿಸಿದ ಮಹಿಳಾ ಪೊಲೀಸ್ ಅಧಿಕಾರಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?