Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dubare tragedy ದುಬಾರೆ ಸಾಕಾನೆ ಶಿಬಿರದಲ್ಲಿ ಆನೆಗಳ ಕಾಳಗ, ಮಹಿಳೆ ಸಾವು; 20 ಲಕ್ಷ ಪರಿಹಾರ, ಮೃತಳ ಕಣ್ಣು ದಾನ!
ಕರ್ನಾಟಕದೇಶಪ್ರಮುಖ

Dubare tragedy ದುಬಾರೆ ಸಾಕಾನೆ ಶಿಬಿರದಲ್ಲಿ ಆನೆಗಳ ಕಾಳಗ, ಮಹಿಳೆ ಸಾವು; 20 ಲಕ್ಷ ಪರಿಹಾರ, ಮೃತಳ ಕಣ್ಣು ದಾನ!

Share
2 Min Read
SHARE

newsics.com/ನ್ಯೂಸಿಕ್ಸ್

ಕೊಡಗು (ಮೇ 18): ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಭೀಕರ ದುರ್ಘಟನೆ ಇಡೀ ರಾಜ್ಯವನ್ನೇ ನಡುಗಿಸಿದೆ. ಎರಡು ಆನೆಗಳ ನಡುವಿನ ಕಾಳಗಕ್ಕೆ ಬಲಿಯಾದ ಚೆನ್ನೈ ಮೂಲದ ಪ್ರವಾಸಿ ಮಹಿಳೆ ತುಳಸಿ (ಜಿನ್ನು) ಅವರ ಸಾವು ಈಗ ಅರಣ್ಯ ಇಲಾಖೆಯ ಹತ್ತಾರು ಲೋಪದೋಷಗಳನ್ನು ಎತ್ತಿ ತೋರಿಸುತ್ತಿದೆ. ಈ ನಡುವೆ, ಪತ್ನಿಯನ್ನು ಕಳೆದುಕೊಂಡ ನೋವಿನಲ್ಲೂ ಪತಿ ಜೋಯೆಲ್ ಅವರು ಪತ್ನಿಯ ಕಣ್ಣುಗಳನ್ನು ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ದುರಂತದ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ ಪತಿ ಜೋಯೆಲ್, ‘ನನ್ನ ಪತ್ನಿಯನ್ನು ಉಳಿಸಿಕೊಳ್ಳಲು ನನಗೆ ಸಾಧ್ಯವಾಗಲಿಲ್ಲ. ಆನೆಯ ತುಳಿತಕ್ಕೆ ಆಕೆಯ ದೇಹ ನಜ್ಜುಗುಜ್ಜಾಗಿದೆ. ಹೀಗಾಗಿ ಎಲ್ಲ ಅಂಗಾಂಗಗಳನ್ನು ದಾನ ಮಾಡಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದ್ದರಿಂದ ಕನಿಷ್ಠ ಆಕೆಯ ಕಣ್ಣುಗಳನ್ನಾದರೂ ದಾನ ಮಾಡುತ್ತೇನೆ. ಆಕೆ ಬೇರೆಯವರ ಕಣ್ಣಿನ ಮೂಲಕ ಈ ಪ್ರಪಂಚವನ್ನು ನೋಡುತ್ತಾ ಬದುಕಿರಲಿ’ ಎಂದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ದುಬಾರೆಯಲ್ಲಿ ಪ್ರವಾಸಿಗರಿಗೆ ಕನಿಷ್ಠ ಸುರಕ್ಷತೆಯೂ ಇಲ್ಲ ಎಂದು ಜೋಯೆಲ್ ದೂರಿದ್ದಾರೆ. ‘ನನ್ನ ಪತ್ನಿ ಆನೆಗಳ ಕಾಳಗದ ನಡುವೆ ಸಿಲುಕಿ ಕೆಳಗೆ ಬಿದ್ದಾಗ ರಕ್ಷಿಸಲು ಯಾರೂ ಬರಲಿಲ್ಲ. ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಕೂಡ ಸಿಗಲಿಲ್ಲ. ಇಲಾಖೆಯ ಬೇಜವಾಬ್ದಾರಿಯೇ ನನ್ನ ಪತ್ನಿಯ ಸಾವಿಗೆ ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾವುತರು ಎಷ್ಟೇ ಪ್ರಯತ್ನಿಸಿದರೂ ಕಂಜನ್ ಆನೆಯನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಮೃತ ಮಹಿಳೆಯ ಕುಟುಂಬಕ್ಕೆ ಸರ್ಕಾರದಿಂದ 20 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಡಿಎಫ್ಒ ಅಭಿಷೇಕ್ ತಿಳಿಸಿದ್ದಾರೆ.

ದುರಂತಕ್ಕೆ ಮಾವುತರ ನಿರ್ಲಕ್ಷ್ಯವೇ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಂಜನ್ ಆನೆಯ ಅಧಿಕೃತ ಮಾವುತ ವಿಜಯ ಎಂಬುವವರು ಘಟನೆಯ ವೇಳೆ ಸ್ಥಳದಲ್ಲಿ ಇರಲಿಲ್ಲ ಎನ್ನಲಾಗಿದೆ. ಅವರ ಬದಲಿಗೆ ಆನೆಗಳನ್ನು ನಿಭಾಯಿಸಲು ಅನುಭವವಿಲ್ಲದ ‘ಹೊರಗುತ್ತಿಗೆ ನೌಕರ’ ಆನೆಯನ್ನು ಮುನ್ನಡೆಸುತ್ತಿದ್ದನು ಎಂಬ ಮಾಹಿತಿ ಹೊರಬಿದ್ದಿದೆ.

ಸಾಮಾನ್ಯವಾಗಿ ಆನೆಗಳು ತಮ್ಮ ಮಾವುತ ಮತ್ತು ಕವಾಡಿಗರ ಮಾತನ್ನು ಮಾತ್ರ ಕೇಳುತ್ತವೆ. ಆದರೆ, ಅಪರಿಚಿತ ವ್ಯಕ್ತಿ ಆನೆಯನ್ನು ನಡೆಸುತ್ತಿದ್ದರಿಂದ, ಆನೆ ರೊಚ್ಚಿಗೆದ್ದಾಗ ಅದನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ ಎಂದು ಇತರ ಮಾವುತರು ವಿಶ್ಲೇಷಿಸುತ್ತಿದ್ದಾರೆ.

TAGGED:deceased's eyes donated!Woman dies in elephant fight at Dubare livestock camp; Rs 20 lakh compensation
Share This Article
Facebook Twitter Copy Link Print
Previous Article 33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ; ಸಾವಿಗೆ ಕಾರಣ ಏನು?
Next Article Petrol, diesel price hike ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಶಾಕ್: ವಾರದಲ್ಲಿ 2ನೇ ಬಾರಿ ದರ ಹೆಚ್ಚಳ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?