newsics.com/ನ್ಯೂಸಿಕ್ಸ್
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ದಳ ವಾಹನ ಸಂಚರಿಸಬೇಕಿದ್ದ ಮಾರ್ಗದ ಬಳಿ ಸ್ಫೋಟಕ ವಸ್ತುಗಳು ಪತ್ತೆಯಾದ ಪ್ರಕರಣದಲ್ಲಿ, ಕರ್ತವ್ಯ ಲೋಪದ ಆರೋಪದಡಿ ಒಬ್ಬ ಅಧಿಕಾರಿಯನ್ನು ಸೇರಿ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಮೇ 10ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಹೊರವಲಯದ ಆರ್ಟ್ ಆಫ್ ಲೀವಿಂಗ್ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅಂದು ಅವರು ತೆರಳುವ ಮಾರ್ಗದಲ್ಲಿ ಕಗ್ಗಲಿಪುರ ಬಳಿಯ ವಡೇರಹಳ್ಳಿ ಗೇಟ್ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದವು. ಈ ಘಟನೆ ಭಾರಿ ಸಂಚಲನ ಸೃಷ್ಟಿಸಿತ್ತು.
ಪ್ರಧಾನಿ ಮೋದಿ ಆಗಮನ ಹಿನ್ನೆಲೆಯಲ್ಲಿ ಭಾರಿ ಭದ್ರತೆ ಏರ್ಪಡಿಸಿದ್ದರೂ ಮಾರ್ಗದಲ್ಲಿ ಜಿಲೆಟಿನ್ ನಂತಹ ಸ್ಫೋಟಕಗಳು ಪತ್ತೆಯಾಗಿರುವ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲಿಸ್ ಇಲಾಖೆ ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚನೆ ಮಾಡಿತ್ತು. ಎನ್ ಐಎ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.
ಪೊಲೀಸ್ ಇಲಾಖೆ ಭದ್ರತಾ ವ್ಯವಸ್ಥೆಯಲ್ಲಿನ ಲೋಪಗಳ ಕುರಿತು ಆಂತರಿಕ ತನಿಖೆ ಆರಂಭಿಸಿತು. ಪ್ರಾಥಮಿಕ ತನಿಖೆಯಲ್ಲಿ, ಹೈ-ಸೆಕ್ಯುರಿಟಿ ವಲಯದಲ್ಲಿ ಕರ್ತವ್ಯ ನಿರ್ವಹಣೆಯಲ್ಲಿ ಆರು ಸಿಬ್ಬಂದಿ ನಿರ್ಲಕ್ಷ್ಯ ತೋರಿರುವುದು ಪತ್ತೆಯಾಗಿದ್ದು, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.
ಪಿಂಚಣಿ ಪಡೆಯಲು ವೃದ್ಧ ಅತ್ತೆಯನ್ನು ಬೆನ್ನಿಗೆ ಕಟ್ಟಿಕೊಂಡು 9 ಕಿ.ಮೀ. ಸಾಗಿದ ಸೊಸೆ : ವೈರಲ್ ವಿಡಿಯೋ ನೋಡಿ