newsics.com/ನ್ಯೂಸಿಕ್ಸ್
ಬೆಂಗಳೂರು: ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ದರ್ಶನ್ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಇದೀಗ ನಟ ದರ್ಶನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಸಾಕ್ಷ್ಯಗಳ ವಿಚಾರಣೆ ತಡವಾಗುತ್ತಿದ್ದು, ತಮಗೆ ಜಾಮೀನು ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಸಹ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಕಳೆದ ಕೆಲ ದಿನಗಳಲ್ಲಿ ಈ ಸಂಬಂಧ ವಿಚಾರಣೆ ನಡೆದಿದ್ದು, ಜಾಮೀನು ಅರ್ಜಿ ಕುರಿತಂತೆ ನಾಳೆ ಸುಪ್ರೀಂಕೋರ್ಟ್ ಆದೇಶ ನೀಡುವ ಸಾಧ್ಯತೆ ಇದೆ.
https://youtube.com/shorts/KY0wlwc-Du0?si=-28u12qk1-aiTIHP
ಈ ಪ್ರಮುಖ ವಿಚಾರಣೆಯು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ನ್ಯಾಯಮೂರ್ತಿ ವಿಜಯ್ ಬಿಷ್ನೋಯಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠದಲ್ಲಿ ನಡೆಯಲಿದೆ.
ಈಗಾಗಲೇ ಹೈಕೋರ್ಟ್ನಲ್ಲಿ ಜಾಮೀನು ನಿರಾಕರಿಸಲ್ಪಟ್ಟಿರುವ ಹಿನ್ನೆಲೆಯಲ್ಲಿ, ದರ್ಶನ್ ಪರ ವಕೀಲರು ಸುಪ್ರೀಂ ಕೋರ್ಟ್ನಲ್ಲಿ ಈ ಬಾರಿ ಪ್ರಬಲ ವಾದ ಮಂಡಿಸಲು ಸಜ್ಜಾಗಿದ್ದಾರೆ.
ಹಿಂದಿನ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಿಂದ ಸಮಗ್ರ ವರದಿಯನ್ನು ಕೇಳಿತ್ತು. ಈ ವರದಿಯಲ್ಲಿ ಪ್ರಮುಖವಾಗಿ ಪ್ರಕರಣದ ಪ್ರಗತಿಯ ಬಗ್ಗೆ ಪ್ರಶ್ನಿಸಲಾಗಿತ್ತು.
ಕೇವಲ ವಿಚಾರಣೆಯ ಪ್ರಗತಿ ಮಾತ್ರವಲ್ಲದೆ, ಜೈಲಿನಲ್ಲಿ ದರ್ಶನ್ ಅವರಿಗೆ ಬೇಕಾದ ಮೂಲ ಸೌಲಭ್ಯಗಳನ್ನು ಒದಗಿಸಲಾಗಿದೆಯೇ ಎಂಬ ಬಗ್ಗೆಯೂ ನ್ಯಾಯಾಲಯ ಮಾಹಿತಿ ಬಯಸಿತ್ತು. ಈ ಎಲ್ಲಾ ಅಂಶಗಳನ್ನು ಒಳಗೊಂಡ ವರದಿಯು ನಾಳೆ ಪೀಠದ ಮುಂದೆ ಬರಲಿದ್ದು, ವರದಿಯಲ್ಲಿರುವ ಅಂಶಗಳು ದರ್ಶನ್ ಅವರ ಜಾಮೀನು ಅರ್ಜಿಯ ಮೇಲೆ ನೇರ ಪರಿಣಾಮ ಬೀರಲಿವೆ.