newsics.com/ನ್ಯೂಸಿಕ್ಸ್
ದಾವಣಗೆರೆ: ಕಿರುಪ್ರವಾಸಕ್ಕೆ ತೆರಳಿದ್ದ 10 ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪೈಕಿ ಇಬ್ಬರು ನೀರು ಪಾಲಾಗಿದ್ದು, ಉಳಿದ 8 ಮಂದಿ ಸ್ಥಳೀಯರ ನೆರವಿನೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕು ಮರಬನಹಳ್ಳಿ ಗ್ರಾಮ ಸಮೀಪದ ಭದ್ರಾ ನಾಲೆಯಲ್ಲಿ ಗುರುವಾರ ಮಧ್ಯಾಹ್ನ ವರದಿಯಾಗಿದೆ.
ನಗರದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಐಎಸ್ ವಿಭಾಗದ ೮ನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ಮಾನಸಿ ಸಿಂಧೆ(22 ವರ್ಷ), ಹೆಚ್.ಎಸ್.ವಿವೇಕ್(22) ಮೃತಪಟ್ಟವರು.
ನಾಲ್ಕೈದು ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ 2 ತಿಂಗಳ ಇಂಟರ್ನಶಿಪ್ಮುಮುಗಿಸಿ ಅಂತಿಮ ಪರೀಕ್ಷೆಗೆ ತಯಾರಾಗುತ್ತಿದ್ದ ನಾಲ್ವರು ವಿದ್ಯಾರ್ಥಿಗಳು, ಆರು ವಿದ್ಯಾರ್ಥಿನಿಯರು ವಿಹಾರಕ್ಕೆಂದು ದ್ವಿಚಕ್ರ ವಾಹನಗಳಲ್ಲಿ ಮರಬನಹಳ್ಳಿ ಸಮೀಪದ ಭದ್ರಾ ನಾಲೆಯ ಬಳಿ ತೆರಳಿದ್ದರು.
ಬೇಸಿಗೆ ಬೆಳೆಗೆಂದು ಭದ್ರಾ ನಾಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಬಿಡಲಾಗಿದ್ದು, ನೀರಿನಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ ಕಾಲು ಜಾರಿ ನೀರಿನ ಸೆಳೆತಕ್ಕೆ ಸಿಲುಕಿದ್ದಾನೆ. ಆ ವಿದ್ಯಾರ್ಥಿ ರಕ್ಷಣೆಗೆ ಬಂದ ಇನ್ನೊಬ್ಬನೂ ನೀರಿನ ಸೆಳವಿಗೆ ಸಿಕ್ಕಿದ್ದಾನೆ. ಹೀಗೆ ಹತ್ತೂ ವಿದ್ಯಾರ್ಥಿಗಳು ನಾಲೆಯಲ್ಲಿ ಹರಿಯುತ್ತಿದ್ದ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ.
ವಿದ್ಯಾರ್ಥಿಗಳ ಕೂಗಾಟ ಕೇಳಿ ಸ್ಥಳೀಯ ರೈತರು, ಗ್ರಾಮಸ್ಥರು, ದಾರಿಹೋಕರು ನಾಲೆಗೆ ಹಾರಿ ನೀರಿನ ಸೆಳೆತಕ್ಕೆ ಸಿಲುಕಿದ್ದ 9 ಜನರನ್ನು ರಕ್ಷಣೆ ಮಾಡಿದ್ದು, ಈ ಪೈಕಿ ವಿವೇಕ್ ಸಾಕಷ್ಟು ನೀರು ಕುಡಿದಿದ್ದರಿಂದ ಪ್ರಥಮ ಚಿಕಿತ್ಸೆ ನೀಡಿ ಬದುಕಿಸುವ ಪ್ರಯತ್ನ ಮಾಡುವಷ್ಟರಲ್ಲಾಗಲೇ ಆತ ಪ್ರಾಣ ಬಿಟ್ಟಿದ್ದ. ನೀರಿನಲ್ಲಿ ಕೊಚ್ಚಿ ಹೋಗಿದ್ದ ಮಾನಸಿ ಸಿಂಧೆ ಪತ್ತೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ತೊಡಗಿದ್ದು, ಸ್ಥಳೀಯ ಈಜುಪಟುಗಳು ಕೂಡ ಕಾರ್ಯಾಚರಣೆಗೆ ಸಹಕರಿಸಿದ್ದಾರೆ.
ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
NEET-UG 2026 paper leak ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ: ಐವರು ಆರೋಪಿಗಳು ಸಿಬಿಐ ವಶಕ್ಕೆ