newsics.com/ನ್ಯೂಸಿಕ್ಸ್
ಬೆಂಗಳೂರಿನಲ್ಲಿ ಮೇ.10ರಂದು ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ವೇಳೆ ನಡೆದಿದ್ದ ಭದ್ರತಾ ಲೋಪದ ಪ್ರಕರಣದ ತನಿಖೆಗೆ NIA ಸೇರಿದಂತೆ ಕೇಂದ್ರೀಯ ತನಿಖಾ ಸಂಸ್ಥೆಗಳು ಇಳಿದಿವೆ. ತನಿಖೆಯಲ್ಲಿ ಮಹತ್ವದ ಸಂಗತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
https://youtube.com/shorts/qM17NYCF6QQ?si=P9kdXfY-X5l0cveO
ಈ ಪ್ರಕರಣವು ಯಾವುದೇ ಪ್ರಮುಖ ಉಗ್ರ ಸಂಘಟನೆಯ ಕೃತ್ಯವಲ್ಲ, ಬದಲಿಗೆ ಆಶ್ರಮದ ಮೇಲಿನ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಡೆದಿರುವ ಸಂಚು ಎಂಬ ಪ್ರಾಥಮಿಕ ಮಾಹಿತಿ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.
ಪ್ರಧಾನಿ ಮೋದಿ ಅವರ ಭೇಟಿಯನ್ನು ರದ್ದುಗೊಳಿಸಿ, ಆಶ್ರಮಕ್ಕೆ ಭದ್ರತಾ ಭೀತಿ ಸೃಷ್ಟಿಸುವುದೇ ಜಿಲೆಟಿನ್ ಇಟ್ಟವರ ಮುಖ್ಯ ಉದ್ದೇಶವಾಗಿತ್ತು.
ಪತ್ತೆಯಾದ ಜಿಲೆಟಿನ್ ಬಾಕ್ಸ್ನಲ್ಲಿ ಡಿಟೋನೇಟರ್ ಇರಲಿಲ್ಲ
ಆಶ್ರಮದ ವಿರೋಧಿಗಳೇ ಸಿಸಿಟಿವಿ ಕ್ಯಾಮೆರಾಗಳಿಗೆ ಸಿಗದಂತೆ ಜಿಲೆಟಿನ್ ಇಟ್ಟು ಹೋಗಿರುವ ಶಂಕೆ.
ಮೇ 10 ರಂದು ಆರ್ಟ್ ಆಫ್ ಲೀವಿಂಗ್ ಸಂಸ್ಥೆಯ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಜನ್ಮದಿನೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಆಶ್ರಮಕ್ಕೆ ಆಗಮಿಸಿದ್ದರು. ಆದರೆ ಪ್ರಧಾನಿ ಭೇಟಿಯ ಕೆಲವೇ ಗಂಟೆಗಳ ಮುನ್ನ ಆಶ್ರಮದ ಸಮೀಪ ಜಿಲೆಟಿನ್ ಪತ್ತೆಯಾಗಿದ್ದು ಇಡೀ ಪೊಲೀಸ್ ಇಲಾಖೆಯ ಭದ್ರತೆಯನ್ನೇ ಪ್ರಶ್ನಿಸುವಂತೆ ಮಾಡಿತ್ತು.
ವಿಧಿವಿಜ್ಞಾನ ಪ್ರಯೋಗಾಲಯದ ಪರಿಶೀಲನೆ ವೇಳೆ, ಒಂದು ವೇಳೆ ಈ ಜಿಲೆಟಿನ್ಗೆ ಬೆಂಕಿ ತಗುಲಿದ್ದರೂ ಇದು ಸ್ಫೋಟಗೊಳ್ಳುತ್ತಿರಲಿಲ್ಲ ಎಂದು ತಿಳಿದುಬಂದಿದೆ. ರವಿಶಂಕರ್ ಗುರೂಜಿ ಅವರ ಪ್ರಭಾವವನ್ನು ಕುಗ್ಗಿಸಲು ಮತ್ತು ಪ್ರಧಾನಿ ಆಶ್ರಮಕ್ಕೆ ಬರದಂತೆ ತಡೆಯಲು ಈ ಸಂಚು ರೂಪಿಸಲಾಗಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ಪೊಲೀಸರಿಗೆ ತಿಳಿದುಬಂದಿದೆ.
https://www.newsics.com/2026/05/16/oracle-cancels-job-offers-to-iit-and-nit-students/