Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > TVK Cabinet ಸಿಎಂ ವಿಜಯ್​ ಸಂಪುಟ ಸೇರಿದ್ದ ಏಕೈಕ ಮಹಿಳಾ ಸಚಿವೆಗೆ ಬಿಗ್‌ ಶಾಕ್
ದೇಶಪ್ರಮುಖ

TVK Cabinet ಸಿಎಂ ವಿಜಯ್​ ಸಂಪುಟ ಸೇರಿದ್ದ ಏಕೈಕ ಮಹಿಳಾ ಸಚಿವೆಗೆ ಬಿಗ್‌ ಶಾಕ್

Share
2 Min Read
SHARE

newsics.com/ನ್ಯೂಸಿಕ್ಸ್

ಚೆನ್ನೈ: ತಮಿಳುನಾಡಿನಲ್ಲಿ ದಳಪತಿ ಯುಗಾರಂಭವಾಗಿದೆ. ತಮಿಳುನಾಡಿನ ನೂತನ ಸಿಎಂ ಆಗಿ ನಟ ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಿಎಂ ಪದಗ್ರಹಣ ಕಾರ್ಯಕ್ರಮದಲ್ಲಿ ಸಿಎಂ ವಿಜಯ್ ಜೊತೆ 9 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ 9 ಸಚಿವರ ಪೈಕಿ ಶಿವಕಾಶಿಯ ಮೊದಲ ಮಹಿಳಾ ಶಾಸಕಿಯಾಗಿರುವ 29 ವರ್ಷದ ಕೀರ್ತನಾ ಸಿಎಂ ವಿಜಯ್ ಅವರ ಸಚಿವ ಸಂಪುಟದಲ್ಲಿ ಏಕೈಕ ಮಹಿಳಾ ಸಚಿವರಾಗಿದ್ದಾರೆ.

https://youtube.com/shorts/wvfyhGYwVVw?si=koK0hviI-H0dDOsr

ಆದರೆ ಪ್ರಮಾಣ ವಚನ ಬೋಧಿಸಲು ಕಡ್ಡಾಯವಾಗಿರುವ ಚುನಾವಣಾ ಪ್ರಮಾಣಪತ್ರವನ್ನು ಸಲ್ಲಿಸಲು ವಿಫಲವಾದ ಕಾರಣ ತಮಿಳುನಾಡು ನೂತನ ಸರ್ಕಾರದ ಏಕೈಕ ಮಹಿಳಾ ಸಚಿವೆ ಎಸ್. ಕೀರ್ತನಾ ಅವರಿಗೆ ಬಿಗ್‌ ಶಾಕ್ ಉಂಟಾಗಿದೆ.  ಸಿಎಂ ವಿಜಯ್ ಅವರ ಸಚಿವ ಸಂಪುಟದಲ್ಲಿ ಏಕೈಕ ಮಹಿಳಾ ಸಚಿವರಾಗಿದ್ದಾರೆ.

ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಸೇರಿದಂತೆ ಎಲ್ಲಾ ಶಾಸಕರು ಮೊದಲು ತಮ್ಮ ಪ್ರಮಾಣಪತ್ರಗಳನ್ನು ಸಲ್ಲಿಸಿದರು ಮತ್ತು ನಂತರ ಅಧಿಕಾರಿಗಳು ಸಾಂವಿಧಾನಿಕ ಕಾರ್ಯವಿಧಾನದ ಪ್ರಕಾರ ಪ್ರಮಾಣ ವಚನ ಸ್ವೀಕರಿಸಲು ಕೇಳಿಕೊಂಡರು. ಸಂಪುಟದಲ್ಲಿ ಒಂಬತ್ತನೇ ಸ್ಥಾನದಲ್ಲಿರುವ ಸಚಿವೆಯಾಗಿದ್ದ ಕೀರ್ತನಾ ಅವರನ್ನು ಪ್ರಮಾಣ ವಚನ ಸ್ವೀಕರಿಸಲು ಕೊನೆಯದಾಗಿ ಕರೆಯಲಾಯಿತು.

ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಕೆ. ಶ್ರೀನಿವಾಸನ್ ಅವರು ಕೀರ್ತನಾ ಅವರ ಹೆಸರನ್ನು ಘೋಷಿಸಿ ಪ್ರಮಾಣ ವಚನ ಸ್ವೀಕರಿಸಲು ಆಹ್ವಾನಿಸಿದಾಗ, ಕೀರ್ತನಾ ಮುಖ್ಯಮಂತ್ರಿಯವರ ಕುರ್ಚಿಯ ಮುಂದೆ ಇರಿಸಲಾದ ವೇದಿಕೆಯ ಕಡೆಗೆ ನಡೆದರು. ಯಾಕೆಂದರೆ ಪ್ರಮಾಣ ವಚನ ಸ್ವೀಕರಿಸುವ ಶಾಸಕರು ಹಂಗಾಮಿ ಸ್ಪೀಕರ್ ಅವರ ಬಳಿ ಬಂದು ಅನುಮತಿ ಕೇಳುವುದು ಸಂಪ್ರದಾಯ.

