Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Bengal Bureaucracy ನಿವೃತ್ತ ಅಧಿಕಾರಿಗಳಿಗೆ ಗೇಟ್‌ಪಾಸ್: 243 ಹುದ್ದೆಗಳು ರದ್ದು : CM ಸುವೇಂದು ಮಾಸ್ಟರ್​ ಸ್ಟ್ರೋಕ್!
ದೇಶಪ್ರಮುಖ

Bengal Bureaucracy ನಿವೃತ್ತ ಅಧಿಕಾರಿಗಳಿಗೆ ಗೇಟ್‌ಪಾಸ್: 243 ಹುದ್ದೆಗಳು ರದ್ದು : CM ಸುವೇಂದು ಮಾಸ್ಟರ್​ ಸ್ಟ್ರೋಕ್!

Share
2 Min Read
SHARE

newsics.com/ನ್ಯೂಸಿಕ್ಸ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮೊಟ್ಟ ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣವಚನ  ಸ್ವೀಕರಿಸಿದ್ದಾರೆ. ಈಗ ಆಡಳಿತಾತ್ಮಕ ಕ್ರಾಂತಿ ಆರಂಭವಾಗಿದೆ. ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಬಂಗಾಳದ ಆಡಳಿತ ವ್ಯವಸ್ಥೆಯನ್ನು ರಿಬೂಟ್ ಮಾಡಲು ಕೇಂದ್ರ ಸರ್ಕಾರದ ಮೊರೆ ಹೋಗಿದ್ದಾರೆ.

https://youtube.com/shorts/qM17NYCF6QQ?si=P9kdXfY-X5l0cveO

ಕೇಂದ್ರದ ತರಬೇತಿ ಕಡ್ಡಾಯ: ಬದಲಾಗುತ್ತಿದೆ ಹಳೆಯ ಸಂಸ್ಕೃತಿ

ಮೇ 11 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಅದರಂತೆ, ರಾಜ್ಯದ ಐಎಎಸ್, ಐಪಿಎಸ್ ಮತ್ತು ರಾಜ್ಯ ಪೊಲೀಸ್ ಅಧಿಕಾರಿಗಳು ಇನ್ಮುಂದೆ ಕಡ್ಡಾಯವಾಗಿ ಕೇಂದ್ರ ಸರ್ಕಾರದ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಿದೆ. ಈ ಹಿಂದೆ ತೃಣಮೂಲ ಕಾಂಗ್ರೆಸ್ ಆಡಳಿತದಲ್ಲಿ ಅಧಿಕಾರಿಗಳಿಗೆ ಹೊರಗಿನ ಸಂಪರ್ಕ ಮತ್ತು ಕೇಂದ್ರದ ತರಬೇತಿಗಳು ಮರೀಚಿಕೆಯಾಗಿದ್ದವು. ಆದರೆ ಈಗ ಸುವೇಂದು ಅಧಿಕಾರಿಯವರು ಕೇಂದ್ರ ಮತ್ತು ರಾಜ್ಯದ ನಡುವಿನ ಆಡಳಿತಾತ್ಮಕ ಕಂದಕವನ್ನು ಮುಚ್ಚಲು ಈ ಹೆಜ್ಜೆ ಇಟ್ಟಿದ್ದಾರೆ.

ಆಯುಷ್ಮಾನ್ ಭಾರತದೊಂದಿಗೆ ಮೊದಲ ಹೆಜ್ಜೆ

ಮೇ 12 ರಿಂದಲೇ ಈ ಪ್ರಕ್ರಿಯೆ ಚಾಲನೆಗೊಂಡಿದೆ. ಪಶ್ಚಿಮ ಬಂಗಾಳದ ಆರೋಗ್ಯ ಇಲಾಖೆಯ ಎಂಟು ಉನ್ನತ ಅಧಿಕಾರಿಗಳು ನವದೆಹಲಿಯ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದಲ್ಲಿ (NHA) ತರಬೇತಿ ಪಡೆದಿದ್ದಾರೆ. ವಿಶೇಷವೆಂದರೆ, ಕೇಂದ್ರದ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭಾರತ್ ಯೋಜನೆಯನ್ನು ಬಂಗಾಳದಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಈ ಅಧಿಕಾರಿಗಳಿಗೆ ತಾಂತ್ರಿಕ ತರಬೇತಿ ನೀಡಲಾಗುತ್ತಿದೆ. ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆಯ ಅಧಿಕಾರಿಗಳೂ ಕೂಡ ಈಗ ದೆಹಲಿಯ ಹಾದಿ ಹಿಡಿದಿದ್ದಾರೆ.

