newsics.com/ನ್ಯೂಸಿಕ್ಸ್
ಹಿಟ್ಲರ್ ಕಲ್ಯಾಣ ಧಾರಾವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು (ಮೇ 13) ಸಂಜೆ ಗುನ್ನೂರು ಬಳಿಯ ಫಾರ್ಮ್ಹೌಸ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಇಂದು ಮುಂಜಾನೆ ಮನೆಯಲ್ಲಿದ್ದಾಗ ತೀವ್ರ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಅವರನ್ನು ಕುಮಾರಸ್ವಾಮಿ ಲೇಔಟ್ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಸಾರ್ವಜನಿಕರ ಮತ್ತು ಅಭಿಮಾನಿಗಳ ದರ್ಶನಕ್ಕಾಗಿ ಬೆಂಗಳೂರಿನ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಚಿತ್ರರಂಗದ ಗಣ್ಯರು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ತದನಂತರ ಪಾರ್ಥಿವ ಶರೀರವನ್ನು ಮೆರವಣಿಗೆಯ ಮೂಲಕ ಗುನ್ನೂರು ಗ್ರಾಮದ ಫಾರ್ಮ್ಹೌಸ್ಗೆ ಕೊಂಡೊಯ್ಯಲಾಗುವುದು. ಸಂಜೆ 4 ಗಂಟೆ ಸುಮಾರಿಗೆ ಕುಟುಂಬದ ಸಂಪ್ರದಾಯದಂತೆ ಅಂತ್ಯಕ್ರಿಯೆ ಜರುಗಲಿದೆ.
https://www.newsics.com/2026/05/13/tvk-chief-vijay-passes-trust-vote-test/