newsics.com/ನ್ಯೂಸಿಕ್ಸ್
ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನೂರೊಂದು ಬಾವಿ ಮತ್ತು ದೇವಾಲಯಗಳನ್ನು ಪತ್ತೆಹಚ್ಚಲು ಇಸ್ರೋ ಸಹಯೋಗದೊಂದಿಗೆ ಸ್ಯಾಟಲೈಟ್ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ.
ಗದಗ ಜಿಲ್ಲೆಯ ಐತಿಹಾಸಿಕ ಗ್ರಾಮ ಲಕ್ಕುಂಡಿ ಉತ್ಖನನಕ್ಕೆ ಸ್ಯಾಟಲೈಟ್ ತಂತ್ರಜ್ಞಾನ ಬಳಸುವ ಕುರಿತು ವಿಧಾನಸೌಧದಲ್ಲಿ ಸಭೆ ನಡೆಸಲಾಯ್ತು.
ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳು, ಇಸ್ರೋ ವಿಜ್ಞಾನಿಗಳು ಭಾಗಿಯಾಗಿದ್ದರು.
ಈ ಕುರಿತು ಮಾತನಾಡಿದ ಸಚಿವ ಹೆಚ್ ಕೆ ಪಾಟೀಲ್, ಲಕ್ಕುಂಡಿಯಲ್ಲಿ ನೂರೊಂದು ಬಾವಿ, ನೂರೊಂದು ದೇವಾಲಯಗಳ ಹುಡುಕಾಟ ನಡೆಯುತ್ತಿದೆ. ರಾಜ್ಯ ಸರ್ಕಾರ ಬಹಳ ಆಸಕ್ತಿ ವಹಿಸಿ ಉತ್ಖನನ ಮಾಡುತ್ತಿದೆ. ಲಕ್ಕುಂಡಿ ಗ್ರಾಮದಲ್ಲಿರುವ ಬಾವಿ, ದೇವಾಲಗಳ ಹುಡುಕಾಟಕ್ಕೆ ತಂತ್ರಜ್ಞಾನ ಬಳಕೆ ಮಾಡಬೇಕು. ಹಾಗಾಗಿ ಇಂದಿನ ಸಭೆಯಲ್ಲಿ ಇಸ್ರೋದ ತಜ್ಞರ ಸಲಹೆ ಪಡೆದಿದ್ದೇವೆ. ಇಸ್ರೋದ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಅವ್ರ ಜೊತೆ ಚರ್ಚೆ ಮಾಡಿದ್ದೇವೆ ಎಂದು ಸಚಿವರು ತಿಳಿಸಿದರು.
ದೇವಾಲಯ, ಬಾವಿಗಳ ಹುಡುಕಾಟಕ್ಕೆ ಸ್ಯಾಟಲೈಟ್ ತಂತ್ರಜ್ಞಾನ ಬಳಕೆ ಮಾಡುತ್ತೇವೆ. ಈಗ 38 ಬಾವಿ ದೇವಾಲಯ ಪತ್ತೆ ಹಚ್ಚಿದ್ದೇವೆ. ಇನ್ನು 62 ದೇವಾಲಯ ಹುಡುಕಬೇಕಿದೆ ಎಂದು ಮಾಧ್ಯಮಗಳಿಗೆ ಸಚಿವರು ಮಾಹಿತಿ ನೀಡಿದರು. ಲಕ್ಕುಂಡಿ ಉತ್ಖನನಕ್ಕೆ ಡಿಸೆಂಬರ್ ವರೆಗೆ ಗಡುವು ನೀಡಲಾಗಿದೆ.