newsics.com/ನ್ಯೂಸಿಕ್ಸ್
ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ನಿಂದ ಕೊಂಚ ಸಮಾಧಾನಕರ ಸುದ್ದಿ ಸಿಕ್ಕಿದೆ. ಚುನಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಮತ್ತೆ ಎರಡು ತಿಂಗಳ ಕಾಲಾವಕಾಶವನ್ನು ನೀಡಿ ಮಹತ್ವದ ಆದೇಶ ಹೊರಡಿಸಿದೆ.
ಬೆಂಗಳೂರಿನ ವಿಸ್ತರಣೆ ಮತ್ತು ಆಡಳಿತಾತ್ಮಕ ಸಿದ್ಧತೆಗಳ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಇನ್ನು ಹೆಚ್ಚಿನ ಸಮಯದ ಅಗತ್ಯವಿದೆ ಎಂದು ಸರ್ಕಾರ ಪ್ರತಿಪಾದಿಸಿತ್ತು. ಇದಕ್ಕಾಗಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ರಾಜ್ಯ ಸರ್ಕಾರ, ಪ್ರಸ್ತುತ ಡೆಡ್ಲೈನ್ನಿಂದ ಹೆಚ್ಚುವರಿಯಾಗಿ ಮೂರು ತಿಂಗಳ ಕಾಲಾವಕಾಶ ನೀಡಬೇಕು ಎಂದು ಸುಪ್ರೀಂ ಕೋರ್ಟ್ಗೆ ಮನವಿ ಮಾಡಿಕೊಂಡಿತ್ತು.
ಆದರೆ, ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರದ ಈ ಮೂರು ತಿಂಗಳ ಸುದೀರ್ಘ ಕಾಲಾವಕಾಶದ ವಾದವನ್ನು ಪುರಸ್ಕರಿಸಲಿಲ್ಲ. ಸರ್ಕಾರದ ಅರ್ಜಿಯನ್ನು ಭಾಗಶಃ ಅಂಗೀಕರಿಸಿದ ನ್ಯಾಯಾಲಯ, ಮೂರು ತಿಂಗಳ ಬದಲಾಗಿ ಎರಡು ತಿಂಗಳ ಕಾಲಾವಕಾಶ ನೀಡಲು ಸಮ್ಮತಿಸಿತು. ಈ ಮೂಲಕ ಆಗಸ್ಟ್ 31 ರ ಒಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಗಡುವು ವಿಧಿಸಿದೆ.
ಐಸ್ ಕ್ಯೂಬ್ನಿಂದ ಟಾಯ್ಲೆಟ್ ಕ್ಲೀನ್ : ವೈರಲ್ ಆಗ್ತಿದೆ ಐಸ್ ಕ್ಯೂಬ್ ಹ್ಯಾಕ್