newsics.com/ನ್ಯೂಸಿಕ್ಸ್
ತಿರುವನಂತಪುರಂ: ಕೇರಳ ರಾಜಕಾರಣದಲ್ಲಿ ಇಂದು ಹೊಸದೊಂದು ಅಧ್ಯಾಯ ಆರಂಭವಾಗಿದೆ. ಹಿರಿಯ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.
ಅವರೊಂದಿಗೆ ಒಟ್ಟು 20 ಶಾಸಕರು ನೂತನ ಸಚಿವ ಸಂಪುಟದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.
ರಾಜ್ಯಪಾಲರಿಂದ ಪ್ರತಿಜ್ಞಾ ವಿಧಿ ಬೋಧನೆ ನಗರದ ಸೆಂಟ್ರಲ್ ಸ್ಟೇಡಿಯಂನಲ್ಲಿ ಏರ್ಪಡಿಸಲಾಗಿದ್ದ ಈ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲರಾದ ಆರ್.ವಿ. ಅರ್ಲೇಕರ್ ಅವರು ನೂತನ ಮುಖ್ಯಮಂತ್ರಿ ವಿ.ಡಿ. ಸತೀಶನ್ ಹಾಗೂ ಅವರ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಅತ್ಯಂತ ಸೌಹಾರ್ದಯುತ ವಾತಾವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಾವಿರಾರು ಬೆಂಬಲಿಗರು ಮತ್ತು ಸಾರ್ವಜನಿಕರು ಭಾಗವಹಿಸಿ ನೂತನ ಸರ್ಕಾರಕ್ಕೆ ಶುಭ ಹಾರೈಸಿದರು.
Health Tips ಮಾವಿನ ಹಣ್ಣಿನೊಂದಿಗೆ ಈ ಆಹಾರಗಳನ್ನು ಸೇವಿಸಬಾರದು : ಅಪಾಯ ತಪ್ಪಿದ್ದಲ್ಲ