Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕಾವೂರಿನ ಬಾವಿಗಳಲ್ಲಿ ಡೀಸೆಲ್ ಅಂಶ ಪತ್ತೆ
ಪ್ರಮುಖಕರ್ನಾಟಕ

ಕಾವೂರಿನ ಬಾವಿಗಳಲ್ಲಿ ಡೀಸೆಲ್ ಅಂಶ ಪತ್ತೆ

Share
2 Min Read
SHARE

ಮಂಗಳೂರಿನ ಕಾವೂರು ಭಾಗದ ಏರ್‌ಪೋರ್ಟ್ ರಸ್ತೆ ಬದಿ ಬಲಿಪಗುರಿ ಪ್ರದೇಶದ ಕೆಲವು ಬಾವಿಗಳಲ್ಲಿ ಡೀಸೆಲ್ ಅಂಶ ಪತ್ತೆಯಾಗಿದೆ. ನೀರು ದಟ್ಟ ಡೀಸೆಲ್ ವಾಸನೆಯಿಂದ ಕೂಡಿದ್ದು, ಕುಡಿಯಲು ಅಸಾಧ್ಯವಾಗಿದೆ.

65 ವರ್ಷಗಳ ಬಾವಿಯಲ್ಲಿ ಸಮಸ್ಯೆ ಉಲ್ಬಣ: ಬಲಿಪಗುರಿಯ ಲೀಲಾವತಿ ಎಂಬವರ ಮನೆಯ ಬಾವಿಗೆ 65 ವರ್ಷಗಳಾಗಿದೆ. ಇಲ್ಲಿಯವರೆಗೆ ಯಾವ ತೊಂದರೆಯೂ ಆಗಿರಲಿಲ್ಲ. ಆದರೆ ಕಳೆದ ನವೆಂಬರ್‌ನಿಂದ ಇಂತಹ ಸಮಸ್ಯೆಗಳಾಗಿದೆ. ಎರಡು ಸಲ 18ಸಾವಿರ ರೂ‌. ಖರ್ಚು ಮಾಡಿ ನೀರನ್ನು ಸಂಪೂರ್ಣ ಖಾಲಿ ಮಾಡಿ, ಶುಚಿಗೊಳಿಸಲಾಗಿತ್ತು. ಆದರೂ ಮತ್ತೆ ಅದೇ ಸಮಸ್ಯೆ ಉಂಟಾಗಿದೆ. ಈ ಬಾವಿಯ ನೀರನ್ನು ಇವರ ಕುಟುಂಬ ಮಾತ್ರವಲ್ಲದೇ, ಸುತ್ತಮುತ್ತಲಿನ ಕೆಲವು ಮನೆಯವರು ಈ ಬಾವಿಯ ನೀರನ್ನು ಅವಲಂಬಿಸುತ್ತಾರೆ‌. ಆದರೆ, ಇದೀಗ ಬಾವಿಯ ನೀರನ್ನೇ ಕುಡಿಯಲಾಗುತ್ತಿಲ್ಲ.

ಬಾವಿ ನೀರಿನಲ್ಲಿ ಡೀಸೆಲ್​ ಅಂಶ ಪತ್ತೆ: ಅದೇ ರೀತಿ ಸದಾಶಿವ ಎಂಬವರು 2022ರಲ್ಲಿ ಮನೆಕಟ್ಟಿದ್ದು, ಅಲ್ಲಿಂದ ಇಲ್ಲಿವರೆಗೆ ಯಾವ ತೊಂದರೆಯೂ ಇರಲಿಲ್ಲ. ಆದರೆ, ವಾರದ ಹಿಂದಿನಿಂದ ಅವರ ಬಾವಿಯ ನೀರಿನಲ್ಲೂ ಡೀಸೆಲ್ ಅಂಶ ಪತ್ತೆಯಾಗಿದೆ. ಕುಡಿಯಲು ಅಸಾಧ್ಯವಾಗಿದೆ‌. ಇವರ ಬಾವಿಯ ನೀರಿನಲ್ಲಿ ಮುಳುಗಿಸಿ ಬೆಂಕಿ ಹತ್ತಿಸಿದರೂ ಕಾಗದ ಹೊತ್ತಿ ಉರಿಯುತ್ತದೆ. ಅದೇ ರೀತಿ ರಮೇಶ್ ಶೆಟ್ಟಿ ಎಂಬವರ ಬಾವಿಯ ನೀರಿನಲ್ಲೂ ಡೀಸೆಲ್ ಅಂಶ ಪತ್ತೆಯಾಗಿದೆ.

