newsics.com/ನ್ಯೂಸಿಕ್ಸ್
ತುಮಕೂರು: ಸಾರ್ವಜನಿಕ ಕಾಮಗಾರಿಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವ ಇಂಜಿನಿಯರ್ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ.
https://youtube.com/shorts/QmBsVJxCxsg?si=FaYAZtjO3Xv8e1rn
33 ವರ್ಷದ ಮಂಜು ಪ್ರಸಾದ್ ಎಂಬವರು ಸಾವಿಗೆ ಶರಣಾಗಿದ್ದಾರೆ.ಮಂಜು ಪ್ರಸಾದ್ ಅವರು ಪಾವಗಡದ ಪಿಡಬ್ಲ್ಯೂಡಿ ಇಲಾಖೆಯಲ್ಲಿ ಸಹಾಯಕ ಕಾರ್ಯನಿರ್ವಹಣಾ ಇಂಜಿನಿಯರ್ (AEE) ಆಗಿ ಸೇವೆ ಸಲ್ಲಿಸುತ್ತಿದ್ದರು.
ಮೂಲತಃ ತುಮಕೂರು ನಗರದ ಸತ್ಯಮಂಗಲ ಪ್ರದೇಶದ ನಿವಾಸಿ. ಸುಮಾರು ಒಂದೂವರೆ ವರ್ಷದ ಹಿಂದೆ ಅವರ ತಾಯಿ ಅನಾರೋಗ್ಯದಿಂದ ನಿಧನರಾದರು. ಆ ಬಳಿಕ ಮಂಜು ಪ್ರಸಾದ್ ಅವರು ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಇದಕ್ಕಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರಂತೆ. ಈ ಹಿನ್ನೆಲೆ ಅವರ ನಡೆನುಡಿಗಳಲ್ಲೂ ಬದಲಾವಣೆ ಕಂಡುಬಂದಿತ್ತು ಎಂದು ಕುಟುಂಬಸ್ಥರು ಮಾಹಿತಿ ಹಂಚಿಕೊಂಡಿದ್ದಾರೆ.
https://www.newsics.com/2026/05/12/when-is-work-from-home-its-a-hot-topic-in-many-offices-right-now/