ಮನೆಗೆ ಬಂದು ಬಾಲಕನಿಗೆ ಇಂಜೆಕ್ಷನ್​​ ಚುಚ್ಚಿ ಹೋದ ಮುಸುಕುಧಾರಿಗಳು

newsics.com/ನ್ಯೂಸಿಕ್ಸ್ ಮನೆಯಲ್ಲಿ ಆಟವಾಡಿಕೊಂಡಿದ್ದ ಬಾಲಕನಿಗೆ ಅಪರಿಚಿತ ಮುಸುಕುಧಾರಿಗಳು ಇಂಜೆಕ್ಷನ್ ಚುಚ್ಚಿ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ನೆಲಗುಡ್ಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಣಿಕಂಠ ಗಾಣಿಗೇರ (11) ಎಂಬ ಬಾಲಕನಿಗೆ ಇಂಜೆಕ್ಷನ್ ಚುಚ್ಚಲಾಗಿದ್ದು, ಇದು ಸಹಜವಾಗಿ ಗ್ರಾಮೀಣ ಭಾಗದಲ್ಲಿ ಆತಂಕ ಮನೆ ಮಾಡಿದೆ. ಸದ್ಯ ಬಾಲಕನನ್ನು ಹುಬ್ಬಳ್ಳಿ ಕಿಮ್ಸ್​​ಗೆ ದಾಖಲಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಡೆದಿದ್ದೇನು? ಬೈಕ್​​ನಲ್ಲಿ ಬಂದಿದ್ದ ಇಬ್ಬರು ಅಪರಿಚಿತ ಮುಸುಕುಧಾರಿಗಳು ಮಣಿಕಂಠ ಗಾಣಿಗೇರಗೆ ಇಂಜೆಕ್ಷನ್ ಚುಚ್ಚಿ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. … Continue reading ಮನೆಗೆ ಬಂದು ಬಾಲಕನಿಗೆ ಇಂಜೆಕ್ಷನ್​​ ಚುಚ್ಚಿ ಹೋದ ಮುಸುಕುಧಾರಿಗಳು