Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾಧು-ಸಂತರ ವೇಷದಲ್ಲಿ ಬಂದು ಹೂವು ನೀಡಿ ಮಂಪರು ಬರಿಸಿ, ಹಣ, ಚಿನ್ನಾಭರಣ ಲೂಟಿ
ಕರ್ನಾಟಕಪ್ರಮುಖ

ಸಾಧು-ಸಂತರ ವೇಷದಲ್ಲಿ ಬಂದು ಹೂವು ನೀಡಿ ಮಂಪರು ಬರಿಸಿ, ಹಣ, ಚಿನ್ನಾಭರಣ ಲೂಟಿ

Share
1 Min Read
SHARE

newsics.com/ನ್ಯೂಸಿಕ್ಸ್

ರಾಯಚೂರು: ಮೆಡಿಕಲ್ ಶಾಪ್‌ನಲ್ಲಿದ್ದ ವ್ಯಕ್ತಿಗೆ ಸಾಧು ವೇಷಧಾರಿಯೋರ್ವ ಮೋಸ ಮಾಡಿ ಚಿನ್ನ ಮತ್ತು ಹಣ ದೋಚಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ನಡೆದಿದೆ.

https://youtube.com/shorts/qM17NYCF6QQ?si=P9kdXfY-X5l0cveO

ನಗರದಲ್ಲಿ ಸಾಧು ಸಂತರ ಸೋಗಿನಲ್ಲಿ ಬಂದು, ಹೂವುಗಳನ್ನು ನೀಡಿ, ಸಮ್ಮೋಹನ ಮಾಡುವ ಮೂಲಕ ಸಾರ್ವಜನಿಕರ ಹಣ ಮತ್ತು ಚಿನ್ನಾಭರಣಗಳನ್ನು ದೋಚುತ್ತಿರುವ ಗ್ಯಾಂಗ್ ನ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸರೆಯಾಗಿದೆ.

ಸಿಂಧನೂರು ನಗರದ ‘ಸಾಯಿ ಮೆಡಿಕಲ್ಸ್’ ಫಾರ್ಮಸಿಗೆ ಸಾಧುವೊಬ್ಬರು ಬಂದಿದ್ದು, ಬಿಸಿಲಿನ ಬೇಗೆಯಿಂದ ಬಳಲಿದ್ದು ಕುಡಿಯಲು ನೀರು ಕೇಳಿದ್ದಾರೆ. ಮೆಡಿಕಲ್ ಅಂಗಡಿಯ ಮಾಲೀಕರಾದ ವಿಷ್ಣುದತ್ತು ಮಾನವೀಯತೆ ಮತ್ತು ಸಾಧುಗಳ ಮೇಲಿನ ಭಕ್ತಿಯಿಂದ ತಕ್ಷಣವೇ ಫ್ರಿಡ್ಜ್‌ನಿಂದ ತಣ್ಣನೆಯ ನೀರನ್ನು ತಂದುಕೊಟ್ಟು ಸತ್ಕರಿಸಿದ್ದಾರೆ. ನೀರು ಕುಡಿದ ಸಾಧು, ಮಾಲೀಕರ ಭಕ್ತಿಗೆ ಮೆಚ್ಚುಗೆ ಸೂಚಿಸುವಂತೆ ನಟಿಸಿದ್ದಾನೆ. ನಿನಗೆ ಮತ್ತು ನಿನ್ನ ಮಕ್ಕಳಿಗೆ ಒಳಿತಾಗಲಿದೆ. ನಿಮ್ಮ ಸಂಕಷ್ಟಗಳೆಲ್ಲವೂ ದೂರಾಗಲಿವೆ ಎಂದು ಹರಸುತ್ತಾ ತನ್ನ ಕೈಯಲ್ಲಿದ್ದ ಪೊಟ್ಟಣ ಕೊಟ್ಟು, ಎರಡು ಹೂವುಗಳನ್ನು ವಿಷ್ಣುದತ್ತು ಅವರ ಕೈಗೆ ನೀಡಿದ್ದಾನೆ.

ಸಾಧು ನೀಡಿದ ಎರಡು ಹೂವುಗಳ ವಾಸನೆ ತಗುಲಿದ ಕೆಲವೇ ಕ್ಷಣಗಳಲ್ಲಿ ಮಾಲೀಕನಿಗೆ ಮಂಕು ಬಡಿದಂತಾಗಿದೆ. ತಮಗೆ ಅರಿವಿಲ್ಲದಂತೆಯೇ ಸಮ್ಮೋಹನಕ್ಕೆ ಒಳಗಾದ ಮಾಲೀಕ, ಖುದ್ದು ತಾವೇ ತಮ್ಮ ಜೇಬಿನಲ್ಲಿದ್ದ 10 ಸಾವಿರ ರೂಪಾಯಿ ನಗದು ಹಣ ಮತ್ತು ಕೈಯಲ್ಲಿದ್ದ ಬೆಲೆಬಾಳುವ ಬಂಗಾರದ ಉಂಗುರವನ್ನು ಬಿಚ್ಚಿ ಖದೀಮ ಸಾಧುವಿನ ಕೈಗೆ ಕೊಟ್ಟಿದ್ದಾರೆ. ಹಣ ಮತ್ತು ಚಿನ್ನವನ್ನು ಲೂಟಿ ಮಾಡಿದ ಸಾಧು, ಅಲ್ಲಿಂದ ಕ್ಷಣಾರ್ಧದಲ್ಲಿ ಎಸ್ಕೇಪ್ ಆಗಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮೆಡಿಕಲ್ ಶಾಪ್‌ ಸುತ್ತಮುತ್ತಲಿನ ಅಂಗಡಿಗಳ ಸಿಸಿಟಿವಿ ದೃಶ್ಯಗಳನ್ನು ವಶಕ್ಕೆ ಪಡೆದುಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

https://www.newsics.com/2026/05/16/cm-vijay-breaks-the-old-tradition-of-the-british-era/

TAGGED:and looted money and jewelry.showered them with praiseThey came dressed as saints and offered flowers
Share This Article
Facebook Twitter Copy Link Print
Previous Article White Towel Tradition ಬ್ರಿಟಿಷ್ ಕಾಲದ ಆ ಒಂದು ಹಳೆಯ ಪದ್ಧತಿಗೆ ಬ್ರೇಕ್ ಹಾಕಿದ ಸಿಎಂ ವಿಜಯ್
Next Article Bomb Threat ಮಲೇಷ್ಯಾದಿಂದ ಹೈದರಾಬಾದ್‌’ಗೆ ಬರುತ್ತಿದ್ದ ಏರ್‌ಏಷ್ಯಾ ವಿಮಾನಕ್ಕೆ ಬಾಂಬ್ ಬೆದರಿಕೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?