newsics.com/ನ್ಯೂಸಿಕ್ಸ್
ವಿಧಾನಸಭಾ ಚುನಾವಣೆ ನಡೆದ ಬೇರೆ ರಾಜ್ಯಗಳಲ್ಲಿ ನೂತನ ಸರ್ಕಾರ ರಚನೆಯಾಗಿದ್ದರೂ ಕೇರಳಂನಲ್ಲಿ ಮಾತ್ರ ಇನ್ನೂ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ಒಮ್ಮತದ ಅಭಿಪ್ರಾಯಕ್ಕೆ ಬರಲು ಕಾಂಗ್ರೆಸ್ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ರಾಹುಲ್ ಗಾಂಧಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಸಿಎಂ ಯಾರಾಗಲಿದ್ದಾರೆ ಎಂಬುದು ಅಂತಿಮವಾಗಿದೆ ಎನ್ನಲಾಗುತ್ತಿದೆ. ನಾಳೆ ಕೇರಳಂ ನೂತನ ಸಿಎಂ ಹೆಸರು ಘೋಷಣೆಯಾಗಲಿದೆ.
ಕೇರಳಂನಲ್ಲಿ ಕಾಂಗ್ರೆಸ್ ನಾಯಕರಾದ ಕೆ.ಸಿ ವೇಣುಗೋಪಾಲ್, ವಿರೋಧ ಪಕ್ಷದ ನಾಯಕ ವಿ.ಡಿ ಸತೀಶನ್ ಮತ್ತು ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಅವರ ಹೆಸರುಗಳು ಸಿಎಂ ರೇಸ್ನಲ್ಲಿದ್ದವು. ಕೇರಳದ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಭಾರೀ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಆದರೂ ಇನ್ನೂ ಸರ್ಕಾರ ರಚನೆಗೆ ಮುಹೂರ್ತ ನಿಗದಿಯಾಗಿಲ್ಲ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಬಗ್ಗೆ ಮಾಹಿತಿ ನೀಡಿದ್ದು, ನಾಳೆ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಘೋಷಿಸಿದ್ದಾರೆ. ಕೆ.ಸಿ. ವೇಣುಗೋಪಾಲ್ ಸಿಎಂ ಆಗುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ, ವಿ.ಡಿ. ಸತೀಶನ್ ಕೇರಳಂ ಮುಖ್ಯಮಂತ್ರಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲ.
https://www.newsics.com/2026/05/13/25-aiadmk-mlas-who-voted-for-tvk-dismissed-from-party-posts/