Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > T G Nandeesh no more ಕಿರುತೆರೆ ಸಂಭಾಷಣೆಕಾರ, ಪ್ರತಿಭಾವಂತ ಬರಹಗಾರ ಟಿ.ಜಿ. ನಂದೀಶ್ ಇನ್ನಿಲ್ಲ
ಕರ್ನಾಟಕಪ್ರಮುಖಮನರಂಜನೆ

T G Nandeesh no more ಕಿರುತೆರೆ ಸಂಭಾಷಣೆಕಾರ, ಪ್ರತಿಭಾವಂತ ಬರಹಗಾರ ಟಿ.ಜಿ. ನಂದೀಶ್ ಇನ್ನಿಲ್ಲ

Share
3 Min Read
SHARE

newsics.com/ನ್ಯೂಸಿಕ್ಸ್

ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಸಂಭಾಷಣೆಕಾರರಾಗಿ ಗುರುತಿಸಿಕೊಂಡಿದ್ದ ಪ್ರತಿಭಾವಂತ ಬರಹಗಾರ ಟಿ.ಜಿ. ನಂದೀಶ್ (37) ಅವರು ಇಂದು (ಬುಧವಾರ) ಮಧ್ಯಾಹ್ನ ದಿಢೀರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸದಾ ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುತ್ತಾ, ಸಾಹಿತ್ಯ ಮತ್ತು ಸಿನಿಮಾ ಬರವಣಿಗೆಯಲ್ಲಿ ತೊಡಗಿದ್ದ ನಂದೀಶ್ ಅವರ ಅಕಾಲಿಕ ಸಾವು ಚಿತ್ರರಂಗಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ.

ನಟ ದಿಲೀಪ್‌ ರಾಜ್‌ ನಿಧನಕ್ಕೆ ಸಂತಾಪ ಸೂಚಿಸಿದ್ದ ಸಂಭಾಷಣೆಕಾರ ಟಿಜಿ ನಂದೀಶ್‌ ಅವರೇ ಈಗ ಹೇಳದೆ ಕೇಳದೆ ಹೋಗಿದ್ದಾರೆ. ಹೌದು, ಎಲ್ಲದರಲ್ಲೂ ತಮ್ಮದೇ ಛಾಪು ಮೂಡಿಸಿದ ದಿಲೀಪ್‌ ರಾಜ್‌ ಅವರು, ಹೀಗೆ ಏಕಾಏಕಿ ಮರೆಯಾದದ್ದು ಎಂದೆಂದಿಗೂ ಕಾಡಲಿದೆ‌ ಎಂದು ಹೇಳಿದ್ದ ಟಿಜಿ ನಂದೀಶ್‌ ಈಗ ಅವರೇ ಮರೆಯಾಗಿದ್ದಾರೆ.

ನಂದಿ ರೈಟ್ಸ್’ ಮೂಲಕ ಪ್ರಸಿದ್ಧಿ

ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾದ ಟಿ.ಜಿ. ನಂದೀಶ್ ಅವರು ಆಶಾ ಮತ್ತು ಗಂಗಾಧರಯ್ಯ ದಂಪತಿಯ ಪುತ್ರ. ಅವರು ಬರಹಗಾರರಾಗಿದ್ದರು, ಸಾಮಾಜಿಕ ಜಾಲತಾಣಗಳಲ್ಲಿ ಅವರು ಬರೆಯುತ್ತಿದ್ದ ‘ನಂದಿ ರೈಟ್ಸ್’ (Nandi Writes) ಎಂಬ ಬರಹಗಳು ನೆಟ್ಟಿಗರ ಮನ ಗೆದ್ದಿದ್ದವು. ಅತ್ಯಂತ ಆಳವಾದ ಮತ್ತು ತಾರ್ಕಿಕ ಆಲೋಚನೆಗಳ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಅವರು ದೊಡ್ಡ ಓದುಗ ಬಳಗವನ್ನು ಸಂಪಾದಿಸಿದ್ದರು.

