ತಕ್ಷಣ ಎಚ್ಚೆತ್ತ ಪ್ರಯಾಣಿಕರು ಮಹಿಳೆಯನ್ನು ಬಲವಂತವಾಗಿ ಹಿಂದಕ್ಕೆ ಎಳೆದು ಹಿಡಿದು, ಆ ಮಗುವಿನ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ.ಘಟನೆಯ ಮಾಹಿತಿ ಸಿಗುತ್ತಿದ್ದಂತೆ ಸಿನಿ ಪೋಸ್ಟ್ನ ಆರ್ಪಿಎಫ್ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದು ಹಳಿಗಳ ಉದ್ದಕ್ಕೂ ತೀವ್ರ ಶೋಧ ನಡೆಸಿದ್ದಾರೆ. ಸುಮಾರು ಒಂದು ಗಂಟೆಯ ಸತತ ಹುಡುಕಾಟದ ಬಳಿಕ, ಹಳಿಗಳ ಪಕ್ಕದಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಈ ಕರುಣಾಜನಕ ದೃಶ್ಯ ಸ್ಥಳದಲ್ಲಿದ್ದ ಪೊಲೀಸರು ಹಾಗೂ ಸಾರ್ವಜನಿಕರ ಕಣ್ಣಲ್ಲಿ ನೀರು ತರಿಸಿತು.ಆರೋಪಿ ಮಹಿಳೆಯನ್ನು ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯ ಮಜ್ಗಾಂವ್ ನಿವಾಸಿ ಮುದ್ರಾವತಿ ಗೋಪೆ ಅಲಿಯಾಸ್ ಹಸೀನಾ ಬೇಗಂ ಎಂದು ಗುರುತಿಸಲಾಗಿದೆ. ಈಕೆಯ ಪತಿ ಪಶ್ಚಿಮ ಬಂಗಾಳ ಮೂಲದ ಶಹಾಬುದ್ದೀನ್ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ, ಶಹಾಬುದ್ದೀನ್ ನಾಲ್ಕು ವರ್ಷಗಳ ಹಿಂದೆ ಮುದ್ರಾವತಿಯನ್ನು ಅಪಹರಿಸಿದ್ದ ಎನ್ನಲಾಗಿದ್ದು, ಈ ಸಂಬಂಧ ಮಜ್ಗಾಂವ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಇಬ್ಬರೂ ವಿವಾಹವಾಗಿ ಹೈದರಾಬಾದ್ನಲ್ಲಿ ವಾಸಿಸುತ್ತಿದ್ದರು. ಇತ್ತೀಚೆಗೆ ಯಾವುದೋ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ದಂಪತಿ, ಮಕ್ಕಳೊಂದಿಗೆ ತವರಿಗೆ ಮರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.