Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > High Court shocks husbands ಜೀವನಾಂಶ ಕೊಡದ ಗಂಡಂದಿರಿಗೆ ಹೈಕೋರ್ಟ್ ಶಾಕ್! ಪತ್ನಿಗೆ ಜೀವನಾಂಶ ಕೊಡದಿದ್ದರೆ ಜೈಲು ಗ್ಯಾರಂಟಿ
ಕರ್ನಾಟಕದೇಶಪ್ರಮುಖ

High Court shocks husbands ಜೀವನಾಂಶ ಕೊಡದ ಗಂಡಂದಿರಿಗೆ ಹೈಕೋರ್ಟ್ ಶಾಕ್! ಪತ್ನಿಗೆ ಜೀವನಾಂಶ ಕೊಡದಿದ್ದರೆ ಜೈಲು ಗ್ಯಾರಂಟಿ

Share
2 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ನ್ಯಾಯಾಲಯ ನಿಗದಿಪಡಿಸಿದ‌ ಜೀವಾನಾಂಶವನ್ನು ಪತ್ನಿಗೆ ಪಾವತಿ ಮಾಡದ ಪತಿ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಬಹುದಾಗಿದೆ ಎಂದು ಹೇಳಿ ಹೈಕೋರ್ಟ್ ಆದೇಶಿಸಿದೆ.

ನ್ಯಾಯಾಲಯದ ಆದೇಶ ಉಲ್ಲಂಘಿಸಿ ಪತ್ನಿಗೆ ಜೀವನಾಂಶ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಂಧನ ವಾರಂಟ್ ಜಾರಿ ಮಾಡಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸೈಲೇಶ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಾ.ಕೆ.ಮನ್ಮಥ ರಾವ್ ಅವರ ನ್ಯಾಯಪೀಠ ಈ ಆದೇಶ ನೀಡಿದೆ.

ಪ್ರಕರಣದಲ್ಲಿ‌ ನ್ಯಾಯಾಲಯ ನಿಗದಿಪಡಿಸಿದ ಜೀವನಾಂಶದ ಹಣವನ್ನು‌ ಪತ್ನಿಗೆ ಪಾವತಿಸಲು ವಿನಾಕಾರಣ ವಿಳಂಬ ಮಾಡುತ್ತಿದ್ದ ಅರ್ಜಿದಾರರ ನಡೆಗೆ ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ನ್ಯಾಯಾಲಯದ ಆದೇಶ ಪಾಲಿಸದೆ ಇರುವ ಪತಿಯ ವರ್ತನೆ ಉದ್ದೇಶಪೂರ್ವಕ ಅವಿಧೇಯತೆ ಎಂದ ಪೀಠ, ಅರ್ಜಿದಾರರ ವಿರುದ್ಧ ಮಂಗಳೂರು ಕೌಟುಂಬಿಕ ನ್ಯಾಯಾಲಯ ಹೊರಡಿಸಿದ್ದ ಬಂಧನ ವಾರಂಟ್‌ನ್ನು ಎತ್ತಿಹಿಡಿದಿದೆ.

ವಿಚಾರಣೆ ಬಾಕಿ, ಮಧ್ಯಂತರ ಆದೇಶಗಳ ನೆಪದಲ್ಲಿ ಜೀವನಾಂಶ ಪಾವತಿಗೆ ನ್ಯಾಯಾಲಯದ ಹೊರಡಿಸಿದ ಆದೇಶ‌ವನ್ನು ಪಾಲಿಸದೆ ಮುಂದೂಡಲು ಅನುಮತಿ ನೀಡಲಾಗುವುದಿಲ್ಲ. ವಿಚಾರಣಾ ನ್ಯಾಯಾಲಯದ ಆದೇಶ ಪಾಲಿಸದವರ ವಿರುದ್ಧ ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್ ಪಿಸಿ) ಸೆಕ್ಷನ್ 125(3) ಅಡಿಯಲ್ಲಿ ಬಂಧನ ವಾರಂಟ್ ಜಾರಿಗೆ ಅವಕಾಶವಿದೆ ಎಂದು ಪೀಠ ಹೇಳಿದೆ.

ಅರ್ಜಿದಾರ ಪತಿಗೆ ಪ್ರಕರಣ ಸಂಬಂಧ ಕಾರಣ ತಿಳಿಸಲು ಸೂಕ್ತ ಕಾಲಾವಕಾಶ ನೀಡಲಾಗಿದೆ. ಆದರೆ, ವಿಚಾರಣಾ ನ್ಯಾಯಾಲಯದ ಆದೇಶ ಪಾಲಿಸದೆ, ಜೀವನಾಂಶ ನೀಡದಿರುವುದಕ್ಕೆ ಸೂಕ್ತ ಕಾರಣ ನೀಡಲು ಅವರು ವಿಫಲವಾಗಿದ್ದಾರೆ. ಈ ಅಂಶ ಹಾಗೂ ಎಲ್ಲ ದಾಖಲೆಗಳನ್ನು ಪರಿಶೀಲಿಸಿದ ಕೌಟುಂಬಿಕ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದೆ. ಇದನ್ನು ಸಂವಿಧಾನದ ಪರಿಚ್ಚೇದ 21ರ‌ (ಜೀವಿಸುವ ಮತ್ತು ವೈಯಕ್ತಿಕ ಜೀವನದ ಹಕ್ಕು) ಉಲ್ಲಂಘನೆ ಎನ್ನಲಾಗದು ಎಂದು ಪೀಠ ಆದೇಶದಲ್ಲಿ ತಿಳಿಸಿದೆ.