ಬಾವಿಯಿಂದ ನೀರು ಸೇದಿದ ವೇಳೆಯೂ ಡೀಸೇಲ್ ವಾಸನೆಯ ನೀರು ಸಿಗುತ್ತಿದೆ ಎಂದು ಸ್ಥಳೀಯರಾದ ಲೀಲಾವತಿ ಅವರು ಅಳಲು ತೋಡಿಕೊಂಡರು. ಅಲ್ಲೇ ಮೇಲೆ ರಸ್ತೆ ಬದಿಯಿರುವ ಪೆಟ್ರೋಲ್ ಬಂಕ್‌ನ ಸೋರಿಕೆಯೇ ಎಂದು ವಿಚಾರಿಸಿದಾಗ ಪೆಟ್ರೋಲ್ ಬಂಕ್‌ನವರು ನಮ್ಮಲ್ಲಿ ಯಾವ ಸೋರಿಕೆಯೂ ಆಗುತ್ತಿಲ್ಲ. ಸೋರಿಕೆ ಆದಲ್ಲಿ ನಮಗೆ ಡೀಸೆಲ್ ಶಾರ್ಟೇಜ್ ಆಗುತ್ತಿತ್ತು. ಅಂತಹ ಯಾವ ಸಮಸ್ಯೆಯೂ ಆಗುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಆದ್ದರಿಂದ ಡಿಸೇಲ್ ಅಂಶ ಹೇಗೆ ಪತ್ತೆ ಆಗುತ್ತಿದೆ ಎಂಬುದೇ ತಿಳಿದು ಬರುತ್ತಿಲ್ಲ. ಆದರೆ ನೀರನ್ನು ತಪಾಸಣೆ ಮಾಡಿದಾಗ ಈ ಬಾವಿಗಳ ನೀರಿನಲ್ಲಿ ಶೇ.27 ಡೀಸೆಲ್ ಅಂಶ ಪತ್ತೆಯಾಗಿದೆ. ಜೊತೆಗೆ ತೈಲದೊಂದಿಗೆ ಗ್ರೀಸ್ ಅಂಶ ಪತ್ತೆಯಾಗಿರುವುದು ವರದಿಯಲ್ಲಿ ತಿಳಿದು ಬಂದಿದೆ.
ಕಾವೂರಿನ ಮೂರು ಮನೆಗಳ ಬಾವಿಗಳಲ್ಲಿ ಡೀಸೇಲ್ ಅಂಶ ಪತ್ತೆಯಾಗಿರುವ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಪರಿಶೀಲನೆ ನಡೆಸಿದೆ. ಕೆಪಿಟಿಸಿಎಲ್ ಸಬ್​​ಸ್ಟೇಶನ್ ಮುಂಭಾಗದಲ್ಲಿರುವ ಮೂರು ಮನೆಗಳಲ್ಲಿ ಈ ಸಮಸ್ಯೆ ಕಂಡುಬಂದಿದ್ದು, ಈ ಕುರಿತು ಮಂಗಳೂರು ಮಹಾನಗರಪಾಲಿಕೆಯ ಆರೋಗ್ಯ ಇಲಾಖೆಗೆ ದೂರು ನೀಡಿದ್ದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆಗೆ ವಿಷಯ ತಿಳಿಸಿದ ಹಿನ್ನೆಲೆಯಲ್ಲಿ ಡಿಎಚ್​ಒ ಕಚೇರಿಯಿಂದ ಕುಳೂರು ಆರೋಗ್ಯ ಕೇಂದ್ರದ ಸಿಬ್ಬಂದಿಯನ್ನು ಕಳುಹಿಸಿ ಬಾವಿಗಳ ನೀರಿನ ಮಾದರಿ ಸಂಗ್ರಹಿಸಲಾಗಿದೆ. ಪರಿಶೀಲನೆ ನಡೆಸಿದ ವೇಳೆ ಕುಡಿಯಲು ಯೋಗ್ಯವಲ್ಲ ಎಂಬ ವರದಿ ಬಂದಿದೆ. ಇದನ್ನು ಮಹಾನಗರಪಾಲಿಕೆಗೆ ನೀಡಿರುವುದಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟಿನಲ್ಲಿ ಈ ಸಮಸ್ಯೆಯ ಮೂಲ ಯಾವುದು ಎಂಬುದೇ ಯಕ್ಷಪ್ರಶ್ನೆಯಾಗಿದೆ. ತಕ್ಷಣ ಜಿಲ್ಲಾಡಳಿತ, ಜನಪ್ರತಿನಿಧಿಗಳು ಈ ಸಮಸ್ಯೆಗೆ ಪರಿಹಾರ ಒದಗಿಸಬೇಕಾಗಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇಡೀ ಜಗತ್ತೇ ಎದುರಾದ್ರೂ ನಾನು ನಿನ್ನ ಬಿಡಲ್ಲ: ನಟ ದರ್ಶನ ಪತ್ನಿ ವಿಜಯಲಕ್ಷ್ಮೀ ಪೋಸ್ಟ್

TAGGED:Paper burns even when immersed in water and set on fire: Diesel found in wells in Kavoor
Share This Article
Facebook Twitter Copy Link Print
Previous Article ಇಡೀ ಜಗತ್ತೇ ಎದುರಾದ್ರೂ ನಾನು ನಿನ್ನ ಬಿಡಲ್ಲ: ನಟ ದರ್ಶನ ಪತ್ನಿ ವಿಜಯಲಕ್ಷ್ಮೀ ಪೋಸ್ಟ್
Next Article ಪುತ್ರನ ಕಂಡು ದರ್ಶನ್ ಭಾವುಕ, ಪತ್ನಿಯೊಂದಿಗೂ ಚರ್ಚೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?