ವೃತ್ತಿಜೀವನ ಸ್ಥಗಿತಗೊಂಡಿತ್ತು: ಅಧಿಕಾರಿಗಳ ಅಳಲು

ಹಿಂದಿನ ಸರ್ಕಾರದ ಅವಧಿಯಲ್ಲಿ ಬಂಗಾಳದ ಅಧಿಕಾರಿಗಳು ರಾಜ್ಯದ ಒಳಗೇ ಬಂಧಿಯಾಗಿದ್ದರು ಎಂಬ ಮಾತುಗಳು ಕೇಳಿಬರುತ್ತಿವೆ. ಯುವ ಐಎಎಸ್ ಅಧಿಕಾರಿಯೊಬ್ಬರು ಹೇಳುವಂತೆ, ನಮಗೆ ಉನ್ನತ ವ್ಯಾಸಂಗಕ್ಕೆ ಅಥವಾ ಕೇಂದ್ರದ ನಿಯೋಜನೆಗೆ ಹೋಗಲು ಅವಕಾಶವೇ ಇರಲಿಲ್ಲ. ಇದರಿಂದಾಗಿ ನಮ್ಮ ವೃತ್ತಿಜೀವನ ಕುಂಠಿತವಾಗಿತ್ತು. ಈಗ ಸುವೇಂದು ಸರ್ಕಾರವು ಅಧಿಕಾರಿಗಳಿಗೆ ದೆಹಲಿಯಲ್ಲಿ ಕೆಲಸ ಮಾಡಲು ಮತ್ತು ಕೇಂದ್ರ ಸಂಸ್ಥೆಗಳೊಂದಿಗೆ ಸಂವಹನ ನಡೆಸಲು ಮುಕ್ತ ಅವಕಾಶ ನೀಡುತ್ತಿರುವುದು ಬ್ಯೂರೋಕ್ರಸಿಯಲ್ಲಿ ಹೊಸ ಉತ್ಸಾಹ ತುಂಬಿದೆ.

ನಿವೃತ್ತ ಅಧಿಕಾರಿಗಳಿಗೆ ಗೇಟ್‌ಪಾಸ್: 243 ಹುದ್ದೆಗಳು ರದ್ದು!

ಆಡಳಿತ ಯಂತ್ರವನ್ನು ಶುದ್ಧೀಕರಿಸುವ ಉದ್ದೇಶದಿಂದ ಸುವೇಂದು ಸರ್ಕಾರವು ಮತ್ತೊಂದು ಕಠಿಣ ನಿರ್ಧಾರ ತೆಗೆದುಕೊಂಡಿದೆ. ನಿವೃತ್ತಿಯ ನಂತರವೂ ಸರ್ಕಾರದ ಪ್ರಭಾವಿ ಹುದ್ದೆಗಳಲ್ಲಿ ಅಂಟಿಕೊಂಡಿದ್ದ 243 ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ.

ನಿವೃತ್ತ ಅಧಿಕಾರಿಗಳ ಮರುನೇಮಕದಿಂದ ತಮಗೆ ಸಿಗಬೇಕಿದ್ದ ಬಡ್ತಿ ಮತ್ತು ಅವಕಾಶಗಳು ತಪ್ಪುತ್ತಿದ್ದವು ಎಂದು ಯುವ ಅಧಿಕಾರಿಗಳು ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

https://www.newsics.com/2026/05/16/human-skull-bones-found-in-bengaluru-lake/

TAGGED:Gatepass for retired officers: 243 posts cancelled: CM Suvendu's master stroke!
Share This Article
Facebook Twitter Copy Link Print
Previous Article ಬೆಂಗಳೂರಿನ ಕೆರೆಯಲ್ಲಿ ಮನುಷ್ಯನ ತಲೆಬುರುಡೆ, ಮೂಳೆಗಳು ಪತ್ತೆ
Next Article Vijay ಸಿನಿಮಾದ ಟೈಟಲ್ ಕಾರ್ಡ್ ವಿಷಯದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ವಿಜಯ್

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?