newsics.com/ನ್ಯೂಸಿಕ್ಸ್
ಪಶ್ಚಿಮ ಬಂಗಾಳದ ಮೊಟ್ಟ ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೀದಿಯ ಕಟ್ಟಾ ಶಿಷ್ಯನಾಗಿದ್ದ ಸುವೇಂದು, ಟಿಎಂಸಿ ತೊರೆದು ಬಿಜೆಪಿ ಸೇರಿದ್ದರು. 2 ಬಾರಿ ದೀದಿಗೆ ಸವಾಲು ಹಾಕಿದ್ದ ಸುವೇಂದು ಅಧಿಕಾರಿ ಈ ಬಾರಿ ಮಮತಾ ಬ್ಯಾನರ್ಜಿಯ ಭದ್ರಕೋಟೆ ಬಬಾನಿಪುರದಿಂದಲೇ ಗೆದ್ದು ಇತಿಹಾಸ ನಿರ್ಮಿಸಿದ್ದರು.
https://youtube.com/shorts/QmBsVJxCxsg?si=FaYAZtjO3Xv8e1rn
ಇದೀಗ ರಾಜ್ಯದ ಚುಕ್ಕಾಣಿ ಹಿಡಿದ ಬೆನ್ನಲ್ಲೇ ಆಡಳಿತದ ಮೇಲೆ ಸಂಪೂರ್ಣ ಹಿಡಿತ ಸಾಧಿಸುವ ಸ್ಪಷ್ಟ ಮುನ್ಸೂಚನೆ ನೀಡಿದ್ದಾರೆ. ಸೋಮವಾರದಂದು ನಡೆದ ಖಾತೆ ಹಂಚಿಕೆಯಲ್ಲಿ ಅತ್ಯಂತ ಸುವೇಂದು ಅಧಿಕಾರಿ ಅವರು ಮುಖ್ಯಮಂತ್ರಿ ಸ್ಥಾನದ ಜೊತೆಗೆ ಗೃಹ ಇಲಾಖೆ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಖಾತೆಗಳನ್ನು ತಮ್ಮ ಸುಪರ್ದಿಯಲ್ಲಿ ಇಟ್ಟುಕೊಂಡಿದ್ದಾರೆ.
ಪೊಲೀಸರ ಮೇಲೆ ನೇರ ನಿಯಂತ್ರಣ ಹೊಂದಲು ಅವರು ನಿರ್ಧರಿಸಿದ್ದಾರೆ. ಇನ್ನು ಸಿಬ್ಬಂದಿ ಇಲಾಖೆಯು ರಾಜ್ಯದ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ಆಡಳಿತಾತ್ಮಕ ಬದಲಾವಣೆಗಳ ಮೇಲೆ ಹಿಡಿತ ನೀಡಲಿದೆ.
ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಐವರು ಸಚಿವರಿಗೆ ಮಾತ್ರ ಖಾತೆಗಳನ್ನು ಹಂಚಿಕೆ ಮಾಡಿರುವುದು ಸುವೇಂದು ಅವರ ಕಾರ್ಯತಂತ್ರದ ಭಾಗ ಎನ್ನಲಾಗುತ್ತಿದೆ. ದಿಲೀಪ್ ಘೋಷ್ ಮತ್ತು ಅಗ್ನಿಮಿತ್ರ ಪೌಲ್ ಅವರಂತಹ ಪ್ರಭಾವಿ ನಾಯಕರಿಗೆ ಪ್ರಮುಖ ಜವಾಬ್ದಾರಿ ನೀಡಿದ್ದರೂ, ಸರ್ಕಾರದ ‘ಅಸಲಿ ಕೀಲಿ ಕೈ’ ಸುವೇಂದು ಅವರ ಬಳಿಯೇ ಇರುವುದು ಸ್ಪಷ್ಟವಾಗಿದೆ.
ಖಾತೆ ಹಂಚಿಕೆಯ ಬೆನ್ನಲ್ಲೇ ಸುವೇಂದು ಅಧಿಕಾರಿ ನೇತೃತ್ವದ ಸರ್ಕಾರ ಕೆಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಆಯುಷ್ಮಾನ್ ಭಾರತ್’ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರಲು ಅನುಮೋದನೆ ನೀಡಲಾಗಿದೆ. ಅಲ್ಲದೆ, ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ತಾತ್ವಿಕ ಒಪ್ಪಿಗೆ ನೀಡಿದೆ.