ಕೀರ್ತನಾ ವೇದಿಕೆಯ ಬಳಿಗೆ ಬರುತ್ತಿದ್ದಂತೆ, ಪ್ರಧಾನ ಕಾರ್ಯದರ್ಶಿ ಕೆ. ಶ್ರೀನಿವಾಸನ್ ಕೈ ಎತ್ತಿ ಶಾಸಕ ಸ್ಥಾನದ ಪ್ರಮಾಣಪತ್ರ ಕೇಳಿದ್ದಾರೆ, ಇದು ವಿಧಾನಸಭಾ ಕಲಾಪಗಳ ನೇರ ಪ್ರಸಾರದಲ್ಲಿ ಕಂಡುಬಂದಿದೆ. ಆದರೆ, ಕೀರ್ತನಾ ಅವರು ಪ್ರಮಾಣಪತ್ರವನ್ನು ನೀಡಲು ಸಾಧ್ಯವಾಗಲಿಲ್ಲ, ಈ ವೇಳೆ ಅವರು ಏನು ಉತ್ತರಿಸಿದರು ಎಂಬುದು ಸ್ಪಷ್ಟವಾಗಿಲ್ಲ.

ಏನಾಯಿತು ಎಂದು ಕೇಳಿದಾಗ, ಅಧಿಕಾರಿಯೊಬ್ಬರು ಪಿಟಿಐಗೆ ಹೀಗೆ ಪ್ರಯಿಕ್ರಿಯೆ ನೀಡಿದ್ದಾರೆ; ‘ಅವರ ಚುನಾವಣಾ ಪ್ರಮಾಣಪತ್ರವು ಅವರ ಬಳಿ ಇರಲಿಲ್ಲ ಎಂದು ತೋರುತ್ತದೆ. ಅವರು ಪ್ರಮಾಣಪತ್ರವನ್ನು ಸಲ್ಲಿಸಲು ಸಾಧ್ಯವಾಗದ ಕಾರಣ, ಹಿರಿಯ ಅಧಿಕಾರಿ ಅವರಿಗೆ ಪ್ರಮಾಣವಚನ ಸ್ವೀಕರಿಸಲು ನಯವಾಗಿ ನಿರಾಕರಿಸಿದರು. ಅವರು ತಮ್ಮ ಚುನಾವಣಾ ಪ್ರಮಾಣಪತ್ರವನ್ನು ಸಲ್ಲಿಸಿದಾಗಲೇ ಪ್ರಮಾಣವಚನ ಸ್ವೀಕರಿಸಬಹುದು.

ವೇಲಾಚೇರಿ ಟಿವಿಕೆ ಶಾಸಕ ಆರ್. ಕುಮಾರ್ ಅವರು ಪ್ರಮಾಣಪತ್ರ ಸಲ್ಲಿಸಿದ ನಂತರ ಪ್ರಮಾಣ ವಚನ ಸ್ವೀಕರಿಸಲು ಕೀರ್ತನಾ ಮುಂದಾದಾಗ, ಪ್ರಧಾನ ಕಾರ್ಯದರ್ಶಿ ಕೆ. ಶ್ರೀನಿವಾಸನ್ ಅವರನ್ನು ತಡೆದು, ಪ್ರಮಾಣಪತ್ರದಲ್ಲಿ ಇನ್ನೊಬ್ಬ ವ್ಯಕ್ತಿಯ ಹೆಸರು ಇದೆ ಎಂದು ತೋರಿಸಿದರು. ಆರ್ ಕುಮಾರ್ ತಮ್ಮ ಪಕ್ಕದಲ್ಲಿ ಕುಳಿತಿದ್ದ ಪಕ್ಷದ ಸಹೋದ್ಯೋಗಿಯ ಪ್ರಮಾಣಪತ್ರವನ್ನು ತಪ್ಪಾಗಿ ಸಲ್ಲಿಸಿದ್ದಾರೆ ಮತ್ತು ಅದನ್ನು ಅವರು ಶ್ರೀನಿವಾಸನ್ ಅವರಿಗೆ ಹಸ್ತಾಂತರಿಸಿದ್ದಾರೆ ಎಂದು ನಂತರ ತಿಳಿದುಬಂದಿದೆ.

https://www.newsics.com/2026/05/12/a-young-woman-who-went-to-death-row-for-opposing-love/

 

TAGGED:Big shock for the only woman minister in CM Vijay's cabinet
Share This Article
Facebook Twitter Copy Link Print
Previous Article ಪ್ರೀತಿಗೆ ವಿರೋಧ ಮಾಡಿದ್ದಕ್ಕೆ ಸಾವಿನ ಮನೆ ಸೇರಿದ ಯುವತಿ
Next Article Kodi Mutt Swamiji ಮುಂದಿನ ದಿನಗಳಲ್ಲಿ ಜಲ ಕಂಟಕ ಎದುರಾಗಲಿದ್ದು, ಭೂಮಿ ತಲ್ಲಣಗೊಳ್ಳಲಿದೆ : ಕೋಡಿಶ್ರೀಗಳ ಸ್ಪೋಟಕ ಭವಿಷ್ಯ

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?