newsics.com/ನ್ಯೂಸಿಕ್ಸ್
ಹುಟ್ಟು ಸಾವು ನಮ್ಮ ಕೈಯಲ್ಲಿ ಇಲ್ಲ. ಆದ್ರೆ ಮದುವೆ ಮಾತ್ರ ನಮ್ಮ ಕೈಯಲ್ಲಿರುತ್ತೆ. ಹಾಗಾಗಿ ನಮಗೆ ಇಷ್ಟವಾದವರನ್ನೇ ಮದುವೆ ಆಗ್ಬೇಕು ಅಂತ ಎಲ್ಲರೂ ಬಯಸ್ತಾರೆ.ಆದ್ದರಿಂದ ಸರಿಯಾದ ಜೀವನ ಸಂಗಾತಿಯನ್ನು ಆಯ್ಕೆ ಮಾಡುವುದು ತುಂಬಾನೇ ಮುಖ್ಯವಾಗಿದೆ. ಜೀವನ ಪಯಣದಲ್ಲಿ ನಿಮ್ಮ ಜೊತೆಗಿರುವ ಸಂಗಾತಿ ಸದ್ಗುಣಶೀಲರಾಗಿದ್ದರೆ, ಆ ಮನೆ ಸ್ವರ್ಗವಾಗುತ್ತದೆ.
ಮಹಿಳೆಯೊಬ್ಬಳು ನಗುತ್ತಾ ಇರೋದನ್ನು ನೋಡಿದರೆ ಎಲ್ಲರೂ ಆಕೆ ಎಷ್ಟು ಅದೃಷ್ಟವಂತೆ, ಜೀವನದಲ್ಲಿ ಸಂತೋಷವಾಗಿದ್ದಾಳೆ ಎಂದು ಭಾವಿಸುತ್ತಾರೆ. ಆದರೆ ಅನೇಕರು ಹೊರಗಿನಿಂದ ನಗುತ್ತಿದ್ದರೂ ಒಳಗೊಳಗೇ ದುಃಖ ಅನುಭವಿಸುತ್ತಿರುತ್ತಾರೆ. ಜೀವನದ ಬಗ್ಗೆ ಅತೃಪ್ತಿ ಹೊಂದಿರುತ್ತಾರೆ. ತಮ್ಮೊಳಗಿನ ಆಂತರಿಕ ಪ್ರಕ್ಷುಬ್ಧತೆಯನ್ನು ಮರೆಮಾಚಿ ಸಂತೋಷದಿಂದಿರುವಂತೆ ನಟಿಸುತ್ತಿರುತ್ತಾರೆ.
ಅನೇಕ ಪುರುಷರು ಸುಂದರ ಮಹಿಳೆಯರನ್ನು ಮದುವೆಯಾಗಲು ಬಯಸುತ್ತಾರೆ. ಹೊರನೋಟಕ್ಕೆ ಚೆನ್ನಾಗಿ ಕಾಣುವವರು ತಮಗೆ ಖುಷಿ ಕೊಡುತ್ತಾರೆ ಎಂದು ಭಾವಿಸುತ್ತಾರೆ. ಆದರೆ ಇದು ಕೂಡ ತಪ್ಪಾಗಿರಬಹುದು. ಚಾಣಕ್ಯ ನೀತಿ ಪ್ರಕಾರ, ಹೊರನೋಟಕ್ಕೆ ಸುಂದರವಾಗಿ ಕಾಣುವ ಹೆಂಗಸರು ಒಳಗಿನಿಂದ ಸುಂದರವಾಗಿರಬೇಕೆಂದೇನೂ ಇಲ್
ಯಾವಾಗಲೂ ಇತರರ ಬಗ್ಗೆ ಕೆಟ್ಟದಾಗಿ ಮಾತನಾಡುವ ಅಥವಾ ಇತರರ ಬಗ್ಗೆ ಕೆಟ್ಟ ಆಲೋಚನೆಗಳನ್ನು ಹೊಂದಿರುವ , ಚಾಡಿ ಹೇಳುವ ಮಹಿಳೆಯರಿಂದ ದೂರವಿರಬೇಕು. ಅಂತಹ ಮಹಿಳೆಯರು ಕುಟುಂಬದಲ್ಲಿ ಅಶಾಂತಿಯನ್ನು ಉಂಟುಮಾಡುತ್ತಾರೆ. ಹಾಗಾಗಿ ಅಂತಹ ಹೆಣ್ಣಿನಿಂದ ದೂರವಿದ್ದಷ್ಟು ಒಳ್ಳೆಯದು.
ಮನೆ, ಕಾರು, ಆಭರಣ, ಹಣ ಅಂತೆಲ್ಲಾ ಭೌತಿಕ ಸೌಕರ್ಯಗಳಿಗೆ ಆದ್ಯತೆ ನೀಡುವ ಹುಡುಗಿಯರು ಅಥವಾ ಹೆಂಡತಿಯರು ತಮ್ಮ ಗಂಡನ ಭಾವನೆಗಳಿಗೆ ಎಂದಿಗೂ ಬೆಲೆ ಕೊಡಲಾರರು. ಇಂತಹ ಸ್ವಾರ್ಥಿ ಹೆಣ್ಣನ್ನು ಮದುವೆಯಾದರೆ ಜೀವನಪರ್ಯಂತ ನರಕಯಾತನೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ ಆಚಾರ್ಯ ಚಾಣಕ್ಯ.
ಆಚಾರ್ಯ ಚಾಣಕ್ಯರ ಪ್ರಕಾರ, ಇತರರನ್ನು ನಿರಂತರವಾಗಿ ಅವಮಾನಿಸುವ ಮಹಿಳೆಯನ್ನು ಎಂದಿಗೂ ಮದುವೆಯಾಗಬಾರದು. ಅಂತಹ ಹುಡುಗಿಯರು ಎಂದಿಗೂ ತಮ್ಮ ಕುಟುಂಬಕ್ಕೆ ಗೌರವವನ್ನು ನೀಡಲು ಸಾಧ್ಯವಾಗುವುದಿಲ್ಲ.
ಸುಳ್ಳು ಹೇಳುವ ಹೆಂಡತಿ ತನ್ನ ಗಂಡನ ವಿರುದ್ಧ ಸುಳ್ಳು ಹೇಳಬಹುದು. ಆದ್ದರಿಂದ, ಅವಳು ಕುಟುಂಬವನ್ನು ನಾಶಮಾಡುತ್ತಾಳೆ. ಆದ್ದರಿಂದ ಪುರುಷನು ಅಂತಹ ಮಹಿಳೆಯನ್ನು ಮದುವೆಯಾಗಬಾರದು.
ಇತರರಿಗಿಂತ ತಾವು ಶ್ರೇಷ್ಠರೆಂದು ಭಾವಿಸುವ, ಅಹಂಕಾರ ಭಾವವನ್ನು ಹೊಂದುರುವ ಹೆಣ್ಣನ್ನು ಮದುವೆಯಾಗಬಾರದು. ಏಕೆಂದರೆ ಆಕೆ ಸಂಬಂಧಗಳಿಗೆ ಗೌರವಿಸಲು ಸಾಧ್ಯವಿಲ್ಲ. ಇದು ಮನೆಯಲ್ಲಿ ಘರ್ಷಣೆಗಳಿಗೆ ಕಾರಣವಾಗಬಹುದು. ಹಾಗಾಗಿ ಇಂತಹ ಹೆಣ್ಣಿನಿಂದ ದೂರವಿರುವುದು ಉತ್ತಮ.