ಬೆಂಗಳೂರಿಗೆ ಬಂದು ಚಿತ್ರರಂಗದಲ್ಲಿ ನೆಲೆಕಾಣಲು ಶ್ರಮಿಸುತ್ತಿದ್ದ ನಂದೀಶ್, ಪ್ರಸಿದ್ಧ ‘ಚಿತ್ತಾರ’ ಸಿನಿಮಾ ಮ್ಯಾಗಜೀನ್‌ನಲ್ಲಿ ಹಲವು ವರ್ಷಗಳ ಕಾಲ ಕೆಲಸ ನಿರ್ವಹಿಸಿದ್ದರು. ಈ ಸಂದರ್ಭದಲ್ಲಿ ಚಿತ್ರರಂಗದ ಪ್ರಮುಖ ನಟರು, ನಿರ್ದೇಶಕರು ಹಾಗೂ ತಂತ್ರಜ್ಞರೊಂದಿಗೆ ಅತ್ಯುತ್ತಮ ಒಡನಾಟ ಹೊಂದಿದ್ದರು.

2023ರಲ್ಲಿ ತೆರೆಕಂಡು ವಿಮರ್ಶಕರ ಪ್ರಶಂಸೆ ಗಳಿಸಿದ್ದ ‘ಒಂದಂಕೆ ಕಾಡು’ (Ondanke Kaadu) ಚಿತ್ರಕ್ಕೆ ನಂದೀಶ್ ಸಂಭಾಷಣೆ ಬರೆದಿದ್ದರು. ಇದರ ಜೊತೆಗೆ ಇತ್ತೀಚಿನ ಜನಪ್ರಿಯ ಸಿನಿಮಾ ‘ದೂರದರ್ಶನ’ ಸೇರಿದಂತೆ ಹಲವು ಸಿನಿಮಾಗಳಿಗೆ ಸಂಭಾಷಣೆಕಾರರಾಗಿ ಕೆಲಸ ಮಾಡಿ ಸೈ ಎನಿಸಿಕೊಂಡಿದ್ದರು.

ಕೇವಲ ಸಿನಿಮಾಗಳಷ್ಟೇ ಅಲ್ಲದೆ, ಕನ್ನಡದ ಕೆಲವು ಪ್ರಮುಖ ದೂರದರ್ಶನ ಧಾರಾವಾಹಿಗಳಿಗೂ (TV Serials) ಸಂಭಾಷಣೆ ಬರೆಯುವ ಮೂಲಕ ಕಿರುತೆರೆಯಲ್ಲೂ ಗುರುತಿಸಿಕೊಂಡಿದ್ದರು. ಇತ್ತೀಚೆಗೆ ಅವರು ಬೆಂಗಳೂರಿನಿಂದ ತಮ್ಮ ಹುಟ್ಟೂರಾದ ತೀರ್ಥಹಳ್ಳಿಗೆ ಮರಳಿ, ಅಲ್ಲಿಂದಲೇ ತಮ್ಮ ಸಿನಿಮಾ ಮತ್ತು ಲೇಖನ ಬರವಣಿಗೆಯ ಕೆಲಸಗಳನ್ನು ಮುಂದುವರಿಸಿದ್ದರು.