ಏನಿದು ಪ್ರಕರಣದ?

ಮಂಗಳೂರು ಮೂಲದ ಸೈಲೇಶ್ ಕುಮಾರ್ ಮತ್ತು ನಿಶಾ ಎಸ್. ಕುಮಾರ್ 1998ರಲ್ಲಿ ವಿವಾಹವಾಗಿದ್ದರು. ದಂಪತಿಗೆ 2000ರಲ್ಲಿ ಗಂಡು ಮಗು ಜನಿಸಿತ್ತು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ನಿಶಾ ಅವರು 2014ರಲ್ಲಿ ಮಾಸಿಕ ಐದು‌ ಲಕ್ಷ ರು.‌ ಮಧ್ಯಂತರ ಜೀವನಾಂಶ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಮಾಸಿಕ 12,750 ರು.‌ ಪಾವತಿಸಲು‌ ಮಧ್ಯಂತರ ಆದೇಶ ನೀಡಿತ್ತು. ನಂತರ ಅರ್ಜಿ ಸಂಬಂಧ ವಿಚಾರಣೆ ನಡೆಸಿದ್ದ ಕೌಟುಂಬಿಕ ನ್ಯಾಯಾಲಯ, ಪತ್ನಿ ಮತ್ತು ಮಗನಿಗೆ ವಿವಿಧ ಅವಧಿಗಳಿಗೆ ಅನ್ವಯವಾಗುವಂತೆ ಮಾಸಿಕ 1.80 ಲಕ್ಷದಿಂದ 2.80 ಲಕ್ಷ ರು.ವರೆಗೆ ಜೀವನಾಂಶ ಪಾವತಿಸಲು ಹಾಗೂ ಬಾಕಿ ಮೊತ್ತಕ್ಕೆ ಶೇ.7.5ರಷ್ಟು ಬಡ್ಡಿಯೊಂದಿಗೆ ಪಾವತಿ ಮಾಡಬೇಕು ಎಂದು ನಿರ್ದೇಶನ ನೀಡಿತ್ತು.

ಈ ಆದೇಶ ಪ್ರಶ್ನಿಸಿ ಸೈಲೇಶ್ ಕುಮಾರ್ ಸಲ್ಲಿಸಿರುವ ಪುನರ್ ಪರಿಶೀಲನಾ ಅರ್ಜಿ ವಿಚಾರಣಾ ಹಂತದಲ್ಲಿದೆ. ಜೊತೆಗೆ, ಪತ್ನಿ ಕೌಟುಂಬಿಕ ನ್ಯಾಯಾಲಯದ ಆದೇಶ ಪಾಲಿಸಲು ಪತಿಗೆ ನಿರ್ದೇಶಿಸಲು ಕೋರಿ‌ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಾಲಯ ಶೇ.50ರಷ್ಟು ಪರಿಹಾರ ಠೇವಣಿ ಇಡಬೇಕು ಎಂದು ಸೂಚನೆ ನೀಡಿತ್ತು.

ಈ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಕೌಟುಂಬಿಕ ನ್ಯಾಯಾಲಯವು ಪತಿ ವಿರುದ್ಧ ಹೊರಡಿಸಿದ್ದ ಬಂಧನ ವಾರಂಟ್ ಅನ್ವಯ ಸೈಲೇಶ್ ಅವರನ್ನು ಬಂಧಿಸಿದ್ದ ಪೊಲೀಸರು ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನಂತರ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ನಂತರ ಹೈಕೋರ್ಟ್ ಮೆಟ್ಟಿಲೇರಿ,‌ ತನ್ನ ಮಾಸಿಕ ಆದಾಯ ಕೇವಲ 42,000 ‌ರು. ಆಗಿದೆ.‌ ಲಕ್ಷಾಂತರ/ ಕೋಟ್ಯಂತರ ರುಪಾಯಿ ಜೀವನಾಂಶ ನೀಡಲು ಸಾಧ್ಯವಿಲ್ಲ. ಹೊರಡಿಸಿರುವ ಬಂಧನ ವಾರಂಟ್ ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು‌ ಆಕ್ಷೇಪಿಸಿದ್ದರು.

Rice Price Hike ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಬಿಸಿ : ಅಕ್ಕಿ ದರವೂ ಭಾರಿ ಏರಿಕೆ

ಇನ್ಮುಂದೆ ತಮಿಳುನಾಡಿನಲ್ಲಿ ಮದ್ಯ ಖರೀದಿಗೆ 21 ವರ್ಷ ಕಡ್ಡಾಯ – ವಿಜಯ್ ಸರ್ಕಾರ ಆದೇಶ

TAGGED:High Court shocks husbands who don't pay maintenance! Jail guaranteed if wife doesn't pay maintenance
Share This Article
Facebook Twitter Copy Link Print
Previous Article ಇನ್ಮುಂದೆ ತಮಿಳುನಾಡಿನಲ್ಲಿ ಮದ್ಯ ಖರೀದಿಗೆ 21 ವರ್ಷ ಕಡ್ಡಾಯ – ವಿಜಯ್ ಸರ್ಕಾರ ಆದೇಶ
Next Article Ga*ngra*ped in sleeper bus ಸ್ಲೀಪರ್ ಬಸ್‌ನಲ್ಲೇ ಮಹಿಳೆ ಮೇಲೆ ಗ್ಯಾಂ*ಗ್ ರೇ*ಪ್! ಡ್ರೈವರ್, ಕಂಡಕ್ಟರ್ ಅರೆಸ್ಟ್, ವಿಡಿಯೋ ನೋಡಿ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?