newsics.com/ನ್ಯೂಸಿಕ್ಸ್
ಕನ್ನಡ ಚಿತ್ರರಂಗಕ್ಕೆ ಬೆಳ್ಳಂ ಬೆಳಗ್ಗೆ ಬಿಗ್ ಶಾಕ್ ಒಂದು ಎದುರಾಗಿದೆ. ಕನ್ನಡ ಕಿರುತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ನಿಧನರಾಗಿದ್ದಾರೆ. ಹಿಟ್ಲರ್ ಕಲ್ಯಾಣ ಸೀರಿಯಲ್ ಮೂಲಕ ಮತ್ತಷ್ಟು ಫೇಮಸ್ ಆಗಿದ್ದ ನಟ 48ನೇ ಯಸ್ಸಿನಲ್ಲೇ ಕೊನೆಯುಸಿರೆಳೆದದ್ದು ಮಾತ್ರ ಶೋಚನೀಯ ಸಂಗತಿ. ಬೆಳ್ಳಿತೆರೆಯಲ್ಲಿ ದೊಡ್ಡ ಸಕ್ಸಸ್ ಸಿಗದಿದ್ರು ಕೂಡಾ ಕಿರುತೆರೆಯಲ್ಲಿ ನಟನಾಗಿ ನಿರ್ಮಾಪಕನಾಗಿ ಯಶಸ್ಸು ಕಂಡಿದ್ದಾರೆ. ಇದೀಗ ದಿಲೀಪ್ ರಾಜ್ ನಿಧನಕ್ಕೆ ಇಡೀ ಚಿತ್ರರಂಗವೇ ಬೆಚ್ಚಿಬಿದ್ದಿದೆ.
ದಿಲೀಪ್ ರಾಜ್ ಅವರು 2005ರಲ್ಲಿ ತೆರೆಗೆ ಬಂದ ‘ಬಾಯ್ಫ್ರೆಂಡ್’ ಚಿತ್ರದ ಮೂಲಕ ಅವರು ಬೆಳ್ಳಿ ಪರದೆಗೆ ಕಾಲಿಟ್ಟರು ಮತ್ತು ಇದರಲ್ಲಿ ಶಿವ ಹೆಸರಿನ ಪಾತ್ರವನ್ನು ಮಾಡಿದ್ದರು. ಕೇವಲ ಕಿರುತೆರೆಗೆ ಸೀಮಿತವಾಗದೆ, ಉತ್ತಮ ಸಿನಿಮಾಗಳ ಮೂಲಕವೂ ಪ್ರೇಕ್ಷಕರನ್ನು ತಲುಪಿದ್ದರು. ‘ಮಿಲನ’ ಚಿತ್ರದಲ್ಲಿ ಪುನೀತ್ ರಾಜ್ಕುಮಾರ್ ಅವರ ಸಹೋದರನಾಗಿ ನಟಿಸಿ ಅಪಾರ ಮೆಚ್ಚುಗೆ ಗಳಿಸಿದ್ದರು. ‘ಪರಿಚಯ’, ‘ನನ್ನಿ ಪಾರು’, ‘ಬಾರ್ಡರ್’, ಮತ್ತು ‘ಪಂಚಾಮೃತ’ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ.
ನಟನೆಯ ಜೊತೆಗೆ ಅವರು ಉತ್ತಮ ಡಬ್ಬಿಂಗ್ ಆರ್ಟಿಸ್ಟ್ ಆಗಿಯೂ ಗುರುತಿಸಿಕೊಂಡಿದ್ದರು. ದಿಲೀಪ್ ರಾಜ್ ಅವರಿಗೆ ಅತೀ ಹೆಚ್ಚು ಜನಪ್ರಿಯತೆ ತಂದುಕೊಟ್ಟಿದ್ದು ಕಿರುತೆರೆ. ‘ಜನನಿ’ ಧಾರಾವಾಹಿಯ ಮೂಲಕ ನಟನೆ ಆರಂಭಿಸಿದ ಅವರು ನಂತರ ನಿರ್ಮಾಪಕರಾಗಿ ಯಶಸ್ವಿಯಾದರು.
ಇನ್ನು ನಟ ದೀಲೀಪ್ ರಾಜ್ 1978ರ ಸೆಪ್ಟಂಬರ್ 2ರಂದು ಬೆಂಗಳೂರಿನಲ್ಲಿ ಜನಿಸಿದರು. ಹಾಗೆಯೇ ಕಾಲೇಜು ದಿನಗಳಲ್ಲಿಯೇ ನೃತ್ಯ ನಿರ್ದೇಶನದಲ್ಲಿ ಆಸಕ್ತಿ ಹೊಂದಿದ್ದ ಇವರು ಮುಂದೆ ನಟರಂಗ ತಂಡಗಳನ್ನು ಸೇರಿದರು. ಹಾಗೂ ನಟನೆಯಲ್ಲಿ ಮುಂದುವರಿದರು.
https://www.newsics.com/2026/05/13/neet-ug-question-paper-leak-one-suspect-arrested/