ಬೆಳಗ್ಗೆ ಪೋಸ್ಟ್.. ಮಧ್ಯಾಹ್ನ ಇಲ್ಲ

ಫೇಸ್‌ಬುಕ್‌ನಲ್ಲಿ ಸದಾ ಆಕ್ಟೀವ್ ಆಗಿರುತ್ತಿದ್ದ ನಂದೀಶ್ ಅವರು ಇಂದು (ಬುಧವಾರ) ಬೆಳಗ್ಗೆ ಕೂಡ ಎಂದಿನಂತೆ ತಮ್ಮ ಫೇಸ್‌ಬುಕ್‌ ಪುಟದಲ್ಲಿ ಖಾತೆಯಲ್ಲಿ ಒಂದು ಪೋಸ್ಟ್ ಹಂಚಿಕೊಂಡಿದ್ದರು. ಆದರೆ, ವಿಧಿಯ ಆಟ ಬೇರೆಯೇ ಆಗಿತ್ತು. ಮಧ್ಯಾಹ್ನದ ವೇಳೆಗೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಸಾಯುವ 10 ಗಂಟೆಗೂ ಮುನ್ನ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಹಾಕಿ, 4 ಗಂಟೆಗಳ ಹಿಂದೆ ಆಕ್ಟಿವ್‌ ಆಗಿದ್ದ ಟಿಜಿ ನಂದೀಶ್‌ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಿನಿಮಾ, ಧಾರಾವಾಹಿ‌ ಬರವಣಿಗೆಯಲ್ಲಿ ಸಿಕ್ಕಾಪಟ್ಟೆ ಆಕ್ಟಿವ್‌ ಆಗಿದ್ದ ಟಿಜಿ ನಂದೀಶ್‌ ಅವರು ನಿಧನರಾಗಿರೋದು ಎಲ್ಲರಿಗೂ ಶಾಕ್‌ ಕೊಟ್ಟಿದೆ.

ಗುರುವಾರ ಅಂತ್ಯಸಂಸ್ಕಾರ

ಮೃತರ ಅಂತಿಮ ಸಂಸ್ಕಾರದ ಕುರಿತು ಕುಟುಂಬದ ಮೂಲಗಳು ಮಾಹಿತಿ ನೀಡಿದ್ದು, ನಾಳೆ (ಮೇ 21, ಗುರುವಾರ) ಮಧ್ಯಾಹ್ನ 12:30ಕ್ಕೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಾಳೂರು ಗ್ರಾಮದಲ್ಲಿ ನಂದೀಶ್ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.

ಕುಟುಂಬಕ್ಕೆ ಆಧಾರವಾಗಿದ್ದ ನಂದೀಶ್‌

ಮೃತ ನಂದೀಶ್ ಅವರಿಗೆ ಪತ್ನಿ, ಇಬ್ಬರು ಪುಟ್ಟ ಮಕ್ಕಳಿದ್ದಾರೆ. ಇಡೀ ಕುಟುಂಬಕ್ಕೆ ಇವರೇ ಏಕೈಕ ಆಧಾರವಾಗಿದ್ದರು. “ನಂದೀಶ್‌ಗೆ ಯಾವುದೇ ರೀತಿಯ ಕೆಟ್ಟ ಅಭ್ಯಾಸಗಳು ಇರಲಿಲ್ಲ. ಅತ್ಯಂತ ಸರಳ ಹಾಗೂ ಸೃಜನಶೀಲ ವ್ಯಕ್ತಿಯಾಗಿದ್ದರು” ಎನ್ನುತ್ತಾರೆ ಅವರನ್ನು ಹತ್ತಿರದಿಂದ ಬಲ್ಲ ಸ್ನೇಹಿತರು ಹಾಗೂ ಚಿತ್ರರಂಗದ ಆಪ್ತರು.

ಪದೇಪದೇ ಓಆರ್‌ಎಸ್ ಕುಡಿಯುವ ಅಭ್ಯಾಸವಿದ್ಯಾ? ಹಾಗಿದ್ರೆ ಎಚ್ಚರ

TAGGED:Television talk show host and talented writer T.G. Nandish is no more.
Share This Article
Facebook Twitter Copy Link Print
Previous Article ASTRO ನಾಳೆ ವೃದ್ಧಿ, ಗಂಡ ಯೋಗ: ಈ ಐದು ರಾಶಿಯವರಿಗೆ ಭಾರೀ ಅದೃಷ್ಟ
Next Article What happened to TG Nandish? ನಿಜವಾಗ್ಲೂ ನಂದೀಶ್‌ಗೇನಾಗಿತ್ತು? ದಿಢೀರ್ ಸಾವಿಗೇನು ಕಾರಣ?

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?